ಶಾಸಕರ ರಾಜೀನಾಮೆಗೂ, ಬಿಜೆಪಿಗೂ ಸಂಬಂಧವಿಲ್ಲ
Team Udayavani, Jul 22, 2019, 3:00 AM IST
ಬಂಟ್ವಾಳ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಆಂತರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಅವರ ಶಾಸಕರು ರಾಜೀನಾಮೆ ನೀಡಿದ್ದು, ಅದಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.
ಭಾನುವಾರ ಪೊಳಲಿಯಲ್ಲಿ ಪತ್ರಕರ್ತರ ಜತೆ ಮಾತನಾಡಿ, ಶಾಸಕರ ರಾಜೀನಾಮೆ ವಿಚಾರವಾಗಿ ಮೈತ್ರಿ ಸರಕಾರ ಬಿಜೆಪಿ ಮೇಲೆ ವೃಥಾ ಆರೋಪ ಹೊರಿಸುತ್ತಿದೆ. ಶಾಸಕರೇನೂ ಗುಟ್ಟಾಗಿ ರಾಜೀನಾಮೆ ಕೊಟ್ಟಿಲ್ಲ. ಓಡೋಡಿ ಬಂದು ಎರಡೆರಡು ಬಾರಿ ರಾಜೀನಾಮೆ ಕೊಟ್ಟಿದ್ದಾರೆ. ಪರಸ್ಪರ ಕಿತ್ತಾಟ, ಅಪನಂಬಿಕೆಯೇ ಬಲವಾಗಿರುವ ಹಿನ್ನೆಲೆಯಲ್ಲೇ ಸರಕಾರದ ವಿರುದ್ಧ ತಿರುಗಿ ಬಿದ್ದು ಆಡಳಿತ ಪಕ್ಷದ ಶಾಸಕರೇ ರಾಜೀನಾಮೆ ಕೊಟ್ಟಿದ್ದಾರೆ.
ಈ ದೋಸ್ತಿ ಸರಕಾರ ಬೇಡ ಎನ್ನುವ ಸಂದೇಶವನ್ನೂ ಅವರು ರಾಜ್ಯದ ಜನತೆಗೆ ನೀಡಿದ್ದಾರೆ ಎಂದರು. ವಿಶ್ವಾಸಮತ ಪ್ರಕ್ರಿಯೆಯನ್ನು ಜು.22ರಂದು ಮುಗಿಸುವುದಾಗಿ ಸ್ಪೀಕರ್ ತಿಳಿಸಿದ್ದು, ವಿಶ್ವಾಸಮತ ಪಡೆಯದೇ ಇದ್ದರೆ ಮೈತ್ರಿ ಸರಕಾರ ಬಿದ್ದು ಹೊಸ ಸರಕಾರ ರಚನೆಯ ಪ್ರಯತ್ನಗಳು ನಡೆಯಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ