ಶಿಕ್ಷಕಿಯನ್ನು ಗುಂಡಿಟ್ಟು ಕೊಂದು ಆತ್ಮಹತ್ಯೆ
Team Udayavani, Jun 15, 2019, 3:00 AM IST
ಗೋಣಿಕೊಪ್ಪಲು: ಶಿಕ್ಷಕಿಗೆ ಗುಂಡು ಹಾರಿಸಿ ಕೊಲೆಗೈದು, ಬಳಿಕ ಆರೋ ಪಿಯೂ ಅದೇ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಲೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಬಾಳೆಲೆ ನಿವಾಸಿ, ಗೋಣಿಕೊಪ್ಪಲು ಲಯನ್ಸ್ ಶಾಲೆ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (45) ಕೊಲೆಯಾದವರು. ಮಾಚಿಮಾಡ ಜಗದೀಶ್ (55) ಆರೋಪಿ. ಬಾಳೆಲೆ ಪೊಲೀಸ್ ಉಪಠಾಣೆ ಮುಂಭಾಗದಲ್ಲೇ ಘಟನೆ ನಡೆದಿದೆ.
ಆಶಾ ಅವರು ಶುಕ್ರವಾರ ಬೆಳಗ್ಗೆ 8:15ಕ್ಕೆ ಶಾಲೆಯ ಬಸ್ಸಿಗಾಗಿ ಕಾಯುತ್ತಿದ್ದಾಗ ಕಾಫಿ ತೋಟದಿಂದ ದುಷ್ಕರ್ಮಿ ಒಂಟಿ ನಳಿಕೆಯ ಕೋವಿಯಿಂದ ಗುಂಡು ಹಾರಿಸಿದ್ದಾನೆ. ಪರಿಣಾಮ ಶಿಕ್ಷ ಕಿ ಸ್ಥಳದಲ್ಲೇ ಮೃತಪಟ್ಟರು. ಬಳಿಕ ಆರೋ ಪಿ ಆಶಾ ಮೃತಪಟ್ಟ ಸ್ಥಳದಿಂದ 20 ಅಡಿ ದೂರದ ಕಾಫಿ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶಿಕ್ಷಕಿಯನ್ನು ರಕ್ಷಿಸಲು ಮುಂದಾದ ದ್ವಿತೀಯ ಪಿಯು ವಿದ್ಯಾರ್ಥಿ ವೈ.ಕೆ. ದಿನೇಶ್ ಹಾಗೂ ತೋಟದ ಕಾರ್ಮಿಕ ಪಿ.ಬಿ. ಪೆಮ್ಮಿ ಅವರ ಮೇಲೂ ಆರೋಪಿ ಗುಂಡು ಹಾರಿಸಿದ್ದು, ಅವರಿಬ್ಬರೂ ಗಾಯಗೊಂಡಿದ್ದಾರೆ.
ಬೆಳಗ್ಗಿನಿಂದಲೇ ಕಾದು ಕುಳಿತಿದ್ದ!: ಶಿಕ್ಷಕಿಯನ್ನು ಕೊಲ್ಲಲು ಆರೋ ಪಿಯು ಆಕೆಯ ಮನೆಯ ಸಮೀಪ ಬೆಳಗ್ಗಿನಿಂದಲೇ ಕಾದು ಕುಳಿತಿದ್ದ. ಆಶಾ ಕಾವೇರಮ್ಮ ಮನೆಯಿಂದ ಹೊರಬಂದ ಕೂಡಲೇ ಗುಂಡು ಹಾರಿಸಿದ್ದರೂ ಅದು ಗುರಿ ತಪ್ಪಿತ್ತು. ಬಳಿಕ ಆಕೆ ಯ ನ್ನು ಮನೆಯಿಂದ 100 ಮೀ. ದೂರದ ಮುಖ್ಯ ರಸ್ತೆಯ ಬದಿಯಲ್ಲಿರುವ ಕೊಡವ ಸಮಾಜದ ಸಮೀಪ ಕೊಲೆ ಮಾಡಿದ್ದಾನೆ.
ಹಿಂದೆ ಸ್ನೇಹಿತರಾಗಿದ್ದರು: ಹಲವು ವರ್ಷಗಳಿಂದ ಆಶಾ ಹಾಗೂ ಜಗದೀಶ್ ನಡುವೆ ಗಾಢವಾದ ಸ್ನೇಹವಿದ್ದು, 2 ವರ್ಷದಿಂದ ಸ್ನೇಹದಲ್ಲಿ ಬಿರುಕು ಮೂಡಿತ್ತು. ಲೇವಾದೇವಿ ವಹಿವಾಟಿನಿಂದಾಗಿ ಸ್ನೇಹ ಮುರಿದು ಬಿದ್ದಿತ್ತು ಎನ್ನಲಾಗುತ್ತಿದೆ.
ಬಳಿಕ ಜಗದೀಶ್ ಆಕೆ ಜತೆ ಮರು ಸ್ನೇಹಕ್ಕಾಗಿ ಶಿಕ್ಷಕಿಯ ಫೋಟೋವನ್ನು ನೀಲಿ ಚಿತ್ರ ತಾರೆಯ ಫೋಟೋದೊಂದಿಗೆ ಸೇರಿಸಿ ಬ್ಲ್ಯಾಕ್ವೆುಲ್ ಮಾಡುತ್ತಿದ್ದ. ಈ ಬಗ್ಗೆ ಗೋಣಿಕೊಪ್ಪಲು ಠಾಣೆಯಲ್ಲಿ ದೂರು ದಾಖಲಾಗಿ ಜಗದೀಶ್ ಜೈಲುವಾಸ ಅನುಭವಿಸಿದ್ದ. ಇದೇ ಕೋಪದಿಂದ ಹಲವು ಬಾರಿ ಕೊಲೆ ಬೆದರಿಕೆಯೊಡ್ಡಿದ್ದ. ಈ ಬಗ್ಗೆಯೂ ಎಸ್ ಪಿಗೆ ದೂರು ನೀಡಲಾಗಿತ್ತು. ಈತನ ವರ್ತನೆಯಿಂದ ಬೆದರಿದ್ದ ಶಿಕ್ಷಕಿ ಮನೆ ಸುತ್ತ ಸಿ.ಸಿ.ಕ್ಯಾಮರಾ ಅಳವಡಿಸಿದ್ದರು.
ಕ್ರಿಮಿನಲ್ ಹಿನ್ನೆಲೆ: ಜಗದೀಶ್ ಈ ಹಿಂದೆ ಹಲವು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದು, ಪೊನ್ನಂಪೇಟೆ ಹಾಗೂ ಗೋಣಿಕೊಪ್ಪಲು ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ಕಾರಣದಿಂದ ಸಾರ್ವಜನಿಕರಿಂದಲೂ ಪೆಟ್ಟು ತಿಂದಿದ್ದ ಎನ್ನಲಾಗಿದೆ. ಆಶಾ ಕಾವೇರಮ್ಮ ಇಬ್ಬರು ಪುತ್ರಿಯ ರೊಂದಿಗೆ ಜೀವನ ನಡೆಸುತ್ತಿದ್ದರು. ಓರ್ವ ಪುತ್ರಿ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ಮತ್ತೂಬ್ಬಳು ಅಂತಿಮ ಪದವಿ ವಿದ್ಯಾರ್ಥಿ. ಆಶಾ ಶಾಲೆಯಲ್ಲಿ ಉತ್ತಮ ಶಿಕ್ಷಕಿ ಎಂದು ಹೆಸರು ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ