ಮೂರೂ ಸಮ್ಮಿಶ್ರ ಸರ್ಕಾರಗಳಿಗೆ ಕಾಡಿದ್ದ ಬಂಡಾಯ
Team Udayavani, Jul 24, 2019, 3:00 AM IST
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಒಂದೂವರೆ ದಶಕದಲ್ಲಿ ಮೂರು ಮೈತ್ರಿ ಸರ್ಕಾರಗಳು ಅಧಿಕಾರ ನಡೆಸಿವೆಯಾದರೂ ಅವುಗಳ ಆಯುಷ್ಯ “ಗಟ್ಟಿ’ಯಾಗಿರಲಿಲ್ಲ. ಜತೆಗೆ, ಆಯಾ ಪಕ್ಷಗಳಿಗೆ ಬಂಡಾಯ ಬೆಂಬಿಡದಂತೆ ಕಾಡಿತ್ತು. 2004ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ, ಆ ನಂತರದ ಬಿಜೆಪಿ-ಜೆಡಿಎಸ್ ಸರ್ಕಾರ, ಆದಾದ ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶದಿಂದ ರಚನೆಗೊಂಡ ಕಾಂಗ್ರೆಸ್-ಜೆಡಿಎಸ್ ಸರ್ಕಾರಗಳು ಮೈತ್ರಿ ಸರ್ಕಾರದ ಪ್ರಯೋಗ ಕಷ್ಟ ಎಂಬುದಕ್ಕೆ ಸಾಕ್ಷಿ.
2004ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 65, ಜೆಡಿಎಸ್ 58, ಬಿಜೆಪಿ 79 ಸ್ಥಾನ ಗಳಿಸಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ನ ಧರ್ಮಸಿಂಗ್ ಮುಖ್ಯಮಂತ್ರಿ, ಜೆಡಿಎಸ್ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾದರು. ಆದರೆ, 2006ರ ವೇಳೆಗೆ ಸಿದ್ದರಾಮಯ್ಯ ಹಾಗೂ ದೇವೇಗೌಡರ ನಡುವೆ ರಾಜಕೀಯ ಭಿನ್ನಾಭಿಪ್ರಾಯ ಉಂಟಾಗಿ ಸಿದ್ದರಾಮಯ್ಯ ಅವರು “ಅಹಿಂದ’ ಹೋರಾಟ ಆರಂಭಿಸಿದ್ದರಿಂದ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.
ಆಗ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್ನ 46 ಶಾಸಕರು ಎಚ್.ಡಿ.ಕುಮಾರಸ್ವಾಮಿಯವರ ನೇತೃತ್ವದಲ್ಲಿ ಬಂಡಾಯ ಎದ್ದು ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಿದ್ದರು. ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ, ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದರು. 20 ತಿಂಗಳ ನಂತರ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಒಪ್ಪಂದವಾಗಿತ್ತು. ಆದರೆ, ಕುಮಾರಸ್ವಾಮಿಯವರು ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲು ನಿರಾಕರಿಸಿದಾಗ ಬಿಜೆಪಿ ಬೆಂಬಲ ವಾಪಸ್ ಪಡೆಯಿತು. ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದರು. ಆಗ ಜೆಡಿಎಸ್ ವಿರುದ್ಧ ವಚನಭ್ರಷ್ಟರು ಎಂಬ ಆರೋಪ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ