ಜಮೀನು ಖರೀದಿಸಿ ಹಂಚುವಾಗಲೇ ಕೊಳವೆ ಬಾವಿ


Team Udayavani, Dec 15, 2018, 7:02 AM IST

63.jpg

ವಿಧಾನಸಭೆ: ಪರಿಶಿಷ್ಟ ಜಾತಿ, ಪಂಗಡದವರಿಗೆ ಖಾಸಗಿ ಜಮೀನು ಖರೀದಿಸಿ ಹಂಚಿಕೆ ಮಾಡುವ ಹೊತ್ತಿನಲ್ಲೇ ಗಂಗಾಕಲ್ಯಾಣ ಯೋಜನೆಯನ್ನೂ ಜೋಡಿಸಿ ಕೊಳವೆ ಬಾವಿ ಕೊರೆಸಿ ಕೃಷಿ ಚಟುವಟಿಕೆ ನಡೆಸಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದರು.

ಜೆಡಿಎಸ್‌ನ ಕೆ.ಅನ್ನದಾನಿ ಪ್ರಶ್ನೆಗೆ ಉತ್ತರಿಸಿದ ಅವರು, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು
ಪಂಗಡದವರಿಗೆ ಹಂಚಿಕೆ ಮಾಡುವ ಭೂಮಿಯನ್ನು ಕೃಷಿಗಷ್ಟೇ ಬಳಸಬೇಕು. ಆದ್ಯತೆ ಮೇರೆಗೆ ಭೂಮಿ ಹಂಚಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಅನ್ನದಾನಿ, ಉತ್ತರ ಕರ್ನಾಟಕ ಭಾಗದಲ್ಲಿ ತುಸು ಕಡಿಮೆ ಬೆಲೆಗೆ ಭೂಮಿ ಸಿಗುತ್ತದೆ. ಆದರೆ
ಹಳೇ ಮೈಸೂರು ಭಾಗದಲ್ಲಿ ಭೂಮಿ ಬೆಲೆ ದುಬಾರಿಯಾಗಿದೆ. ಅಲ್ಲದೇ ಹಾಗಾಗಿ ಭೂಮಿ ಖರೀದಿ ದರ ಹೆಚ್ಚಿಸಬೇಕು. ಕೇವಲ ಭೂಮಿ
ನೀಡಿದರಷ್ಟೇ ಸಾಲದು. ಕೊಳವೆ ಬಾವಿ ಕೊರೆಸಿಕೊಟ್ಟು, ಕೃಷಿ ಚಟುವಟಿಕೆ ನಡೆಸಲು ಪೂರಕ ಸೌಲಭ್ಯ ಕಲ್ಪಿಸಬೇಕು. ಆದರೆ ಆ ಕೆಲಸ ನಡೆಯುತ್ತಿಲ್ಲ. ಪರಿಶಿಷ್ಟ ಜಾತಿ, ಪಂಗಡದವರಿಗೆ ಬ್ಯಾಂಕ್‌ಗಳು ಸಾಲವನ್ನೇ ನೀಡುತ್ತಿಲ್ಲ. ಇದರಿಂದ ಅವರ ಆರ್ಥಿಕತೆ ಸುಧಾರಿಸದಂತಾಗಿದೆ ಎಂದು ಹೇಳಿದರು.

ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್‌ನ ಅಮರೇಗೌಡ ಬಯ್ನಾಪುರ, ಭೂ ಒಡೆತನ ಕೋರಿ ಸಲ್ಲಿಕೆಯಾದ ಅರ್ಜಿಗಳು ಹಲವು ವರ್ಷಗಳಿಂದ ವಿಲೇವಾರಿ ಯಾಗದೆ ಬಾಕಿ ಉಳಿದಿವೆ. ಈ ಅರ್ಜಿಗಳನ್ನು ಕಾಲ ಮಿತಿಯಲ್ಲಿ ವಿಲೇವಾರಿ ಮಾಡಿ ಭೂಮಿ ಹಂಚಿಕೆ
ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಕಾಲಮಿತಿ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್‌ ಖರ್ಗೆ, ಈಗಾಗಲೇ ಮಾರ್ಗಸೂಚಿ ದರ ಮೂರು ಪಟ್ಟು ಹೆಚ್ಚು ದರದಲ್ಲಿ ಭೂಮಿ ಖರೀದಿಗೆ ಅವಕಾಶವಿದೆ. ಅದಕ್ಕಿಂತ ಹೆಚ್ಚು ದರದಲ್ಲಿ ಖರೀದಿಸಬೇಕಾದರೆ ಸಂಬಂಧಪಟ್ಟವರಿಗೆ ಪ್ರಸ್ತಾವ ಕೂಡ ಸಲ್ಲಿಸಬಹುದು. ಹಂಚಿಕೆಯಾಗುವ ಭೂಮಿ 
ಫ‌ಲವತ್ತಾಗಿರಬೇಕಾಗುತ್ತದೆ. ಮಣ್ಣು ಪರೀಕ್ಷೆ ಇತರೆ ದೃಢೀಕರಣದ ಬಳಿಕವಷ್ಟೇ ಮಂಜೂರು ಮಾಡಲಾಗುವುದು. ತ್ವರಿತವಾಗಿ ಹಂಚಿಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಮಾತನಾಡಿ, ಇದೇ ಕಾರಣಕ್ಕೆ ನಾನು ಠೇವಣಿಯನ್ನು ವಾಣಿಜ್ಯ ಬ್ಯಾಂಕ್‌ಗೆ ಬದಲಾಗಿ ಸಹಕಾರಿ ಬ್ಯಾಂಕ್‌ ನಲ್ಲಿಡಿ ಎಂದು ಹೇಳುವುದು. ಸಬ್ಸಿಡಿ ಮೊತ್ತವನ್ನು ಸಹಕಾರ ಬ್ಯಾಂಕ್‌ಗೆ ರವಾನಿಸಿ ವ್ಯವಹರಿಸಲು ಅವಕಾಶವಿದೆ. ನಾನು ಕೋಲಾರದಲ್ಲಿ ಇದನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಎಲ್ಲ ಫ‌ಲಾನು ಭವಿಗಳಿಗೂ ಸೌಲಭ್ಯ ಕಲ್ಪಿಸಲಾಗಿದೆ. ವಾಣಿಜ್ಯ
ಬ್ಯಾಂಕ್‌ನ ಹಂಗಿಗೆ ಹೋಗಬೇಡಿ ಎಂದರು. ಕೊನೆಗೆ ಸಚಿವರು ಮಾತನಾಡಿ, ಭೂ ಒಡೆತನ ಮಂಜೂರಾದಾಗಲೇ ಗಂಗಕಲ್ಯಾಣ ಯೋಜನೆ ಯನ್ನೂ ಜೋಡಿಸಿ ಕೊಳವೆಬಾವಿ ಜತೆಗೆ ಇತರೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಹೆಚ್ಚುವರಿ ಸಿಎಸ್‌ ನೇತೃತ್ವದಲ್ಲಿ ಸಮಿತಿ
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕ್ರೈಸ್‌ ಎಲ್ಲ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಿಗೆ ಆಹಾರ, ಸಮವಸ್ತ್ರ, ಬ್ಯಾಗ್‌, ಪೀಠೊಪಕರಣ ಪೂರೈಕೆ ಪಾರದರ್ಶಕವಾಗಿರಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ
ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬಿಜೆಪಿಯ ಕುಮಾರ್‌ ಬಂಗಾರಪ್ಪ ಅವರ, ಹಾಸ್ಟೆಲ್‌ಗ‌ಳಿಗೆ ಆಹಾರ ಪೂರೈಕೆಗೆ ಕಡಿಮೆ ದರಕ್ಕೆ ಟೆಂಡರ್‌ ಪಡೆದು ಅಕ್ರಮ ಎಸಗಲಾಗುತ್ತಿದೆ ಎಂಬ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಕೆಲವೆಡೆ ಲೋಪ ಆಗಿರುವುದು
ಕಂಡುಬಂದಿದೆ. ಹಾಸ್ಟೆಲ್‌ಗ‌ಳಲ್ಲಿ ಟೆಂಡರ್‌ ಸೇರಿ ಅಲ್ಲಿನ ಪರಿಸ್ಥಿತಿ ಸುಧಾರಣೆಗೆ ಸಲಹೆ ನೀಡುವಂತೆ ಎಲ್ಲ ಶಾಸಕರಿಗೆ ಪತ್ರ ಬರೆದಿದ್ದೆ. 8 ಶಾಸಕರು ಮಾತ್ರ ಸಲಹೆ ಕೊಟ್ಟಿದ್ದಾರೆ. ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ವಿಧಾನಪರಿಷತ್‌ ಸದಸ್ಯರ ಜತೆಯೂ ಚರ್ಚೆ ನಡೆಸಿದ್ದೇನೆ. ಒಟ್ಟಾರೆ, ಸಮಗ್ರ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ ಪ್ರಕರಣದಲ್ಲಿ ಟೆಂಡರ್‌ಗೆ ಅಲ್ಲಿನ ಜಿಲ್ಲಾಧಿಕಾರಿಗಳು ತಡೆ ನೀಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.