ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ


Team Udayavani, Nov 26, 2018, 12:56 PM IST

antima-mandya.jpg

ಬೆಂಗಳೂರು/ಮಂಡ್ಯ: ನೆಚ್ಚಿನ ನಾಯಕ, ಹೃದಯ ಸಾಮ್ರಾಟ ಅಂಬರೀಶ್‌ ನಿಧನ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿತ್ತು. ಅಂಬರೀಶ್‌ ನಿಧನದ ಸುದ್ದಿ ತಿಳಿದು ಶೋಕಸಾಗರದಲ್ಲಿ ಮುಳುಗಿದ್ದ ಅಭಿಮಾನಿಗಳು ಅವರ ಪಾರ್ಥಿವ ಶರೀರ ಕಂಡ ಕೂಡಲೇ ದುಃಖದ ಕಟ್ಟೆ ಒಡೆದು ಮಂಡ್ಯ ಅಕ್ಷರಶಃ ಕಣ್ಣೀರ ಕಡಲಾಯಿತು.

ಬೆಂಗಳೂರಿನಿಂದ ರಕ್ಷಣಾ ಹೆಲಿಕಾಪ್ಟರ್‌ನಲ್ಲಿ ಅಂಬರೀಶ್‌ ಪಾರ್ಥಿವ ಶರೀರವನ್ನು ಸಂಜೆ 4.58ರ ವೇಳೆಗೆ ಮಂಡ್ಯದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಕರೆತರಲಾಯಿತು. ಪಾರ್ಥಿವ ಶರೀರದ ಜತೆ ಮುಖ್ಯಮಂತ್ರಿ ಕುಮಾಸ್ವಾಮಿ, ಅಂಬರೀಶ್‌ ಪತ್ನಿ ಸುಮಲತಾ, ಪುತ್ರ ಅಭಿಷೇಕ್‌, ನಟ ನಿಖೀಲ್‌ ಕುಮಾರಸ್ವಾಮಿ ಹಾಗೂ ಸಚಿವ ಸಾ.ರಾ.ಮಹೇಶ್‌ ಆಗಮಿಸಿದರು. ಮತ್ತೂಂದು ಹೆಲಿಕಾಪ್ಟರ್‌ ತೂಬಿನಕೆರೆ ಹೆಲಿಪ್ಯಾಡ್‌ನ‌ಲ್ಲಿ ಇಳಿಯಿತು.

ಅದರಲ್ಲಿ ಸುಮಲತಾ ಸಂಬಂಧಿಕರು ಆಗಮಿಸಿ, ಅಲ್ಲಿಂದ ಕಾರುಗಳ ಮೂಲಕ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಆಗಮಿಸಿದರು. ಕ್ರೀಡಾಂಗಣದ ಧ್ವಜ ಕಟ್ಟೆ ಎದುರು ನಿರ್ಮಿಸಲಾಗಿದ್ದ ಪುಷ್ಪಗಳಿಂದ ಅಲಂಕರಿಸಿದ ಮಂಟಪದಲ್ಲಿ ಅಂಬರೀಶ್‌ ಪಾರ್ಥಿವ ಶರೀರ ಇಡಲಾಯಿತು. ಈ ಮಂಟಪಕ್ಕೆ ಸುಂದರವಾದ ವಿದ್ಯುತ್‌ ಬೆಳಕಿನ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕ ದರ್ಶನಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಂಡ ಬಳಿಕ 5.18ರ ವೇಳೆಗೆ ಅವರನ್ನು ಕ್ರೀಡಾಂಗಣದ ಒಳಗೆ ಬಿಡಲಾಯಿತು. 

ಕ್ರೀಡಾಂಗಣದ ಒಂದು ಗೇಟ್‌ನಿಂದ ಸಾರ್ವಜನಿಕರಿಗೆ ಪ್ರವೇಶಾವಕಾಶ ಕಲ್ಪಿಸಲಾಯಿತು. ಒಮ್ಮೆಲೆ ನುಗ್ಗಿಬಂದ ಅಭಿಮಾನಿಗಳ ಪ್ರವಾಹವನ್ನು ನಿಯಂತ್ರಿಸಲು ಪೊಲೀಸರಿಂದ ಸಾಧ್ಯವಾಗಲಿಲ್ಲ. ಬ್ಯಾರಿಕೇಡ್‌ಗಳನ್ನು ತಳ್ಳಿಕೊಂಡು ಅಭಿಮಾನಿಗಳು ಒಳನುಗ್ಗಿ ಪಾರ್ಥಿವ ಶರೀರದತ್ತ ದೌಡಾಯಿಸಿದರು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಪರದಾಡಿದರು. ಸ್ವಲ್ಪ ಸಮಯದ ಬಳಿಕ ಪರಿಸ್ಥಿತಿಯನ್ನು ಹತೋಟಿಗೆ ತಂದು ಸುಗಮವಾಗಿ ಪಾರ್ಥಿವ ಶರೀರದ ದರ್ಶನ ಪಡೆಯುವುದಕ್ಕೆ ಅವಕಾಶ ಮಾಡಿಕೊಡಲಾಯಿತು.

ಕಂಠೀರವದಲ್ಲೂ ಜನಸಾಗರ: ಇದಕ್ಕೂ ಮೊದಲು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯ ವಿವಿಧ ಭಾಗಗಳಿಂದ ಬಂದ ಸಾವಿರಾರು ಅಭಿಮಾನಿಗಳು ಅಂಬಿಯನ್ನು ಕಾಣಲು ಬೆಳಗ್ಗೆ 6.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಮುಂದೆ ಜಮಾಯಿಸಿದ್ದರು.

ಬೆಳಗ್ಗೆ 8 ಗಂಟೆಗೆ ದರ್ಶನಕ್ಕೆ ಅವಕಾಶ ನೀಡಿದ ಕೂಡಲೇ ಕೆರೆ ಕೋಡಿ ಹೊಡೆದು ನೀರು ಹರಿಯುವಂತೆ ನೂರಾರು ಜನರು ಕಲಿಯುಗದ ಕರ್ಣನನ್ನು ಕಾಣಲು ನುಗ್ಗಿದರು. ಅಂಬಿಯವರ ದೇಹವನ್ನು ಕಂಡು ಅಭಿಮಾನಿಗಳು ಕಣ್ಣೀರಿಡುತ್ತಾ, ಅಕ್ರಂದನದಲ್ಲಿಯೇ ಜೈಕಾರ ಹಾಕಿದ್ದು ಮನಕಲಕುವಂತಿತ್ತು. ಶೀಘ್ರ ದರ್ಶನ ಪಡೆಯಲು ನೂಕು-ನುಗ್ಗಲು ಆರಂಭವಾಗಿ ಸಾಲಿನಲ್ಲಿದ್ದವರಿಗೆ ಉಸಿರುಗಟ್ಟಿದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.

ಅಂಬರೀಷ್‌ ಅವರ ಅಂತಿಮ ದರ್ಶನ ಪಡೆಯಲು ಬಂದ ಅಭಿಮಾನಿಗಳ ಪೈಕಿ ಒಬ್ಬರು ನಾಟಿ ಕೋಳಿ ಸಾರು, ಮುದ್ದೆ ತೆಗೆದುಕೊಂಡು ಬಂದಿದ್ದರು. ಪಾರ್ಥಿವ ಶರೀರದ ಬಳಿಗೆ ಬಂದ ಅವರು “ಅಣ್ಣ ನಿನ್ನಿಷ್ಟದ ನಾಟಿ ಕೋಳಿ ಸಾರು, ಮುದ್ದೆ ತಂದಿದ್ದೀನಿ ಎದ್ದೇಳಣ್ಣಾ ಎಂದು ಕಣ್ಣೀರು ಹಾಕುವ ಮೂಲಕ ಅಭಿಮಾನ ಪ್ರದರ್ಶಿಸಿದರು. ನೂರಾರು ಅಭಿಮಾನಿಗಳು ಬ್ಯಾರಿಕೇಡ್‌ ದಾಟಿ ದರ್ಶನ ಪಡೆಯಲು ಮುಂದಾಗುತ್ತಿದ್ದರು. ಇನ್ನು ಕೆಲ ಅಭಿಮಾನಿಗಳು ಮಕ್ಕಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬರುತ್ತಿದ್ದ ದೃಶ್ಯಗಳು ಕಂಡು ಬಂದವು. 

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.