ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕು


Team Udayavani, Nov 17, 2019, 3:00 AM IST

Udayavani Kannada Newspaper

ಬೆಂಗಳೂರು: ಡಿ.5ರಂದು ನಡೆಯಲಿರುವ 15 ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಗೆ ಕಣ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ದೇವರಹಳ್ಳಿ ಸೋಮಶೇಖರ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ ಎಚ್‌.ಡಿ.ರೇವಣ್ಣ ಈ ಸಂದರ್ಭದಲ್ಲಿ ಹಾಜರಿದ್ದರು.

ಇದಕ್ಕೂ ಮೊದಲು ಸೋಮಶೇಖರ್‌ ಅವರು, ದೇವರಾಜ ಅರಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಸಲ್ಲಿಸಿದರು. ಬಳಿಕ, ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ಆಗಮಿಸಿ, ನಾಮಪತ್ರ ಸಲ್ಲಿಸಿದರು.

ಪಕ್ಷದ ವರಿಷ್ಟ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಾ.ರಾ.ಮಹೇಶ್‌, ಶಾಸಕರಾದ ಮಹ ದೇವ್‌, ಅಶ್ವಿ‌ನ್‌ ಕುಮಾರ್‌ ಇತರರು ಸಾಥ್‌ ನೀಡಿದರು. ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ವಕೀಲ ಕೆ.ಎನ್‌.ಶಂಕರೇ ಗೌಡ ಮತ್ತು ಪೂರ್ವಾಂಚಲ್‌ ಮಹಾ ಪಂಚಾಯತ್‌ ಪಾರ್ಟಿಯಿಂದ ಎಚ್‌. ಡಿ.ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ.

ಎದುರಾದರೂ ಮಾತನಾಡದ ಅಣ್ತಮ್ಮ
ಹುಣಸೂರು: ಹುಣಸೂರಲ್ಲಿ ಪಕ್ಷದ ಅಭ್ಯರ್ಥಿ ಸೋಮ ಶೇಖರ್‌ ಅವರು ನಾಮ ಪತ್ರ ಸಲ್ಲಿಸಲು ಕುಮಾರಸ್ವಾಮಿ ಜೊತೆಗೂಡಿ ತಾಲೂಕು ಕಚೇರಿಯ ಆವರಣಕ್ಕೆ ಆಗಮಿಸುತ್ತಿದ್ದ ವೇಳೆ ತಾಲೂಕು ಕಚೇರಿಯಿಂದ ಹೊರ ಬಂದ ಎಚ್‌.ಡಿ.ರೇವಣ್ಣ ಎದುರಾದರು. ಆದರೆ, ಅಣ್ಣನ ಜತೆ ಮಾತನಾಡದೆ ಕುಮಾರಸ್ವಾಮಿಯವರು ಸಾ.ರಾ.ಮಹೇಶ್‌ ಅವರೊಂದಿಗೆ ಹೊರಟು ಹೋದರು.

ರೇವಣ್ಣ ಕೂಡ ತಮ್ಮನನ್ನು ಮಾತನಾಡಿಸುವ ಗೋಜಿಗೆ ಹೋಗಲಿಲ್ಲ. ಈ ವೇಳೆ, ಇತ್ತ ನಾಮಪತ್ರಕ್ಕೆ ಸಹಿ ಹಾಕಲು ಪಕ್ಕಕ್ಕೆ ತೆರಳಿದ ಸೋಮಶೇಖರ್‌ ಅವರಿಂದ ನಾಮಪತ್ರವನ್ನೇ ಕಿತ್ತುಕೊಂಡ ರೇವಣ್ಣ, “ಸೋಮ, ಬಾರಯ್ಯ’ ಎನ್ನುತ್ತಾ ತಾಲೂಕು ಕಚೇರಿಯತ್ತ ಹೆಜ್ಜೆ ಹಾಕಿದರು. ನಾಮಪತ್ರ ಸಲ್ಲಿಕೆ ವೇಳೆ ಸೋಮಶೇಖರ್‌ಗೆ ಸಾಥ್‌ ನೀಡಿದರು.

ಎಚ್ಡಿಕೆಗೆ ತರಾಟೆ: ಈ ಮಧ್ಯೆ, ಪಕ್ಷದ ಅಧಿಕೃತ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್‌ ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಹುಣಸೂರಿಗೆ ಆಗಮಿಸಿದ ಎಚ್‌.ಡಿ.ಕುಮಾರಸ್ವಾಮಿಯವರು ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ದಿ.ಕರಿಯಪ್ಪಗೌಡರ ಪುತ್ರ ಗಣೇಶಗೌಡರ ಮನೆಗೆ ಶಾಸಕ ಮಹೇಶ್‌ ಜತೆ ತೆರಳಿ, ಅವರನ್ನು ಸಮಾಧಾನಪಡಿಸಿದರು. ಗಣೇಶಗೌಡರಿಗೆ ಮುಂದೆ ಉತ್ತಮ ಅವಕಾಶ ಕಲ್ಪಿಸುವ ಭರವಸೆ ನೀಡಿದರು. ಈ ವೇಳೆ, ಗಣೇಶಗೌಡರ ಬೆಂಬಲಿ ಗರು ಕುಮಾರಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

Gandhi Jayanti ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್‌ ಅಹಮದ್‌ ಖಾನ್‌

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್‌ ಅಹಮದ್‌ ಖಾನ್‌

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

1-sadsadsa

Nagarahole ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ರೈತ ಬಲಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.