ನಾರ್ವೆ ಮಾದರಿ ತಡೆಗೋಡೆ ಕೈಬಿಟ್ಟ ರಾಜ್ಯ ಸರ್ಕಾರ
Team Udayavani, Dec 24, 2019, 3:00 AM IST
ಬಾಗಲಕೋಟೆ: ರಾಜ್ಯದ ಅತಿ ದೊಡ್ಡ ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಯೋಜನೆ ಅನುಷ್ಠಾನದ ವೇಳೆ ಮುಳುಗಡೆ ಯಾಗುವ 12 ಗ್ರಾಮ ಹಾಗೂ ಸಾವಿರಾರು ಎಕರೆ ಭೂ ಸ್ವಾಧೀನ ಮಾಡಿಕೊಳ್ಳುವುದನ್ನು ತಡೆಯಲು ನಾರ್ವೆ ದೇಶದ ಮಾದರಿಯಲ್ಲಿ ತಡೆಗೋಡೆ ನಿರ್ಮಾಣ ಯೋಜನೆ ಕೈಬಿಡುವಂತೆ ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿ ಗಳಿಗೆ ಸೂಚಿಸಿದ್ದಾರೆ.
ಸೋಮವಾರ ಯುಕೆಪಿ ಅಧಿಕಾರಿಗಳ ಸಭೆ ನಡೆಸಿದ ಡಿಸಿಎಂ ಕಾರಜೋಳ, ನಾರ್ವೆ ಮಾದರಿ ತಡೆಗೋಡೆ ನಮ್ಮಲ್ಲಿ ಸಾಧ್ಯವಿಲ್ಲ. ಅದನ್ನು ಕೈಬಿಟ್ಟು, ಕೂಡಲೇ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕು ಎಂದರು. ನ್ಯಾ. ಬ್ರಿಜೇಶಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣದ ಅಂತಿಮ ತೀರ್ಪಿನಲ್ಲಿ ರಾಜ್ಯಕ್ಕೆ 170 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದು, ಆಲಮಟ್ಟಿ ಜಲಾಶಯವನ್ನು 524.256 ಮೀಟರ್ಗೆ ಎತ್ತರಿಸಲು ಅನುಮತಿ ನೀಡಿದೆ.
ಜಲಾಶಯ ಎತ್ತರಿಸಿದಾಗ ಬಾಗಲಕೋಟೆ ನಗರದ 3 ಸಾವಿರ ಕಟ್ಟಡ, ಅವಳಿ ಜಿಲ್ಲೆಯ 20 ಗ್ರಾಮಗಳು, 97 ಸಾವಿರ ಎಕರೆ ಭೂಮಿ ಹಿನ್ನೀರಿನಲ್ಲಿ ಮುಳುಗಡೆಯಾಗುತ್ತದೆ. ಇದನ್ನು ತಡೆಯಲು ನಾರ್ವೆ ಮಾದರಿ ತಡೆಗೋಡೆ ನಿರ್ಮಿಸಲು ಹಿಂದಿನ ಕಾಂಗ್ರೆಸ್ ಸರ್ಕಾರ ಚಿಂತಿಸಿತ್ತು. ಇದಕ್ಕಾಗಿ ಯೋಜನೆ ರೂಪಿಸಿ ಸುಮಾರು 5 ಸಾವಿರ ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ ಜಮೀನು ಮತ್ತು ಗ್ರಾಮಗಳನ್ನು ಉಳಿಸಲು ಸಾಧ್ಯವಿದೆ ಎಂದು ತಿಳಿಸಲಾಗಿತ್ತು. ಈ ಕುರಿತು ಪರ-ವಿರೋಧ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ