Temperature; ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಬಸವಳಿದ ಜನ

ಬಹುತೇಕ ಕಡೆ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳ

Team Udayavani, Mar 7, 2024, 7:25 AM IST

ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಬಸವಳಿದ ಜನ

ಬೆಂಗಳೂರು: ರಾಜ್ಯದ ತಾಪಮಾನದಲ್ಲಿ ಬಹುತೇಕ ಕಡೆ ವಾಡಿಕೆಗಿಂತ 3 ಡಿಗ್ರಿಸೆಲ್ಸಿಯಸ್ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಕಳೆದ 15 ವರ್ಷಗಳಲ್ಲಿ ಎರಡನೇ ಬಾರಿಗೆ ಮಾರ್ಚ್‌ ಮೊದಲ ವಾರದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಗೆ ತಲುಪಿದೆ.

ಬೆಂಗಳೂರಿನಲ್ಲಿ ವಾಡಿಕೆಗಿಂತ 3 ಡಿ.ಸೆ. ಹೆಚ್ಚಿನ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಪ್ರತಿ ವರ್ಷ ಮಾರ್ಚ್‌ ಮೊದಲ ವಾರದಲ್ಲಿ ಸಾಮಾನ್ಯವಾಗಿ 32.5 ಡಿ.ಸೆ.ಗರಿಷ್ಠ ಉಷ್ಣಾಂಶ ದಾಖಲಾಗುತ್ತಿತ್ತು. ಹಲವು ವರ್ಷಗಳ ಬೇಸಗೆ ಸಂದರ್ಭದಲ್ಲಿ ಗರಿಷ್ಠ ಉಷ್ಣಾಂಶ 37 ಡಿ.ಸೆ. ದಾಟಿತ್ತು. ಆದರೆ 15 ವರ್ಷಗಳಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಮಂಗಳವಾರ 36 ಡಿ.ಸೆ.ಗರಿಷ್ಠ ಉಷ್ಣಾಂಶ ದಾಖಲಾಗಿದೆ.

2019 ಮಾ.8ರಂದು 37.1 ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ರಾಜ್ಯದಲ್ಲಿ ಮಾರ್ಚ್‌, ಎಪ್ರಿಲ್‌, ಮೇ ತಿಂಗಳವರೆಗೆ ತಾಪಮಾನ ಮುಂದುವರಿಯಲಿದೆ. ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು ಸಹಿತ ಕೆಲವು ಭಾಗಗಳಲ್ಲಿ ಶೀಘ್ರದಲ್ಲೇ ಉಷ್ಣ ಅಲೆ ಬರುವ ಸಾಧ್ಯತೆಗಳಿವೆ. ಕರಾವಳಿ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಲಿಲ್ಲ. ಕೊಂಚ ತಡವಾಗಿ ಕರಾವಳಿಯಲ್ಲೂ ತಾಪಮಾನ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ವಾಡಿಕೆ ಮಳೆ ಸಾಧ್ಯತೆ
ಮಾರ್ಚ್‌ ತಿಂಗಳ ಅಂತ್ಯದಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. 8 ಮಿ.ಮೀ.ನಿಂದ 12 ಮಿ.ಮೀ.ವರೆಗೆ ಮಳೆಯಾದರೆ ಅದನ್ನು ವಾಡಿಕೆ ಮಳೆ ಎನ್ನಲಾಗುತ್ತದೆ. ಒಟ್ಟಾರೆಯಾಗಿ ಈ ಬಾರಿ ರಾಜ್ಯದಲ್ಲಿ ವಾಡಿಕೆ ಮಳೆ ಬೀಳುವ ಲಕ್ಷಣ ಗೋಚರಿಸಿದೆ. ಇದರಿಂದ ಈ ವರ್ಷ ಬರದ ಪರಿಸ್ಥಿತಿ ಹೋಗುವ ಲಕ್ಷಣ ಕಂಡು ಬಂದಿದೆ. ಜೂನ್‌ ಬಳಿಕದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ಎಷ್ಟೆಷ್ಟು ಉಷ್ಣಾಂಶ?
ಬೆಂಗಳೂರಿನಲ್ಲಿ 36, ಕಲಬುರಗಿ 38.4, ಚಾಮರಾಜನಗರ, ಬಾಗಲ ಕೋಟೆ ತಲಾ 37.5, ರಾಯಚೂರು 37.2, ಕೊಪ್ಪಳ 37.1, ಮಂಡ್ಯ 37, ಚಿತ್ರ ದುರ್ಗ 36.1, ಹಾವೇರಿ 36.4, ದಾವ ಣಗೆರೆ 36, ಧಾರವಾಡ 35.6, ಮಂಗ ಳೂರು 32.6 ಡಿ.ಸೆ.ಗರಿಷ್ಠ ಉಷ್ಣಾಂಶ ಮಂಗಳವಾರ ದಾಖಲಾ ಗಿದೆ. ಬುಧ ವಾರ ಬೆಂಗಳೂರಿನಲ್ಲಿ 35.2 ಡಿ.ಸೆ.ಗರಿಷ್ಠ ತಾಪಮಾನ ದಾಖಲಾಗಿದೆ.

ಆರೋಗ್ಯದ ಬಗ್ಗೆ ಇರಲಿ ಕಾಳಜಿ
ರಾಜ್ಯದಲ್ಲಿ ತಾಪಮಾನ ಏರಿಕೆಗೆ ಜನ ಸಾಮಾನ್ಯರು ಬಸವಳಿದಿದ್ದು, ತಾಪಮಾನ ಇನ್ನಷ್ಟು ಏರಿಕೆಯಾದರೆ ಬಿಸಿಲಿನಲ್ಲಿ ಕಾಣಿಸಿಕೊಳ್ಳುವ ವಿವಿಧ ಕಾಯಿಲೆಗಳು ಉಲ½ಣಿಸುವ ಸಾಧ್ಯತೆಗಳಿವೆ. ಹೀಗಾಗಿ ಬೇಸಗೆ ಕಾಯಿಲೆಗಳು ಬರುವ ಮುನ್ನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಮಕ್ಕಳಲ್ಲಿ ವಾಂತಿಭೇದಿ, ಕೆಂಗಣ್ಣು, ಕಣ್ಣಲ್ಲಿ ನೀರು, ತಲೆ ತಿರುಗುವಿಕೆ ಲಕ್ಷಣ ಗೋಚರಿಸಿದರೆ, ದೊಡ್ಡವರಲ್ಲಿ ತಲೆ ಸುತ್ತುವಿಕೆ, ಬಿಸಿಲಾಘಾತದಂತಹ ಕಾಯಿಲೆಗಳು ಉಲ್ಬಣಿಸಿವೆ ಎಂದು ತಜ್ಞ ವೈದ್ಯರು ಹೇಳುತ್ತಾರೆ.

ಕರ್ನಾಟಕದಲ್ಲಿ ಒಂದು ವಾರದಿಂದ ತಾಪಮಾನ ಏರಿಕೆಯಾಗುತ್ತಿದೆ. ಕೆಲವು ಕಡೆ ಇನ್ನಷ್ಟು ತಾಪಮಾನ ಹೆಚ್ಚಲಿದೆ. ಪರಿಣಾಮ ಭೂಮಿಯ ಮೇಲಿನ ತೇವಾಂಶವೂ ಕಡಿಮೆಯಾಗುತ್ತಿದೆ. ರಾಜ್ಯದೆಲ್ಲೆಡೆ ಒಣ ಹವೆ ಇರಲಿದೆ. ಜನ ಸಾಮಾನ್ಯರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು.
-ಪ್ರಸಾದ್‌, ಹವಾಮಾನ ತಜ್ಞ, ಭಾರತೀಯ ಹವಾಮಾನ ಇಲಾಖೆ.

ಬೇಸಗೆಯಲ್ಲಿ ಆಹಾರ ಪದ್ಧತಿ ಹೀಗಿದ್ದರೆ ಉತ್ತಮ
-ದಿನಕ್ಕೆ ಕನಿಷ್ಠ 3 ಲೀಟರ್‌ಗೂ ಹೆಚ್ಚಿನ ನೀರು ಸೇವಿಸಿ
-ಹಣ್ಣು, ತರಕಾರಿ ಜತೆಗೆ ಪಾನೀಯ ಸೇವನೆಗೆ ಒತ್ತು ನೀಡಿ
-ಕರಿದ ಆಹಾರ, ಮಸಾಲಾ ಪದಾರ್ಥ, ಮಾಂಸಾಹಾರ ಸೇವನೆ ಬೇಡ
- ದೇಹ, ಮನಸ್ಸಿಗೆ ಹಿತ ನೀಡುವಂತಹ ಕಾಟನ್‌ ಉಡುಪು ಧರಿಸಿ
- ದಿನಕ್ಕೆ 2 ಬಾರಿ ಸ್ನಾನ ಮಾಡಿದರೆ ಚರ್ಮದ ಸಮಸ್ಯೆ ತಡೆಗಟ್ಟಬಹುದು

 

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.