ಅಡುಗೆ ಅನಿಲ ಬೆಲೆ 150 ರೂ. ತಗ್ಗಿಸಲು ಡಿಕೆಶಿ ಆಗ್ರಹ
Team Udayavani, Sep 11, 2021, 9:15 PM IST
ಬೆಂಗಳೂರು:ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಅಡುಗೆ ಆನಿಲ ಸಿಲಿಂಡರ್ ಬೆಲೆ ಕನಿಷ್ಟ 150 ರೂ. ಇಳಿಕೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ಜನವಿರೋಧಿ ನೀತಿ-ನಿರ್ಧಾರಗಳ ವಿರುದ್ದ ”ಒಂದು ಪ್ರಶ್ನೆ’ ಸರಣಿ ಮೂಲಕ ಜನಾಭಿಪ್ರಾಯ ಮೂಡಿಸುತ್ತಿದ್ದು ಜನರ ಅಭಿಪ್ರಾಯ ಅಡುಗೆ ಅನಿಲ ಇಳಿಸಬೇಕು ಎಂಬುದಾಗಿದೆ ಎಂದು ಹೇಳಿದ್ದಾರೆ.
ಬಡ ಮತ್ತು ಮಧ್ಯಮ ವರ್ಗದ ಗೃಹಿಣಿಯರಿಗೆ ಅಡುಗೆ ಅನಿಲ ಬೆಲೆ ಏರಿಕೆ ಬಿಸಿ ತಾಕಿದೆ. ಗೃಹ ಬಳಕೆಯ ಅಡುಗೆ ಅನಿಲ 900 ರೂ. ಗಡಿ ತಲುಪಿದ್ದು, ಬೀದರ್ ಜಿಲ್ಲೆಯಲ್ಲಿ ಶನಿವಾರ 956 ರೂ. ಇದೆ. ಸದ್ಯದಲ್ಲೇ ಒಂದು ಸಾವಿರ ರೂ. ತಲುಪಬಹುದು. ತಕ್ಷಣ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ನ್ಯಾಯಾಂಗ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಲಿ : ರಾಷ್ಟ್ರಪತಿ
ಉದ್ಯೋಗ ಕಳೆದುಕೊಂಡು ಜೀವನ ನಿರ್ವಹಣೆ ಸಾಧ್ಯವಾಗದೆ ಜನ ಆತ್ಮಹತ್ಯೆ ದಾರಿ ಉಳಿಯುತ್ತಿರುವ ಈ ಸಂಕಟದ ಕಾಲದಲ್ಲಿ ಸರ್ಕಾರ ನಿರಂತರವಾಗಿ ಅಡುಗೆ ಆನಿಲ ಬೆಲೆ ಏರಿಕೆ ಮಾಡುತ್ತಿರುವುದು ಜನವಿರೋಧಿ ಮಾತ್ರವಲ್ಲ, ಅಮಾನವೀಯ ಕೂಡ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಫೇಸ್ ಬುಕ್, ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?