ರಿಪೋರ್ಟ್ ಕಾರ್ಡ್ ಜನರ ಮುಂದಿಡುವ ಸಮಯ ಬಂದಿದೆ: ಡಾ| ಸುಧಾಕರ್
Team Udayavani, Aug 17, 2022, 10:27 PM IST
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಸರ್ಕಾರ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿಸಿದ ತೃಪ್ತಿ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 3 ವರ್ಷದಿಂದ ಉತ್ತಮ ಆಡಳಿತ ನೀಡಿದ್ದೇವೆ. ಇದೀಗ ನಮ್ಮ ರಿಪೋರ್ಟ್ ಕಾರ್ಡ್ ಜನರ ಮುಂದಿಡುವ ಸಮಯ ಬಂದಿದೆ. ನಮ್ಮ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಎಲ್ಲ ಆರೋಪಗಳು ಸತ್ಯಕ್ಕೆ ದೂರ ಎಂದು ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ನಡೆಸುವ ಸಿದ್ಧತೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಕಾರ್ಯಕ್ರಮ ಸಿದ್ಧತೆ ಬಗ್ಗೆ ಸಭೆ ನಡೆಸಲಾಗಿದೆ. ಮುಖ್ಯಮಮಂತ್ರಿಯವರು ವರಿಷ್ಠರ ಜತೆ ಚರ್ಚಿಸಿ ದಿನಾಂಕ ನಿಗದಿಪಡಿಸಲಿದ್ದಾರೆ ಎಂದರು.