ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸಿದೆ: ಡಿ.ಕೆ ಶಿವಕುಮಾರ್


Team Udayavani, Sep 22, 2020, 6:23 PM IST

dk-shivakumar

ಬೆಂಗಳೂರು: ಕೋವಿಡ್ ನಂತಹ ಕಠಿಣ ಪರಿಸ್ಥಿತಿಯಲ್ಲಿ ಜನರ ಕಷ್ಟಗಳಿಗೆ ನಮ್ಮ ಹೃದಯ ಮಿಡಿಯಬೇಕಿತ್ತು. ಆದರೆ ರಾಜ್ಯ ಸರ್ಕಾರ ರೈತರು, ಬಡವರು, ಕಾರ್ಮಿಕರ ವಿಚಾರದಲ್ಲಿ ಅಮಾನವೀಯವಾಗಿ ನಡೆದುಕೊಂಡಿದ್ದು, ರಾಜ್ಯದ ಜನ ಇವರನ್ನು ಕ್ಷಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಧಾನಸಭೆಯಲ್ಲಿ ಹರಿಹಾಯ್ದಿದ್ದಾರೆ.

ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ ಮಂಗಳವಾರದ ಕಲಾಪದಲ್ಲಿ ಕೋವಿಡ್ ವಿಚಾರವಾಗಿ ಮಾತನಾಡಿದ ಡಿ.ಕೆ ಶಿವಕುಮಾರ್, ಕೋವಿಡ್ ಪರಿಸ್ಥಿತಿಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಇದನ್ನು ದೇವರ ಆಟ ಎಂದು ಹೇಳಿದ್ದಾರೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಅಂತಾ ಇದ್ದ ಮೇಲೆ ಅದಕ್ಕೆ ಅದರದೇ ಆದ ಜವಾಬ್ದಾರಿ, ನಮಗೆ ನಮ್ಮದೇ ಆದ ಜವಾಬ್ದಾರಿ ಇರುತ್ತದೆ. ಕಳೆದ ಅಧಿವೇಶನ ನಡೆಯುವಾಗ ಈ ಪರಿಸ್ಥಿತಿ ಎದುರಾಗಿತ್ತು. ದೇಶದ ಪ್ರಧಾನಿಗಳು ಕೇವಲ ನಾಲ್ಕು ಗಂಟೆ ಕಾಲಾವಕಾಶ ನೀಡಿ ಲಾಕ್ ಡೌನ್ ಹೇರಿದರು. ದೀಪ ಹಚ್ಚಲು, ಗಂಟೆ ಹೊಡೆಯಲು ನಾಲ್ಕು ದಿನ ಸಮಯ ಕೊಟ್ಟರು. ನಾವು ಅದನ್ನು ಸ್ವೀಕರಿಸಿದೆವು. ಮುಖ್ಯಮಂತ್ರಿಗಳು ಸ್ವಲ್ಪ ಮನಸ್ಸು ಮಾಡಿ ಒಂದು ದಿನದೊಳಗೆ ಹಳ್ಳಿಗೆ ಹೋಗುವವರು ಹೋಗಿ ಎಂದರು.

ಬಡವರ ಅನ್ನದಲ್ಲಿ ರಾಜಕೀಯ ಮಾಡಬೇಕಾ?

ಪ್ರಧಾನಮಂತ್ರಿಗಳು 21 ದಿನಗಳಲ್ಲಿ ಈ ಯುದ್ಧ ಗೆಲ್ಲುತ್ತೇವೆ ಅಂತಾ ಹೇಳಿದ್ದರೂ ನಾವು ಸಹಕಾರ ನೀಡುತ್ತಲೇ ಬಂದಿದ್ದೇವೆ. ಆದರೆ ಆಡಳಿತರೂಢ ಬಿಜೆಪಿಯವರು ವಿವಿಧ ಇಲಾಖೆಗಳು, ಅಕ್ಷಯ ಪಾತ್ರೆಯವರು, ಇನ್ಫೋಸಿಸ್ ಸಂಸ್ಥೆಯವರು ಜನರಿಗೆ ಕೊಟ್ಟ ಆಹಾರ ಕಿಟ್ ಗಳ ಮೇಲೆ ತಮ್ಮ ಫೋಟೋ ಹಾಕಿಕೊಂಡು ಹಂಚಿದಿರಲ್ಲಾ… ಯಾವ ವ್ಯವಸ್ಥೆಯಲ್ಲಿ ಈ ಸರ್ಕಾರ ನಡೆಯುತ್ತಿದೆ. ಆನೇಕಲ್ ನಲ್ಲಿ ಬಾಣಂತಿಯರು, ಮಕ್ಕಳ ಪೌಷ್ಠಿಕ ಆಹಾರ ಕಿಟ್ ಮೇಲೆ ಬಿಜೆಪಿ ಚಿಹ್ನೆ ಹಾಕಿ ಅಕ್ರಮ ಮಾಡಿದರಲ್ಲ ಇವರ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ..? ಇದು ಒಂದು ಸರ್ಕಾರನಾ?

ನಾವು ರಾಜಕಾರಣ ಮಾಡಬೇಕು, ಮಾಡೋಣ. ಆದರೆ ಕೋವಿಡ್  ಸಂಕಷ್ಟದ  ಸಮಯದಲ್ಲೂ ಬಡವರಿಗೆ ಹಂಚುವ ಆಹಾರದಲ್ಲೂ ರಾಜಕಾರಣ ಮಾಡಬೇಕಿತ್ತಾ? ಬಡವರು ತಿನ್ನುವ ಆಹಾರದಲ್ಲಿ ಪ್ರಚಾರ ಪಡೆದು ಮತ ಕೇಳಬೇಕಾ? ವಿರೋಧ ಪಕ್ಷದವರು ಅಕ್ರಮದ ಬಗ್ಗೆ ಆರೋಪ ಮಾಡಿದಾಗ ನೀವು ಕ್ರಮ ಜರುಗಿಸಲಿಲ್ಲ ಎಂದರೆ, ಈ ಅಕ್ರಮದಲ್ಲಿ ನೀವೂ ಭಾಗಿಯಾಗಿದ್ದೀರಿ ಎಂಬುದನ್ನು ತೋರಿಸುತ್ತದೆ.

ಎಷ್ಟು ರೈತರಿಗೆ ನೆರವಾಗಿದ್ದೀರಿ?

ಎಷ್ಟು ರೈತರ ಬೆಳೆ ಖರೀದಿ ಮಾಡಿದ್ದೀರಿ, ಎಷ್ಟು ರೈತರಿಗೆ ಮಾರುಕಟ್ಟೆ ಕಲ್ಪಿಸಿದ್ದೀರಿ, ಎಷ್ಟು ರೈತರಿಗೆ ಪರಿಹಾರ ಕಲ್ಪಿಸಿಕೊಟ್ಟಿದ್ದೀರಿ? ಕೃಷಿ ಸಚಿವರು ಉತ್ತರ ನೀಡಲಿ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡಲ್ಲ ಅಂತಾ ಯಡಿಯೂರಪ್ಪನವರು ಹೇಳಿಕೆ ನೀಡಿದರು. ಆದೇಶ ಹೊರಡಿಸಿದರು. ಆದರೆ ಎಷ್ಚು ಅಧಿಕಾರಿಗಳು ಹೋಗಿ ಬೆಳೆ ನಷ್ಟದ ಸಮೀಕ್ಷೆ ಮಾಡಿದ್ದಾರೆ?

ಕಾರ್ಮಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ:

ಈ ಸರ್ಕಾರ ರೈತರು, ಕಾರ್ಮಿಕರನ್ನು ರಕ್ಷಿಸುವಲ್ಲೂ ವಿಫಲವಾಯಿತು. ಕಾರ್ಮಿಕರಿಗೆ ಮೂರು ಪಟ್ಟು ಬಸ್ ದರ ಏರಿಕೆ ವಿರುದ್ಧ ನಾವು ಹೋರಾಟ ಮಾಡಿದ ಮೇಲೆ ದೊಡ್ಡ ಮನಸ್ಸು ಮಾಡಿ ಅವರಿಗೆ ಐದು ದಿನಗಳ ಕಾಲ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಯಿತು. ಈ ಕಠಿಣ ಸಮಯದಲ್ಲಿ ನಮ್ಮ ಹೃದಯ ಜನರಿಗಾಗಿ ಮಿಡಿಯುತ್ತಿದೆ. ಸರ್ಕಾರದ ಬೇಜವಾಬ್ದಾರಿಯಿಂದ ಈ ಕಾಯಿಲೆ ಹರಡಿದೆ. ಹೊರ ದೇಶದಿಂದ ಬರುವವರನ್ನು ಮುಂಚಿತವಾಗಿಯೇ ತಡೆದಿದ್ದರೆ, ಇವತ್ತು ಇಷ್ಟು ತೊಂದರೆ ಆಗುತಿತ್ತಾ? ನಿಮ್ಮ ಬೇಜವಾಬ್ದಾರಿ ತನಕ್ಕೆ ಇಡೀ ದೇಶ ನರಳುವಂತಾಗಿದೆ.

ಸರ್ಕಾರ ಘೋಷಣೆ ಮಾಡಿದ ಪ್ಯಾಕೇಜ್ ಎಷ್ಟು ಜನಕ್ಕೆ ತಲುಪಿದೆ? ಈ ಬಗ್ಗೆ ಮಾಹಿತಿ ಪಡೆಯೋಣ ಎಂದರೆ ಕಾರ್ಮಿಕ ಸಚಿವರು ಇಲ್ಲಿ ಇಲ್ಲ. ಇವತ್ತಿನವರೆಗೂ ಶೇ.10-20 ರಷ್ಟು ಜನರಿಗೆ ಈ ಪರಿಹಾರ ಹಣ ತಲುಪಿಲ್ಲಸರ್ಕಾರ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿದ್ದರೆ, ಕಾರ್ಮಿಕರು ಯಾಕೆ ತಮ್ಮ ಊರಿಗೆ ವಾಪಸ್ ತೆರಳುತ್ತಿದ್ದರು.

ಈ ಸರ್ಕಾರಕ್ಕೆ ಕೊನೇ ಪಕ್ಷ ವೃದ್ಧರಿಗೆ, ವಿಧವೆಯರಿಗೆ, ವಿಶೇಷಚೇತನರಿಗೆ ಪಿಂಚಣಿ ನೀಡಲು ಸಾಧ್ಯವಾಗಿಲ್ಲ. ಅದನ್ನು ನೀಡಲು ಈಗ ಕೆ1, ಕೆ2 ಅಂತಾ ಏನೇನೋ ವಿಂಗಡಣೆ ಮಾಡಿದ್ದಾರೆ. 20, 30 ವರ್ಷಗಳಿಂದ 500, 1000 ರೂಪಾಯಿ ಕೊಡಲಾಗುತ್ತಿದೆ. ಇದನ್ನು ನೀಡುವುದರಲ್ಲೂ ರಾಜಕೀಯ ಮಾಡಬೇಕಾ?

ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡದಿರುವುದೂ ಒಂದು ಸಂಸ್ಕೃತಿನಾ?

ಆದರೆ ಈ ಸರ್ಕಾರ ಏನು ಮಾಡುತ್ತಿದೆ. ಬಡವರು ತಿನ್ನುವ ಅನ್ನದಲ್ಲಿ ಅಕ್ರಮ ಮಾಡುತ್ತಿದೆ. ಹೆಣದ ಮೇಲೆ ಹಣ ಮಾಡಲು ಹೊರಟಿರುವುದು ಒಂದು ಸರ್ಕಾರವೇ? ಈ ಸರ್ಕಾರದ ಅಕ್ರಮವನ್ನು ನಾವು ನೋಡಿಕೊಂಡು ಸುಮ್ಮನಿರಬೇಕಾ? ಎಷ್ಟು ದಿನ ನಾವು ತಾಳ್ಮೆಯಿಂದ ಇರಬೇಕು. ಮಾಧ್ಯಮಗಳು ಪ್ರತಿ ವಿಚಾರವನ್ನು ಪ್ರಕಟಿಸಿವೆ. ಕೊರೋನಾದಿಂದ ಸತ್ತವರ ಹೆಣಕ್ಕೆ ಒಂದು ಒಳ್ಳೆಯ ಅಂತ್ಯ ಸಂಸ್ಕಾರ ಮಾಡಲು ನಿಮ್ಮಿಂದ ಸಾಧ್ಯವಾಗಲಿಲ್ಲ. ಇದು ಯಾವ ಸಂಸ್ಕೃತಿ? ಎಂದು ಡಿಕೆ ಶಿವಕುಮಾರ್ ಹರಿಹಾಯ್ದಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.