ಮತದಾರರು ಕೈಬಿಟ್ರೂ ಪಕ್ಷ ನನ್ನನ್ನು ಕಾಪಾಡಿದೆ
Team Udayavani, Aug 22, 2019, 3:05 AM IST
ಬೆಳಗಾವಿ: ಸಚಿವ ಸ್ಥಾನ ಬಯಸದೇ ಬಂದ ಭಾಗ್ಯ. ಶಾಸಕನಲ್ಲದಿದ್ದರೂ ಪಕ್ಷದ ವರಿಷ್ಠರು ನಂಬಿಕೆ ಇಟ್ಟು ಸಚಿವರನ್ನಾಗಿ ಮಾಡಿದ್ದಾರೆ. ಈ ನಂಬಿಕೆಯನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತೇನೆ ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹರ ಮುನಿದರೆ ಗುರು ಕಾಯುತ್ತಾನೆ ಎಂಬಂತೆ ಮತದಾರರು ಹರ ಇದ್ದಂತೆ. ಅವರು ಮುನಿದರೂ ಗುರುವಿನ ಸ್ಥಾನದಲ್ಲಿ ಪಕ್ಷವು ನನ್ನನ್ನು ಕಾಪಾಡಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಸಚಿವ ಸ್ಥಾನಕ್ಕೆ ತಮ್ಮ ಪರ ರಮೇಶ ಜಾರಕಿಹೊಳಿ ಲಾಬಿ ಮಾಡಿದ್ದಾರೆ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, “ನನ್ನ ಪರ ಯಾರು ಲಾಬಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಪ್ರಮಾಣ ವಚನ ಸ್ವೀಕಾರದ ಹಿಂದಿನ ದಿನ ಮಧ್ಯರಾತ್ರಿ ಎರಡು ಗಂಟೆಗೆ ನನಗೆ ಕರೆ ಬಂತು. ನಿಮ್ಮ ಹೆಸರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿಗೆ ಬನ್ನಿ ಎಂದು ಹೇಳಿದರು. ಅದರಂತೆ ನಾನು ಸಚಿವ ಸ್ಥಾನ ವಹಿಸಿಕೊಂಡೆ. ಇದರಲ್ಲಿ ಯಾರ ಲಾಬಿ ಇದೆ ಎಂಬುದು ಗೊತ್ತಿಲ್ಲ. ಪಕ್ಷದ ಮೇಲಿನ ನಿಷ್ಠೆ ನನಗೆ ಈ ಸ್ಥಾನ ನೀಡಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ