ಸಾಮೂಹಿಕ ವಿವಾಹದಲ್ಲಿ ಕುಂವೀ ಪುತ್ರನ ವಿವಾಹ
Team Udayavani, Jun 5, 2019, 3:00 AM IST
ಚಿತ್ರದುರ್ಗ: ಇಲ್ಲಿನ ಮುರುಘಾ ಮಠದಲ್ಲಿ ಬುಧವಾರ ನಡೆಯಲಿರುವ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ತಮ್ಮ ಮೂರನೇ ಪುತ್ರನ ಅಂತರ್ಜಾತೀಯ ವಿವಾಹ ನಡೆಯಲಿದ್ದು, ಇದೇ ಸಂದರ್ಭ ತಮ್ಮ “ಜೈ ಭಜರಂಗಬಲಿ’ ಕಾದಂಬರಿಯೂ ಬಿಡುಗಡೆಯಾಗಲಿದೆ ಎಂದು ಲೇಖಕ ಕುಂ. ವೀರಭದ್ರಪ್ಪ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ತಿಂಗಳು ಐದನೇ ತಾರೀಖೀನಂದು ಮುರುಘಾ ಮಠದಲ್ಲಿ ನಡೆಯುವ ಸಾಮೂಹಿಕ ವಿವಾಹದ ಬಗ್ಗೆ ನನಗೆ ಅತೀವ ಗೌರವವಿದೆ. ಹಾಗಾಗಿ ನನ್ನ ಮಗ ಕೂಡ ಸಾಮೂಹಿಕ ವಿವಾಹದಲ್ಲೇ ಮದುವೆಯಾಗುತ್ತಿದ್ದಾನೆ. ನಾನು ರಾಹುಕಾಲದಲ್ಲಿ ಮದುವೆಯಾಗಿದ್ದು, ನಮ್ಮದು ಮೂಢನಂಬಿಕೆ ವಿರುದ್ಧ ಹೋರಾಡುವ ಕುಟುಂಬ ಎಂದರು.
ಕಹಿ ಸತ್ಯಗಳನ್ನು ಸಮಾಜದ ಮುಂದಿಡುವ ಸಲುವಾಗಿ ಬರೆದಿರುವ “ಜೈ ಭಜರಂಗಬಲಿ’ ಕಾದಂಬರಿಯನ್ನು ಡಾ| ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಗೊಳಿಸುವರು. ನಿರಂಕುಶ ಶಕ್ತಿಗಳ ಹಾಗೂ ವಿಜಯನಗರ ಸಾಮ್ರಾಜ್ಯದ ವಿರುದ್ಧ ಹೋರಾಡಿದ ನೆಲ ಚಿತ್ರದುರ್ಗವಾಗಿದೆ. ಅದಕ್ಕಾಗಿ ಪುತ್ರನ ವಿವಾಹ ಹಾಗೂ ಕಾದಂಬರಿ ಬಿಡುಗಡೆಗೆ ಚಿತ್ರದುರ್ಗವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?