ಸೋಲಿನ ಕಾರಣ ತಿಳಿಯಲು ಸತ್ಯ ಶೋಧನಾ ಸಮಿತಿ
Team Udayavani, Jun 4, 2019, 3:00 AM IST
ಬೆಂಗಳೂರು: ಕಳೆದ ವರ್ಷದ ವಿಧಾನಸಭೆ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಗ್ಗೆ ವಾಸ್ತವ ತಿಳಿಯಲು ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸತ್ಯ ಶೋಧನಾ ಸಮಿತಿ ರಚಿಸಿದ್ದಾರೆ.
ಎರಡೂ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ ಹಾಗೂ ಕಾಂಗ್ರೆಸ್ ಬಗ್ಗೆ ಜನರಿಗೆ ಇರುವ ಅನಿಸಿಕೆಗಳನ್ನು ತಿಳಿದುಕೊಳ್ಳಲು ಈ ಸಮಿತಿ ರಚಿಸಲಾಗಿದೆ. ಈ ಸಮಿತಿ ಜಿಲ್ಲೆಗಳಿಗೆ ಭೇಟಿ ನೀಡಿ ವಿಧಾನಸಭಾವಾರು ಬೂತ್ ಮಟ್ಟದಿಂದ ರಾಜ್ಯ ಮಟ್ಟದ ಮುಖಂಡರನ್ನು ಸಂಪರ್ಕಿಸಿ ಪಕ್ಷಕ್ಕೆ ಹಿನ್ನಡೆಯಾಗಲು ಕಾರಣಗಳನ್ನು ತಿಳಿದುಕೊಂಡು ವರದಿ ನೀಡುವಂತೆ ಸೂಚಿಸಲಾಗಿದೆ.
ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ಸಮಿತಿ ಸಂಚಾಲಕರನ್ನಾಗಿ ಮಾಡಲಾಗಿದೆ. ಮಾಜಿ ಸಚಿವರಾದ ವೀರಕುಮಾರ್ ಪಾಟೀಲ್, ನಜೀರ್ ಅಹಮದ್ ಹಾಗೂ ಮಾಜಿ ಸಂಸದ ಧ್ರುವ ನಾರಾಯಣ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!