ಫ‌ಲಿತಾಂಶದ ಆಧಾರದಲ್ಲಿ ಶಾಲೆಗೂ ಸಿಗಲಿದೆ ಶ್ರೇಣಿ


Team Udayavani, Dec 2, 2020, 6:10 AM IST

Schoolಫ‌ಲಿತಾಂಶದ ಆಧಾರದಲ್ಲಿ ಶಾಲೆಗೂ ಸಿಗಲಿದೆ ಶ್ರೇಣಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಎಸೆಸೆಲ್ಸಿ ಫ‌ಲಿತಾಂಶದ ಆಧಾರದಲ್ಲಿ ಜಿಲ್ಲೆಗಳಿಗೆ ಶ್ರೇಣಿ ನೀಡಿರುವ ಮಾದರಿಯಲ್ಲೇ ಶಾಲೆಗಳಿಗೂ ಶ್ರೇಣಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದ್ದು, ಅದರಂತೆ ಶ್ರೇಣಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ.

ವಿದ್ಯಾರ್ಥಿಗಳ ತೇರ್ಗಡೆಯ ಪ್ರಮಾಣವನ್ನೇ ಗುರಿಯಾಗಿಟ್ಟು ಕೊಳ್ಳದೇ, ಗುಣಾತ್ಮಕವಾಗಿ ಫ‌ಲಿತಾಂಶವನ್ನು ಅಳೆಯುವ ನೂತನ ಪದ್ಧತಿ ಅಳವಡಿಸಿಕೊಳ್ಳ ಲಾಗಿದೆ. ಇದು ಎಸೆಸೆಲ್ಸಿಯ ವಿದ್ಯಾರ್ಥಿಗಳಲ್ಲಿ ಗುಣಾತ್ಮಕ ಶಿಕ್ಷಣ ನೀತಿಯ ಅನುಷ್ಠಾನಕ್ಕೂ ಪೂರಕವಾಗಲಿದೆ. ಪ್ರತಿ
ವರ್ಷ ಎಸೆಸೆಲ್ಸಿ ಪರೀಕ್ಷೆ ಎದುರಿಸುವ ರೆಗ್ಯೂಲರ್‌ ವಿದ್ಯಾರ್ಥಿಗಳ ಸಾಧನೆಯನ್ನು ಆಧಾರವಾಗಿಟ್ಟುಕೊಂಡು ಶಾಲೆಗಳಿಗೆ ಗುಣಾತ್ಮಕ ಫ‌ಲಿತಾಂಶದ ಶ್ರೇಣಿಯನ್ನು ನೀಡಲಾಗುತ್ತದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ವಿವರ ನೀಡಿದರು.

ಶ್ರೇಣಿ ಲೆಕ್ಕಾಚಾರ ಮಾನದಂಡ
ಶಾಲೆಗೆ ಶ್ರೇಣಿ ನೀಡುವಾಗ ಎಸೆಸೆಲ್ಸಿ ಪರೀಕ್ಷೆಗೆ ಆ ಶಾಲೆಯಿಂದ ಕುಳಿತಿರುವ ರೆಗ್ಯೂಲರ್‌ ವಿದ್ಯಾರ್ಥಿಗಳಲ್ಲಿ ಉತ್ತೀರ್ಣತಾ ಪ್ರಮಾಣ, ಶಾಲೆಯ ಎಲ್ಲ ವಿದ್ಯಾರ್ಥಿಗಳ ಸರಾಸರಿ ಅಂಕ, ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಮತ್ತು ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪ್ರಮಾಣವನ್ನು ಕ್ರೋಡೀಕರಿಸಿ ಶ್ರೇಣಿ ನೀಡಲಾಗುತ್ತದೆ. ಈ ಮಾನದಂಡದಡಿ 75 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ಶಾಲೆಗೆ “ಎ’, 60ರಿಂದ 75 ಅಂಕ ಪಡೆದ ಶಾಲೆಗೆ “ಬಿ’ ಹಾಗೂ 60ಕ್ಕಿಂತ ಕಡಿಮೆ ಅಂಕ ಪಡೆದ ಶಾಲೆಗೆ “ಸಿ’ ಶ್ರೇಣಿ ನೀಡಲಾಗುತ್ತದೆ ಎಂದು ಮಂಡಳಿಯ ನಿರ್ದೇಶಕಿ ವಿ. ಸುಮಂಗಳಾ ಮಾಹಿತಿ ನೀಡಿದರು.

ಶ್ರೇಣಿಯ ಅನುಕೂಲತೆ?
ಶೇ.100ರಷ್ಟು ಅಥವಾ ಶೂನ್ಯ ಫ‌ಲಿತಾಂಶದ ಶಾಲೆಗಳು ಎಂಬ ಪರಿಕಲ್ಪನೆ ಇನ್ಮುಂದೆ ಇರುವುದಿಲ್ಲ. ಫ‌ಲಿತಾಂಶದ ಆಧಾರದಲ್ಲಿ ಶ್ರೇಣಿ ನೀಡುವುದರಿಂದ ಎ, ಬಿ ಅಥವಾ ಸಿ ಶ್ರೇಣಿಯ ಶಾಲೆಗಳು ಮಾತ್ರ ಉಳಿಯುತ್ತದೆ. ಬಿ ಮತ್ತು ಸಿ ಶ್ರೇಣಿಯ ಶಾಲೆಗಳಲ್ಲಿ ಶೈಕ್ಷಣಿಕವಾಗಿ ಆಗಬೇಕಿರುವ ಬದಲಾವಣೆಗಳೇನು ಎಂಬುದನ್ನು ಸುಲಭವಾಗಿ ಪತ್ತೆ ಹೆಚ್ಚಿ, ಗುಣಾತ್ಮಕ ಮೌಲ್ಯಮಾಪನದ ಮೂಲಕ ಉನ್ನತ್ತೀಕರಿಸಲು ಅನುಕೂಲವಾಗಲಿದೆ. ಶೂನ್ಯ ಫ‌ಲಿತಾಂಶದ ಶಾಲೆಯ ಪರಿಕಲ್ಪನೆ ಇರುವುದಿಲ್ಲ ಎಂದು ಅಧಿಕಾರಿ ತಿಳಿಸಿದರು.

ಶಾಲೆಗಳಿಗೆ ಶ್ರೇಣಿ ನೀಡುವುದರಿಂದ ವಿದ್ಯಾರ್ಥಿಗಳ ಗುಣಾತ್ಮಕ ಕಲಿಕೆಗೆ ಹೆಚ್ಚು ಸಹಕಾರಿ ಯಾಗಲಿದೆ. ಅಲ್ಲದೆ, ಶೈಕ್ಷಣಿಕ ಸುಧಾರಣೆಗೂ ಅನುಕೂಲವಾಗುತ್ತದೆ. ಎಸೆಸೆಲ್ಸಿ ಫ‌ಲಿತಾಂಶದ ಆಧಾರದಲ್ಲಿ ಪ್ರಸಕ್ತ ಸಾಲಿನಿಂದ ಶಾಲೆಗಳಿಗೆ ಶ್ರೇಣಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ.
– ವಿ. ಸುಮಂಗಳಾ, ನಿರ್ದೇಶಕಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.