ವಿಧಾನಸಭೆಯಲ್ಲಿ ಚೊಚ್ಚಲ ಭಾಷಣ ಮಾಡಿದ ಹೊಸ ಶಾಸಕರು


Team Udayavani, Jul 18, 2023, 6:55 AM IST

ವಿಧಾನಸಭೆಯಲ್ಲಿ ಚೊಚ್ಚಲ ಭಾಷಣ ಮಾಡಿದ ಹೊಸ ಶಾಸಕರು

ವಿಧಾನಸಭೆ: ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಬಜೆಟ್‌ ಮೇಲೆ ಚರ್ಚಿಸಲು ಸೋಮವಾರ ಸ್ಪೀಕರ್‌ ಖಾದರ್‌ ಅವಕಾಶ ಮಾಡಿಕೊಟ್ಟರು. ಕೆಲವರು ಹೇಳಬೇಕಾದ ವಿಷಯವನ್ನು ಅತಿ ಕಡಿಮೆ ಸಮಯದಲ್ಲಿ ಹೇಳಿ ಮುಗಿಸಿದ್ದು ವಿಶೇಷವಾಗಿತ್ತು.

ಪ್ರಥಮ ಬಾರಿಗೆ ಶಾಸಕರಾದವರಿಗೆ ಸದನದಲ್ಲಿ ಪಾಲ್ಗೊಳ್ಳುವ ಕುರಿತು ಈಗಾಗಲೇ ಕಾರ್ಯಾಗಾರ ನಡೆಸಿದ್ದ ಸ್ಪೀಕರ್‌, ಬಜೆಟ್‌ ಮೇಲಿನ ಚರ್ಚೆಗೆ ಅವಕಾಶ ಮಾಡಿಕೊಡುವ ಮುನ್ನ ಸಂಸದೀಯ ಅನುಭವ ಹೆಚ್ಚಿಸಲೂ ಅವಕಾಶ ಮಾಡಿಕೊಟ್ಟರು.

ಮಹಿಳೆಯರಿಗೆ ಆರ್ಥಿಕ ಭದ್ರತೆ ನೀಡಿದ ಬಜೆಟ್‌: ಕಾಂಗ್ರೆಸ್‌ನ ಶಾಸಕಿ ನಯನಾ ಮೋಟಮ್ಮ ಮಾತನಾಡುತ್ತಾ, ವಾರ್ಷಿಕ 32 ಸಾವಿರ ಕೋಟಿ ರೂ. ಖರ್ಚಾಗುವ ಗ್ಯಾರಂಟಿಗಾಗಿ ಆರಂಭದ ವರ್ಷವಾದ ಈ ಬಾರಿ 39,825 ಕೋಟಿ ರೂ. ಮೀಸಲಿಟ್ಟಿದೆ. ಅದರಲ್ಲೂ ಗೃಹಲಕ್ಷ್ಮೀ, ಶಕ್ತಿ ಯೋಜನೆಗಳು ನೇರವಾಗಿ ಮಹಿಳೆಯರಿಗೆ ಸಂಬಂಧಿಸಿದ್ದು. ಗ್ಯಾರಂಟಿ ಬಗ್ಗೆ ವಿಪಕ್ಷಗಳು ಸಾಕಷ್ಟು ಟೀಕೆ-ಟಿಪ್ಪಣಿ ಮಾಡಿವೆ. ಆದರೆ, ಯಾವ ಸರ್ಕಾರವೂ ಮಹಿಳೆಯರಿಗೆ ಈ ಮಟ್ಟಕ್ಕೆ ಆರ್ಥಿಕ ಭದ್ರತೆ ನೀಡಿರಲಿಲ್ಲ ಎಂಬುದನ್ನು ನೆನಪಿಡಬೇಕು. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಆರ್ಥಿಕ ಭದ್ರತೆ ನೀಡಿದೆ ಎಂದು ಶ್ಲಾಘಿಸಿದರು.

ಶುದ್ಧ ಕುಡಿಯುವ ನೀರು ಕೊಡಿ: ಗುರುಮಿಟಕಲ್‌ ಕಾಂಗ್ರೆಸ್‌ ಶಾಸಕ ಶರಣಗೌಡ ಕಂದಕೂರು ಮಾತನಾಡಿ, ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಯುವನಿಧಿ ಸೇರಿ 5 ಗ್ಯಾರಂಟಿ ಜಾರಿಗೊಳಿಸಲಾಗುತ್ತಿದೆ. ಎಲ್ಲವೂ ಉತ್ತಮ ಯೋಜನೆಗಳಾಗಿವೆ. ಕಡೆಚೂರಿನಲ್ಲಿ ಕೈಗಾರಿಕಾ ಪ್ರದೇಶಕ್ಕೆಂದು ಸ್ವಾಧೀನಪಡಿಸಿಕೊಂಡ 3 ಸಾವಿರ ಎಕರೆ ಅಭಿವೃದ್ಧಿ ಆಗಿಲ್ಲ. ಪುನಃ 3 ಸಾವಿರ ಎಕರೆ ಭೂಸ್ವಾಧೀನಕ್ಕೆ ಪ್ರಸ್ತಾವನೆ ಇದೆ. ಈ ಪ್ರಸ್ತಾವನೆ ಕೈಬಿಟ್ಟು ಈ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಅಭಿವೃದ್ಧಿಪಡಿಸಬೇಕು. ಅಣಕೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರು ತೀರಿಕೊಂಡಿದ್ದರು. ನಮ್ಮಪ್ಪ ಶಾಸಕರಿದ್ದಾಗಲೂ ಪರಿಹಾರ ಕೋರಿದ್ದರು. ಹಿಂದಿನ ಸರ್ಕಾರ ಕೊಟ್ಟಿರಲಿಲ್ಲ, ಈ ಸರ್ಕಾರವಾದರೂ ಕೊಡಲಿ ಎಂದು ಆಶಿಸುತ್ತೇನೆ. ಇಮ್ಲಾಪುರದಲ್ಲಿ 70 ಮಂದಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಾಗ ಸಿಎಂ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಕಳುಹಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿ ಕಾಳಜಿ ತೋರಿದರು. ಅದೇ ರೀತಿ ಕ್ಷೇತ್ರದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಬೇಡಿಕೆ ಇಟ್ಟರು.

ಅಕ್ಕಿ ಕಾಳಿನ ಹಿಂದೆ ಹೋಗದೆ, ರೆಕ್ಕೆ-ಪುಕ್ಕ ಬಲಿತ ಹಕ್ಕಿಗಳಾಗೋಣ
ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಮಾತನಾಡಿ, ಬಡವರ ಮನೆಗೆ ಅಕ್ಕಿ ಮುಟ್ಟಿಸುವ ಯೋಚನೆ ಮತ್ತು ಯೋಜನೆ ಯಾವುದೇ ಸರ್ಕಾರ ಮಾಡಿದ್ದರೂ ಅಭಿನಂದನೀಯ. ಆದರೆ, ಯಾವುದೇ ದೇಶ ಅಥವಾ ರಾಜ್ಯದ ಬಂಡವಾಳ ವೆಚ್ಚ ಹೆಚ್ಚಾದರಷ್ಟೇ ಅಭಿವೃದ್ಧಿ ಸಾಧ್ಯ. ನಮ್ಮಲ್ಲಿ ವಿದ್ಯಾಕೇಂದ್ರಗಳು ಸಾಕಷ್ಟಿವೆ. ಮೀನುಗಾರಿಕೆ ಸೇರಿದಂತೆ ಹಲವು ಉದ್ಯಮಗಳಿವೆ. ದುಡಿಯುವ ಕೈಗಳಿಗೆ ಆಧಾರ ಕೊಟ್ಟರೆ ಬಡತನ ದೂರಾಗುತ್ತದೆ. ಜನಪ್ರಿಯ ಯೋಜನೆಗಳು ಬಡತನವನ್ನು ಅಣಕಿಸುತ್ತಿವೆಯೋ? ಆಡಳಿತವನ್ನು ಅಣಕಿಸುತ್ತಿವೆಯೋ ಎಂದು 5 ಗ್ಯಾರಂಟಿಗಳ ಹೆಸರು ಹೇಳದೆಯೇ ಟೀಕಿಸಿದರು.

ಇದನ್ನು ಪುಷ್ಟೀಕರಿಸುವಂತೆ ಕಥೆಯೊಂದನ್ನೂ ಹೇಳಿದ ಅವರು, ಕೋಳಿಯ ಪುಕ್ಕ ಕಿತ್ತಾಗ ಜೀವಂತ ಕೋಳಿ ನೋವಿನಿಂದ ಒದ್ದಾಡುತ್ತಿರುತ್ತದೆ. ಪುಕ್ಕ ಕಿತ್ತ ನಂತರ ಅದೇ ವ್ಯಕ್ತಿ ಎರಡೆರಡು ಅಕ್ಕಿ ಕಾಳು ಹಾಕುತ್ತಾ ಹೋಗುತ್ತಾನೆ. ಆ ಕೋಳಿಯೂ ಅವನ ಹಿಂದೆ ಹೋಗುತ್ತದೆ. ಬಡತನ ಅಣಕಿಸುವ ವಿಷಯ ಆಗಬಾರದು. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಆಸ್ಪತ್ರೆ, ಶಾಲೆ, ಕಾಲುಸಂಕಗಳಿಗೆ ಒದ್ದಾಡುತ್ತಿದ್ದೇವೆ. ಕೊಲ್ಲೂರು ಮೂಕಾಂಬಿಕೆ, ವರಾಹಿ, ಕೆಪಿಸಿಯಂತಹ ಅನೇಕ ಆದಾಯ ತರುವ ಯೋಜನೆಗಳು ನಮ್ಮಲ್ಲಿವೆ. ರೆಕ್ಕೆ-ಪುಕ್ಕ ಬಲಿತ ಹಕ್ಕಿಗಳಾಗೋಣ, ಅಕ್ಕಿ ಕಾಳಿನ ಹಿಂದೆ ಹೋಗುವ ಹಕ್ಕಿಗಳಾಗುವುದು ಬೇಡ ಎಂದು ಮಾರ್ಮಿಕವಾಗಿ ನುಡಿದರು.

ಸರ್ವವ್ಯಾಪಿ ಬಜೆಟ್‌ ಇದು. ಚುನಾವಣೆಗೆ ಮೊದಲು ಹೇಳಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಹಣ ಮೀಸಲಿಟ್ಟಿದ್ದಾರೆ. ಇದು ಸಿಎಂ ಆರ್ಥಿಕ ಜ್ಞಾನಕ್ಕೆ ಹಿಡಿದ ಕನ್ನಡಿ. ಇಷ್ಟು ದೊಡ್ಡ ಮೊತ್ತದ ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ನಿಂದಲ್ಲದೆ ಬೇರಾವ ಸರ್ಕಾರದಿಂದಲೂ ನಿರೀಕ್ಷಿಸಲು ಸಾಧ್ಯವಿಲ್ಲ.
-ಎಚ್‌.ಡಿ. ತಮ್ಮಯ್ಯ, ಚಿಕ್ಕಮಗಳೂರು ಕಾಂಗ್ರೆಸ್‌ ಶಾಸಕ

ಆನೆ ಸಮಸ್ಯೆಯಿಂದ 15 ವರ್ಷದಲ್ಲಿ 75ಕ್ಕೂ ಹೆಚ್ಚು ಜನ ಪ್ರಾಣ ತೆತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಬ್ಯಾರಿಕೇಡ್‌ಗೆ 120 ಕೋಟಿ ರೂ. ಬೇಕಿದೆ. ಎತ್ತಿನಹೊಳೆಯಿಂದ ನೀರು ತೆಗೆದುಕೊಂಡು ಹೊರಟಿದ್ದೀರಿ. ಅಲ್ಲಿನ ಗ್ರಾಮಗಳಿಗೇ ಮೂಲಸೌಕರ್ಯ, ಕುಡಿಯುವ ನೀರಿಲ್ಲದ ಸ್ಥಿತಿ ಇದೆ. ಕ್ಷೇತ್ರಕ್ಕೆ ಸೌಕರ್ಯ ಕಲ್ಪಿಸಿ ನೀರು ತೆಗೆದುಕೊಂಡು ಹೋಗಿ.
– ಸಿಮೆಂಟ್‌ ಮಂಜು, ಸಕಲೇಶಪುರ ಬಿಜೆಪಿ ಶಾಸಕ

ಭೌಗೋಳಿಕವಾಗಿ ದೊಡ್ಡ ಕ್ಷೇತ್ರ. 6.50 ಲಕ್ಷ ಎಕರೆ ಇದೆ. ರಸ್ತೆಗಳು ಹಾಳಾಗಿವೆ. ಅನುದಾನ ಕಡಿಮೆ ಇದೆ. ಗುಡ್ಡಗಾಡು ಪ್ರದೇಶಗಳೂ ಇವೆ. 280 ದಾಖಲೆ ಗ್ರಾಮಗಳು, 88 ಹಾಡಿಗಳಿವೆ. ಮೂಲಸೌಕರ್ಯದ ಕೊರತೆ ಸಾಕಷ್ಟಿದೆ. 4.32 ಲಕ್ಷ ಎಕರೆ ಅರಣ್ಯ ಪ್ರದೇಶ ಇದೆ. ಚಿರತೆ ದಾಳಿಯಿಂದ ಮಗು ಅಸುನೀಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ವಹಿಸಬೇಕು.
– ಎಂ.ಆರ್‌. ಮಂಜುನಾಥ್‌, ಹನೂರು ಜೆಡಿಎಸ್‌ ಶಾಸಕ

ಡಾ.ನಂಜುಡಪ್ಪ ವರದಿ ಪ್ರಕಾರ ನಮ್ಮ ತಾಲೂಕು ಹಿಂದುಳಿದಿದೆ. ಬೇಸಿಗೆ, ಕಡುಬೇಸಿಗೆ, ಚಳಿಗಾಲ ಬಿಟ್ಟರೆ ಮಳೆಗಾಲ ಇಲ್ಲವೇ ಇಲ್ಲ. ಹೊಸದಾಗಿ ಕೆರೆ ತುಂಬಿಸುವ ಯೋಜನೆಗಳನ್ನು ತೀವ್ರಗತಿಯಲ್ಲಿ ಕೈಗೊಳ್ಳಬೇಕು. ಶಾಲೆಗಳಿಗೆ ಮೂಲಸೌಕರ್ಯ ಕೊಡಿ. ಕೈಗಾರಿಕೆಗಳನ್ನು ಅರಂಭಿಸಿ, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು.
-ಲತಾ ಮಲ್ಲಿಕಾರ್ಜುನ್‌, ಹರಪನಹಳ್ಳಿ ಪಕ್ಷೇತರ ಸದಸ್ಯೆ

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.