ಇನ್ನೂ ಮಳೆ ಮುಗಿದಿಲ್ಲ; ಸೆ. 7 ರವರೆಗೂ ಭಾರೀ ಮಳೆ ಎಚ್ಚರಿಕೆ
ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Team Udayavani, Sep 4, 2022, 6:20 AM IST
ಬೆಂಗಳೂರು: ರಾಜ್ಯಾದ್ಯಂತ ಹಲವೆಡೆ ಮಳೆ ಮುಂದುವರಿದಿದ್ದು, ಸೆ. 7ರ ವರೆಗೆ ಹಲವೆಡೆ ಭಾರೀ ಮಳೆ ಸುರಿಯುವ ಸಂಭವವಿದೆ.
ಈ ಹಿನ್ನೆಲೆಯಲ್ಲಿ ಸೆ. 7ರಂದು ಚಿಕ್ಕ ಬಳ್ಳಾಪುರ, ಚಿಕ್ಕಮಗ ಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಮುನ್ನೆಚ್ಚ ರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬೆಳಗಾವಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮ ಕೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಿದೆ.