ಮೈತ್ರಿ ಸರ್ಕಾರ ಉರುಳಿಸೋ ಯತ್ನದಲ್ಲಿ ಪಿಎಂ ಪಾತ್ರವಿದೆ
Team Udayavani, Jul 14, 2019, 3:00 AM IST
ಹೂವಿನಹಡಗಲಿ: ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಆದಾಗಿನಿಂದಲೂ ಬಿಜೆಪಿ ಒಂದಲ್ಲ ಒಂದು ನೆಪ ಮಾಡಿಕೊಂಡು ವಿನಾಕಾರಣ ಸರಕಾರ ಉರುಳಿಸುವ ಕೆಲಸ ಮಾಡುತ್ತಿದೆ. ಇದರಲ್ಲಿ ಪ್ರಧಾನಿ ಮೋದಿಯವರ ಪಾತ್ರವೂ ಇದೆ ಎಂದು ರಾಜ್ಯ ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಬಿಜೆಪಿ ಅಧಿ ಕಾರದಾಹದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಪ್ರಯೋಗ ಹೊಸದೇನಲ್ಲ.
2004, 2006ರಲ್ಲಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿವೆ. ಆದರೆ, ಈ ಬಾರಿ ಮೈತ್ರಿ ಸರಕಾರವನ್ನು ಉರುಳಿಸಲೇಬೇಕೆಂದು ಮೋದಿ ಹೊರಟಿದ್ದಾರೆ. ಪ್ರಧಾನಿಯವರು ದೇಶದ ಪ್ರಗತಿಗಾಗಿ ಒಳ್ಳೆಯ ಕೆಲಸ ಮಾಡಬೇಕು. ಅದನ್ನು ಬಿಟ್ಟು ಸಮ್ಮಿಶ್ರ ಸರ್ಕಾರ ಕೆಡವಲು ಪ್ರಯತ್ನಿಸುತ್ತಿರುವುದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದರು.
ಬಿಜೆಪಿ ರಾಜ್ಯದಲ್ಲಿ ಕೆಟ್ಟ ರಾಜಕೀಯ ಸಂಸ್ಕೃತಿ ಹುಟ್ಟು ಹಾಕಿದೆ. ಮೈತ್ರಿ ಪಕ್ಷಗಳ ಶಾಸಕರನ್ನು ಅಡ್ಡಗಟ್ಟಿ ಖರೀದಿ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗುತ್ತಿದೆ. ಬಿಜೆಪಿಯವರು ಅಧಿಕಾರದ ಆಸೆಗಾಗಿ ಭ್ರಷ್ಟಾಚಾರ ಮಾಡಿ ಆ ಮೂಲಕ ಸಂವಿಧಾನದ ಆಶಯವನ್ನು ಗಾಳಿಗೆ ತೂರುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ