ಕರಿ ಹಬ್ಬದಲ್ಲಿ ಹೋರಿ ಇರಿತಕ್ಕೆ ವ್ಯಕ್ತಿ ಬಲಿ
Team Udayavani, Jun 29, 2019, 3:00 AM IST
ವಿಜಯಪುರ: ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಜರುಗಿದ್ದ ಕರಿ ಹಬ್ಬದಲ್ಲಿ ಹೋರಿ ಇರಿತದಿಂದ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಶುಕ್ರವಾರ ಮೃತಪಟ್ಟಿದ್ದಾನೆ. ತಮ್ಮ ಕ್ಷೇತ್ರದಲ್ಲಿ ನಡೆದಿರುವ ಈ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಗೃಹ ಸಚಿವ ಎಂ.ಬಿ. ಪಾಟೀಲ ಸೂಚನೆ ನೀಡಿದ್ದಾರೆ.
ಕಾಖಂಡಕಿ ಗ್ರಾಮದಲ್ಲಿ ಕಾರಹುಣ್ಣಿಮೆ ನಂತರ ಏಳನೇ ದಿನ ಉತ್ತರ ಕರ್ನಾಟಕದಲ್ಲೇ ಅತ್ಯಂತ ಜನಪ್ರಿಯ ಕರಿ ಹಬ್ಬ ನಡೆಯುತ್ತದೆ. ಈ ಬಾರಿ ಜೂ.23ರಂದು ಸಾಂಪ್ರದಾಯಿಕ ಹೋರಿ ಬೆದರಿಸುವ ಕರಿ ಹಬ್ಬ ಜರುಗಿತ್ತು. ಈ ಸಂದರ್ಭ 10-15 ಜನರು ಎರಡು ಹಗ್ಗ ಕಟ್ಟಿ ಹಿಡಿದ್ದರೂ ಹೋರಿಯೊಂದು ಕಾಖಂಡಕಿ ಗ್ರಾಮದ ಬಲಭೀಮ ಮೈಲಾರಿ ಪೋಳ (40) ಎಂಬ ವ್ಯಕ್ತಿಯನ್ನು ಕೊಂಬಿನಿಂದ ಎತ್ತಿ ನೆಲಕ್ಕೆ ಎಸೆದಿತ್ತು. ತೀವ್ರ ಗಾಯಗೊಂಡಿದ್ದ ಬಲಭೀಮ ಚಿಕಿತ್ಸೆ ಫಲಿಸದೇ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಕಾಖಂಡಕಿ ಕರಿ ಹಬ್ಬ ನೋಡಲು ನೆರೆಯ ಮಹಾರಾಷ್ಟ್ರ, ತೆಲಂಗಾಣದ ರಾಜ್ಯಗಳಿಂದಲೂ ಸಾವಿರಾರು ಜನ ಬರುತ್ತಾರೆ. ಈ ಸಂದರ್ಭದಲ್ಲಿ ರೊಚ್ಚಿಗೆದ್ದು ಓಡುವ ಹೋರಿ, ಎತ್ತುಗಳು ಕರಿ ವೀಕ್ಷಣೆಗೆ ಸೇರಿದ ಪ್ರೇಕ್ಷಕರು ಹಾಗೂ ಸಾರ್ವಜನಿಕರ ಮೇಲೆ ಎರಗಿ ಈ ಹಿಂದೆ ಕೂಡ ಹಲವು ಬಾರಿ ಜನರನ್ನು ಗಾಯಗೊಳಿಸಿದ ಉದಾಹರಣೆಗಳಿವೆ.
ಕಾಖಂಡಕಿ ಗ್ರಾಮದಲ್ಲಿ ನಡೆಯುವ ಕಾರಹುಣ್ಣಿಮೆಯ ಕರಿ ಹಬ್ಬ ಸಾಂಪ್ರದಾಯಿಕ ಹಿನ್ನೆಲೆ ಹೊಂದಿದೆ. ಈ ವರ್ಷ ಸಂಭವಿಸಿರುವ ದುರಂತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾಗಿ ಮಾಹಿತಿ ಬಂದಿದೆ, ಪೊಲೀಸ್ ದೂರು ದಾಖಲಾಗಿಲ್ಲ. ಆದರೂ ಈ ಕುರಿತು ಬಬಲೇಶ್ವರ ಪೊಲೀಸರಿಗೆ ತನಿಖೆ ನಡೆಸುವಂತೆ ಸೂಚಿಸಿದ್ದೇನೆ.
-ಎಂ.ಬಿ. ಪಾಟೀಲ, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ