ಕೋವಿಡ್ ಕಾಲದಲ್ಲಿ ಆನ್‌ಲೈನ್‌ ಶಿಕ್ಷಣ ಸಾಧ್ಯವೇ ?


Team Udayavani, Jun 6, 2020, 6:12 AM IST

ಕೋವಿಡ್ ಕಾಲದಲ್ಲಿ ಆನ್‌ಲೈನ್‌ ಶಿಕ್ಷಣ ಸಾಧ್ಯವೇ ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಸರಕಾರಿ ಶಾಲೆಗಳಲ್ಲಿರುವ ಕಂಪ್ಯೂಟರ್‌ಗಳು ಸದ್ಬಳಕೆಯಾಗದೇ
ಧೂಳು ತಿನ್ನುತ್ತಿವೆ.
ಸಮರ್ಪಕ ವಿದ್ಯುತ್‌ ವ್ಯವಸ್ಥೆಯಿಲ್ಲದ ಎಷ್ಟೋ ಶಾಲೆಗಳಿವೆ, ಇಂಟರ್ನೆಟ್‌ ಅಂತೂ ಕೇಳುವಂತಿಲ್ಲ.
ಹೀಗಿರುವಾಗ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಪ್ರಸ್ತಾವಿಸಿರುವ ಆನ್‌ ಲೈನ್‌ ಶಿಕ್ಷಣ ಸರಕಾರಿ ಶಾಲೆಯಲ್ಲಿ ಅನುಷ್ಠಾನ ಸಾಧ್ಯವೇ? ಇದು ಪಾಲಕರ ಪ್ರಶ್ನೆ.

ಸಚಿವ ಸುರೇಶ್‌ ಕುಮಾರ್‌ ಅವರು ಶಿಕ್ಷಣದ ವಿಚಾರದಲ್ಲಿ ಕೈಗೊಳ್ಳುತ್ತಿರುವ ಗೊಂದಲಗಳ ನಿರ್ಧಾರಗಳಲ್ಲಿ ಆನ್‌ಲೈನ್‌ ತರಗತಿ ಪ್ರಾರಂಭವೂ ಒಂದಾಗಿದೆ.

ಆನ್‌ಲೈನ್‌ ಶಿಕ್ಷಣಕ್ಕೆ ಬೇಕಾದ ಕನಿಷ್ಠ ವ್ಯವಸ್ಥೆಯು ರಾಜ್ಯದ ಶೇ.90ರಷ್ಟು ಸರಕಾರಿ ಶಾಲೆಯಲ್ಲಿಲ್ಲ. ಕೆಲವೇ ಕೆಲವು ಪ್ರೌಢಶಾಲೆಯಲ್ಲಿ ಆನ್‌ಲೈನ್‌ ಕಲಿಕೆಗೆ ಪೂರಕವಾದ ಕೆಲವು ಸೌಲಭ್ಯ ಸಿಗಬಹುದು. ಅದರೆ, ಖಾಸಗಿ ಶಾಲೆಗಳ ಕಂಪ್ಯೂಟರ್‌ ಲ್ಯಾಬ್‌ ಸುಸಜ್ಜಿತವಾಗಿದೆ, ಸ್ಮಾರ್ಟ್‌ ಬೋರ್ಡ್‌ ಪರಿಕಲ್ಪನೆಯನ್ನು ಈಗಾಗಲೇ ಅಳವಡಿಸಿಕೊಂಡಿವೆ. ಟಿವಿ ವ್ಯವಸ್ಥೆಯಿದೆ.

ಆದರೆ, ಸರಕಾರಿ ಶಾಲೆಯಲ್ಲಿ ಸೂಕ್ತ ಕೊಠಡಿಯೇ ಇಲ್ಲ, ಇನ್ನು ಆನ್‌ಲೈನ್‌ ಕ್ಲಾಸ್‌ ನಡೆಸಲು ಬೇಕಾದ ಸೌಲಭ್ಯ ಎಲ್ಲಿರಲು ಸಾಧ್ಯ. ಸಚಿವ ಸುರೇಶ್‌ ಕುಮಾರ್‌ ಅವರ ಆನ್‌ಲೈನ್‌ ತರಗತಿಯ ಪ್ರಸ್ತಾವವು ಖಾಸಗಿ ಲಾಬಿಗೆ ಮಣಿದ ಪರಿ ಎಂಬ ಮಾತುಗಳು ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ.

ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕಂಪ್ಯೂಟರ್‌ ಲ್ಯಾಬ್‌ ಇಲ್ಲ. ಶಿಕ್ಷಕ ಕೊಠಡಿಯಲ್ಲಿ ಒಂದು ಕಂಪ್ಯೂಟರ್‌ ಇದ್ದು, ಅದನ್ನು ಮುಖ್ಯಶಿಕ್ಷಕರು ಆಡಳಿ ತಾತ್ಮಕ ಕಾರ್ಯಕ್ಕೆ ಬಳಸುತ್ತಿದ್ದಾರೆ. ಪ್ರೌಢ ಶಾಲೆಗಳಲ್ಲಿ ತಂತ್ರಜ್ಞಾನ ಆಧರಿತ ಕಲಿಕಾ ಕಾರ್ಯಕ್ರಮಕ್ಕಾಗಿ (ಟಿಎಎಲ್‌ ಪಿ) 1197 ಪ್ರೌಢಶಾಲೆಗಳನ್ನು ಆಯ್ಕೆ ಮಾಡಿಕೊಂಡು ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ಸುಮಾರು 5 ಸಾವಿರ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ.

4404 ಪ್ರೌಢಶಾಲೆಯ 12ಸಾವಿರ ಶಿಕ್ಷಕರಿಗೆ ಇಂಡಕ್ಷನ್‌ ತರಬೇತಿ ನೀಡಲಾಗಿದೆ. ಕೇವಲ 2500 ಪ್ರೌಢಶಾಲೆಗೆ ಲ್ಯಾಪ್‌ಟಾಪ್‌ ಹಾಗೂ ಪ್ರಾಜೆಕ್ಟರ್‌ ನೀಡಲಾಗಿದೆ. ಉಳಿದ ಶಾಲೆಗೆ ಕಂಪ್ಯೂಟರ್‌ ಇಲ್ಲ, ಲ್ಯಾಬ್‌ ಕೇಳುವಂತಿಲ್ಲ.
ಹೀಗಾಗಿ ಮೂಲಭೂತ ವ್ಯವಸ್ಥೆಯೇ ಇಲ್ಲದೇ ಆನ್‌ಲೈನ್‌ ಶಿಕ್ಷಣ ಹೇಗೆ ನೀಡಲಾಗುವುದು ಎಂಬುದಕ್ಕೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹಾಗೂ ಶಿಕ್ಷಣ ಇಲಾಖೆಯೇ ಉತ್ತರ ನೀಡಬೇಕು.

ಮಕ್ಕಳ ಕಲಿಕೆಗೆ ಅಗತ್ಯವಿರುವ ಪುಸ್ತಕವನ್ನೂ ಶಾಲಾರಂಭದಲ್ಲಿ ನೀಡಲು ಸಾಧ್ಯವಾಗದ ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಸರಕಾರಿ ಶಾಲೆಯ ಲಕ್ಷಾಂತರ ಮಕ್ಕಳಿಗೆ ಆನ್‌ಲೈನ್‌ ಕಲಿಕೆಗೆ ಬೇಕಾದ ಪರಿಕರ ಒದಗಿಸಲು ಸಾಧ್ಯವೇ ಎಂಬ ಪ್ರಶ್ನೆ ಪಾಲಕರಿಂದ ಕೇಳಿಬರುತ್ತಿದೆ.

ಮೊಬೈಲ್‌ ಸರಕಾರ ನೀಡುವುದೇ?
ಶಾಲೆಯಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆಯಿಲ್ಲ, ಆನ್‌ಲೈನ್‌ ಕಲಿಕೆಗೆ ಮೊಬೈಲ್‌ ಬೇಕು.
ಒಂದು ಮನೆಯಲ್ಲಿ ಬೇರೆ ಬೇರೆ ತರಗತಿಯ ಎರಡು ಅಥವಾ ಮೂರು ಮಕ್ಕಳಿದ್ದರೆ, ಪಾಲಕರ ಒಂದೇ ಮೊಬೈಲ್‌ನಲ್ಲಿ ಮೂವರ ಕಲಿಕೆ ಹೇಗೆ? ಶಿಕ್ಷಣ ಇಲಾಖೆ ಅಥವಾ ಸರಕಾರ ಮಕ್ಕಳಿಗೆ ಮೊಬೈಲ್‌ ನೀಡುವುದೇ? ಅಥವಾ ಮೊಬೈಲ್‌ ಗೆ ಬೇಕಾದ ಇಂಟರ್ನೆಟ್‌ ಡಾಟಾ ಸೌಲಭ್ಯ ಸರಕಾರ ಉಚಿತವಾಗಿ ನೀಡುವುದೇ ಎಂದು ಪಾಲಕರು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.