ಬಂಡೆ ಉರುಳಿ ರೈಲು ಸಂಚಾರ ಮತ್ತೆ ಸ್ಥಗಿತ
Team Udayavani, Jul 4, 2018, 11:49 AM IST
ಸಕಲೇಶಪುರ/ ಸುಬ್ರಹ್ಮಣ್ಯ: ಮಂಗಳೂರು-ಹಾಸನ ರೈಲು ಮಾರ್ಗದ ಎಡಕುಮೇರಿ-ಕಡಗರಹಳ್ಳಿ ನಿಲ್ದಾಣದ ನಡುವೆ ಎಡಕುಮೇರಿ ಬಳಿ ಮಂಗಳವಾರ ಗುಡ್ಡ ಕುಸಿದು ಬಂಡೆಕಲ್ಲು, ಮಣ್ಣು, ಮರಗಳು ಹಳಿಗಳ ಮೇಲೆ ಬಿದ್ದಿವೆ. ಪರಿಣಾಮ ಸುಬ್ರಹ್ಮಣ್ಯ ರಸ್ತೆ – ಸಕಲೇಶಪುರ ಮಾರ್ಗದಲ್ಲಿ ಮಂಗಳವಾರ ಮಧ್ಯಾಹ್ನ ಸಂಚರಿಸಬೇಕಿದ್ದ ಮಂಗಳೂರು-ಬೆಂಗಳೂರು ರೈಲನ್ನು ಎಡಕುಮೇರಿ ನಿಲ್ದಾಣದಿಂದ ವಾಪಸು ಮಂಗಳೂರಿಗೆ ಕರೆಸಿಕೊಳ್ಳಲಾಗಿದೆ.
ಪುತ್ತೂರಿನಿಂದ ಮಧ್ಯಾಹ್ನ 1.20ಕ್ಕೆ ಹೊರಟ ರೈಲು ಸಂಜೆ 5.30ಕ್ಕೆ ಪುತ್ತೂರಿಗೆ ಮರಳಿದೆ. ಸುಮಾರು 8 ಗಂಟೆವರೆಗೆ ಪ್ರಯಾಣಿಕರು ರೈಲು ನಿಲ್ದಾಣದ ಆವರಣದಲ್ಲೇ ಕುಳಿತಿದ್ದರು. ಮಕ್ಕಳ ಅಳು, ದೊಡ್ಡವರ ಜಗಳ, ಕೆಲಸಕ್ಕೆಂದು ಹೊರಟು ನಿಂತವರ ತೊಳಲಾಟ ಕಂಡುಬಂತು. ಬಳಿಕ 9 ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಕರನ್ನು ಬೆಂಗಳೂರಿಗೆ ಕಳಿಹಿಸಲಾಯಿತು. ಕೆಲವು ಪ್ರಯಾಣಿಕರು ಟಿಕೆಟ್ ಹಣ ಹಿಂದಕ್ಕೆ ಪಡೆದುಕೊಂಡಿದ್ದಾರೆ.
ರೈಲು ಘಾಟಿ ಏರಲಿರುವುದರಿಂದ ಸುಬ್ರಹ್ಮಣ್ಯದಲ್ಲಿ ಹಿಂಬದಿಗೂ ಎಂಜಿನ್ ಒಂದನ್ನು ಜೋಡಿಸಲಾಗುತ್ತದೆ. ಆ ಕಾರಣದಿಂದಾಗಿ ರೈಲು ಎಡಕುಮೇರಿ ತಲುಪಿದ್ದರೂ ಹಿಂದಕ್ಕೆ ಮರಳಿ ಬರಲು ಸಾಧ್ಯವಾಯಿತು.
ಪಾರಾದ ರೈಲು: ಯಶವಂತಪುರ-ಮಂಗಳೂರು ರೈಲು ಪೂರ್ವಾಹ್ನ 11.30ಕ್ಕೆ ಸಕಲೇಶಪುರ ನಿಲ್ದಾಣದಿಂದ ಹೊರಟಿದ್ದು, ಸಿರಿಬಾಗಿಲನ್ನು ದಾಟಿ 20 ನಿಮಿಷಗಳಲ್ಲಿ ಭೂ ಕುಸಿತ ಸಂಭವಿಸಿದೆ. ಕಳೆದ ಜೂನ್ ತಿಂಗಳಲ್ಲಿ ಈ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆ ಬಿದ್ದ ಪರಿಣಾಮ ಎರಡು ಬಾರಿ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೂಮ್ಮೆ ಈ ರೀತಿಯ ಘಟನೆ ನಡೆದಿರುವುದು ಆತಂಕಕಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.