ಉತ್ತರಾಧಿಕಾರಿ ನೇಮಕ ಪೂರ್ವಭಾವಿ ಪ್ರಕ್ರಿಯೆ ಆರಂಭ
Team Udayavani, May 8, 2019, 3:00 AM IST
ಉಡುಪಿ: ಪಲಿಮಾರು ಮಠದ 31ನೇ ಪೀಠಾಧಿಪತಿಯಾಗಿ ನಿಯೋಜನೆಗೊಳ್ಳಲಿರುವ ಕೊಡವೂರು ಕಂಬಳಕಟ್ಟದ ಶೈಲೇಶ್ ಉಪಾಧ್ಯಾಯ ಅವರ ಸನ್ಯಾಸಾಶ್ರಮ ಸ್ವೀಕಾರದ ಪೂರ್ವಭಾವಿ ಪ್ರಕ್ರಿಯೆಗಳು ಅಕ್ಷಯ ತೃತೀಯಾದಂದು ಆರಂಭಗೊಂಡಿವೆ.
ಇದರಂಗವಾಗಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶೈಲೇಶರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದರು. ಇದಕ್ಕೂ ಮುನ್ನ ಶೈಲೇಶರು ಹಿರಿಯ ವಿದ್ವಾಂಸ ಡಾ| ಬನ್ನಂಜೆ ಗೋವಿಂದಾಚಾರ್ಯ ಅವರನ್ನು ಅಂಬಲಪಾಡಿಯ ನಿವಾಸದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.
ಏಳು ಶತಮಾನಗಳ ಹಿಂದೆ ಆಚಾರ್ಯ ಮಧ್ವರ ಶಾಸ್ತ್ರ ವಿಚಾರಗಳನ್ನು ಲಿಪಿಬದ್ಧಗೊಳಿಸಿದ ಪಲಿಮಾರು ಮಠದ ಮೂಲ ಯತಿ ಶ್ರೀ ಹೃಷಿಕೇಶ ತೀರ್ಥರ ಸರ್ವಮೂಲಗ್ರಂಥದ ಅಧ್ಯಯನ, ಸಂಶೋಧನೆಯನ್ನು ನಡೆಸಿದ ಗೋವಿಂದಾಚಾರ್ಯರು, “ಶೈಲೇಶರಿಂದ ಶುದ್ಧ ತಣ್ತೀಜ್ಞಾನ ಪ್ರಸಾರದ ಕೆಲಸ ನಡೆಯುವಂತಾಗಲಿ’ ಎಂದು ಭಾವಪೂರ್ಣವಾಗಿ ಹಾರೈಸಿದರು.
ಶ್ರೀಕೃಷ್ಣ ಮಠದಲ್ಲಿ ಮೇ 9ರಂದು ಪ್ರಾಯಶ್ಚಿತ್ತಾದಿ ಹೋಮಗಳು, ವಿರಜಾ ಹೋಮ, ಆತ್ಮಶ್ರಾದ್ಧ, ಮೇ 10ರಂದು ಸನ್ಯಾಸಾಶ್ರಮ ಸ್ವೀಕಾರ, ಪ್ರಣವ ಮಂತ್ರೋಪದೇಶ, ಮೇ 11ರಂದು ವಿವಿಧ ಮಂತ್ರಗಳ ಉಪದೇಶ, ಮೇ 12ರಂದು ಪೀಠಾಧಿಪತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.