ಮೂರು ದಿನ ತುಂತುರು ಮಳೆಯಾಗುವ ಸಾಧ್ಯತೆ
Team Udayavani, Mar 3, 2020, 3:02 AM IST
ಬೆಂಗಳೂರು: ಮಹಾರಾಷ್ಟ್ರದಿಂದ ರಾಜ್ಯದ ಕರಾವಳಿಯ ಭಾಗದವರೆಗೆ ಗಾಳಿಯ ಒತ್ತಡ ಕಡಿಮೆಯಾಗಿದ್ದು, ಇನ್ನೂ ಮೂರು ದಿನ ಬೆಂಗಳೂರು ಸೇರಿ ವಿವಿಧೆಡೆ ಚದುರಿದ ಸಾಧಾ ರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕಳೆದ ಮೂರು ದಿನ ಗಳಿಂದ ಕರಾವಳಿ, ಉತ್ತರ ಕರ್ನಾಟಕ, ಮಲೆನಾಡು ಜಿಲ್ಲೆ ಹಾಗೂ ದಕ್ಷಿಣ ಒಳ ನಾಡು ಭಾಗದ ಸೇರಿ ವಿವಿಧೆಡೆ ಮಳೆಯಾಗುತ್ತಿದೆ. ಭಾನು ವಾರ ಬೆಳಗಾವಿ, ದಾವಣಗೆರೆ, ವಿಜಯ ಪುರ, ಮೈಸೂರು, ಚಿಕ್ಕಮಗಳೂರು, ಕೊಪ್ಪಳ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವಡೆ ಉತ್ತಮ ಮಳೆಯಾಗಿರುವುದು ವರದಿಯಾಗಿದೆ. ಸೋಮವಾರ ಮಂಡ್ಯ, ಮೈಸೂರು, ಉಡುಪಿ, ಚಾಮ ರಾಜನಗರ ಸೇರಿ ದಂತೆ ದಕ್ಷಿಣ ಒಳನಾಡಿದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯ ಗೊಂಡ 24 ತಾಸುಗಳ ಅವಧಿಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಲ್ಲಿ ಗರಿಷ್ಠ 4 ಸೆಂ. ಮೀ. ಮಳೆ ಸುರಿದಿದೆ. ಇಂದಿನಿಂದ (ಮಂಗಳವಾರದಿಂದ)ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.