ಮರೆಯಾದ ‘ಕೋಟಿ’ : ನಿರ್ಮಾಪಕ ರಾಮು ಹುಟ್ಟೂರಲ್ಲೇ ಅಂತ್ಯ ಸಂಸ್ಕಾರ
Team Udayavani, Apr 27, 2021, 3:25 PM IST
ತುಮಕೂರು : ನಟಿ ಮಾಲಾಶ್ರೀ ಪತಿ ಹಾಗೂ ನಿರ್ಮಾಪಕ ರಾಮು ಅವರು ನಿನ್ನೆ (ಸೋಮವಾರ) ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದು, ಇಂದು(ಮಂಗಳವಾರ ಏಪ್ರಿಲ್ 27) ಅವರ ಅಂತ್ಯ ಸಂಸ್ಕಾರವನ್ನು ಕುಣಿಗಲ್ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಕೋವಿಡ್ ಮಾರ್ಗ ಸೂಚಿ ಅನ್ವಯದಂತೆ ನಡೆಸಲಾಯಿತು.
ಕೋವಿಡ್ ಸೋಂಕು ತಗುಲಿದ್ದ ರಾಮು ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದರು. ರಾಮು ಅವರ ಪಾರ್ಥೀವ ಶರೀರವನ್ನ ಹುಟ್ಟೂರಿಗೆ ಕೊಂಡೊಯ್ಯಲಾಗಿದ್ದು, ಅಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಈ ವೇಳೆ ರಾಮು ಪತ್ನಿ ಮಾಲಾಶ್ರೀ ಹಾಗೂ ಕುಟುಂಬದ ಕೆಲವರು ಮಾತ್ರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದರು.
ನಿರ್ಮಾಪಕ ಕೋಟಿ ರಾಮು ಅವರು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ