ಪ್ರತ್ಯೇಕ ಕರ್ನಾಟಕ ಕೂಗಿಗೆ ಮಾಧ್ಯಮಗಳೇ ಕಾರಣ: ಎಚ್ ಡಿಕೆ
Team Udayavani, Jul 30, 2018, 11:11 AM IST
ಬೆಂಗಳೂರು: ಪ್ರತ್ಯೇಕ ಕರ್ನಾಟಕ ಕೂಗಿಗೆ ಮಾಧ್ಯಮಗಳೇ ಕಾರಣ. ಉತ್ತರ ಕರ್ನಾಟಕ ವಿಷಯದಲ್ಲಿ ಬೆಂಕಿ(ದೃಶ್ಯ ಮಾಧ್ಯಮ) ಹಚ್ಚುತ್ತಿರುವವರು ನೀವು. ಪ್ರತಿಯೊಂದು ವಿಷಯದಲ್ಲಿ ತಪ್ಪೇ ಕಾಣಿಸುತ್ತಾ ಹೋದರೆ..ರಾಜ್ಯ ಉದ್ಧಾರವಾಗಬೇಕೋ ಅಥವಾ ರಾಜ್ಯ ಹಾಳಾಗಬೇಕೋ ಅದು ನಿಮಗೆ ಸೇರಿದ್ದು ಎಂಬುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತ್ಯೇಕ ಉತ್ತರ ಕರ್ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ , ಅವರು ನಾನು ಅಖಂಡ ಕರ್ನಾಟಕ ಎಂಬುದನ್ನು ಮೊದಲೇ ಹೇಳಿದ್ದೇನೆ. ಆದರೆ ಪ್ರತ್ಯೇಕ ಉತ್ತರ ಕರ್ನಾಟಕ ಕೂಗಿಗೆ ಕುಮ್ಮಕ್ಕು ಕೊಟ್ಟವರು ನೀವೇ(ಮಾಧ್ಯಮ) ಎಂದು ಆರೋಪಿಸಿದರು.
ಉತ್ತರ ಕರ್ನಾಟಕದ ಬಗ್ಗೆ ನಾನು ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೆ ಮಾಧ್ಯಮಗಳಲ್ಲಿ ಇದರ ಬಗ್ಗೆಯೇ ಪದೇ, ಪದೇ ಚರ್ಚೆ ನಡೆಸಲಾಗುತ್ತಿದೆ ಎಂದು ದೂರಿದರು.
ಪ್ರತ್ಯೇಕ ರಾಜ್ಯ ಬೇಕಂತೆ, ಹೋಗಿ ಮಾಡಿಕೊಳ್ಳಿ..ಎಲ್ಲಿಂದ ತರುತ್ತೀರಿ ಹಣ ಎಂದು ಬಹಿರಂಗವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?