ಮೂವರು ರೈತರ ಆತ್ಮಹತ್ಯೆ
Team Udayavani, Aug 26, 2019, 3:00 AM IST
ಶಿವಮೊಗ್ಗ/ದಾವಣಗೆರೆ/ಚಿಕ್ಕೋಡಿ: ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದಕ್ಕೆ ನೊಂದು ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ರಿಪ್ಪನ್ಪೇಟೆ ಸಮೀಪದ ಮೈಥಳ್ಳಿ ಮಳೂರು ಗ್ರಾಮದ ಶಂಕರಪ್ಪ ಈರ ಶೆಟ್ಟಿ (55) ಎಂಬುವರು ತಮ್ಮ ಹೊಲದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ತಮ್ಮ 1.10 ಎಕರೆ ಜಮೀನಿನಲ್ಲಿ ಅಡಿಕೆ ಗಿಡ ಬೆಳೆಸಿದ್ದರು. ಕೃಷಿ ಕಾರ್ಯಕ್ಕಾಗಿ ಸ್ವ ಸಹಾಯ ಸಂಘವೊಂದರಲ್ಲಿ 50 ಸಾವಿರ ರೂ.ಸಾಲ ಮಾಡಿದ್ದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಜಮೀನಿನಲ್ಲಿನ ಬೆಳೆ ಸಂಪೂರ್ಣ ನಾಶವಾಗಿತ್ತು.
ದಾವಣಗೆರೆ ತಾಲೂಕಿನ ಜಡಗನಹಳ್ಳಿ ಗ್ರಾಮದಲ್ಲಿ ರೈತ ನಿಂಗಪ್ಪ (50) ಎಂಬುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟಾರೆ 5.25 ಲಕ್ಷ ರೂ.ಸಾಲ ಮಾಡಿದ್ದರು.ಇದೇ ವೇಳೆ, ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಾಮದೇವ ರಾಮಕೃಷ್ಣ ಪಿರಾಜೆ (45) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಿಧ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನಾಲ್ಕು ಲಕ್ಷ ರೂ. ಸಾಲ ಮಾಡಿದ್ದರು. ಇತ್ತೀಚಿನ ಪ್ರವಾಹದಿಂದ ಕಬ್ಬಿನ ಬೆಳೆ ನಾಶವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ