ನಡೆಯದ “ಉತ್ತರಮುಖೀ’ ಚರ್ಚೆ


Team Udayavani, Dec 25, 2018, 9:33 AM IST

belgam.png

ಹುಬ್ಬಳ್ಳಿ: ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಹಾಗೂ ಅಭಿವೃದ್ಧಿ ಕುರಿತು ನಡೆಯದ ಚರ್ಚೆ ಬಗ್ಗೆ ಆಡಳಿತ ಪಕ್ಷದ ಕೆಲ ಶಾಸಕರು ಅಸಮಾಧಾನದ ಜತೆಗೆ ಬಿಜೆಪಿ ವರ್ತನೆ ಕಾರಣ ಎಂದಿದ್ದರೆ; ಬಿಜೆಪಿಯವರು “ಇದೊಂದು ಉತ್ತರ ವಿರೋಧಿ ಸರ್ಕಾರ’ ಎಂದು ಎದುರೇಟು ನೀಡಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ನಡೆಯುವುದೇ ಕೇವಲ 10ದಿನ ಅಧಿವೇಶನ. ಅದರಲ್ಲೂ ಶನಿವಾರ, ಭಾನುವಾರ ತೆಗೆದು ಕೊನೇ ಅರ್ಧದಿನ ಪಕ್ಕಕ್ಕಿಟ್ಟರೆ ಕೇವಲ ಏಳು ದಿನ ಮಾತ್ರ ಅಧಿವೇಶನ ನಡೆದಂತಾಗುತ್ತದೆ. ಈ ಭಾಗದಲ್ಲಿ ನಡೆಯುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ನಡೆದು ಪರಿಹಾರ ದೊರೆಯುತ್ತದೆ ಎಂದು ಭಾವಿಸುವವರಿಗೆ ಈ ಬಾರಿ ನಿರಾಸೆಯಾಗಿದೆ. ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಿ ಬರದ ಮೇಲೆ ಚರ್ಚೆ ನಡೆಯಿತಾದರೂ, ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ನಡೆಯಲಿಲ್ಲ.
ಅಧಿವೇಶನದ ಕೊನೇ ಎರಡು ದಿನ ಕಲಾಪ ಹೋರಾಟಕ್ಕೆ ಬಲಿಯಾಯಿತು.

ನಿರೀಕ್ಷೆ ಹೆಚ್ಚಿಸಿದ ನಿರ್ಧಾರ: ಸುವರ್ಣಸೌಧ ಜನರ ಬಳಕೆಗೆ ಪೂರಕವಾಗಿ ವಿವಿಧ ಇಲಾಖೆಗಳನ್ನು ಇಲ್ಲಿಗೆ
ಸ್ಥಳಾಂತರಿಸಬೇಕೆಂಬ ಬೇಡಿಕೆ ಹಲವು ವರ್ಷಗಳದ್ದಾಗಿತ್ತು. ಇದೀಗ ಸಮ್ಮಿಶ್ರ ಸರ್ಕಾರ ವಿವಿಧ ಒಂಭತ್ತು
ಇಲಾಖೆಗಳು, ಅದರ ವಿಭಾಗಗಳನ್ನು ಉತ್ತರ ಕರ್ನಾಟಕಕ್ಕೆ ವರ್ಗಾಯಿಸುವ ಮಹತ್ವದ ನಿರ್ಣಯ
ಕೈಗೊಂಡಿರುವುದು ಆಡಳಿತ ಪಕ್ಷದ ಶಾಸಕರ ಸಮಾಧಾನಕ್ಕೆ ಕಾರಣವಾಗಿದ್ದರೆ, ವಿಪಕ್ಷದವರು ಇದೊಂದು ಕಣ್ಣೊರೆಸುವ ತಂತ್ರ ಎಂದು ಟೀಕಿಸಿದ್ದಾರೆ. ಅಧಿವೇಶನದ ಸಚಿವ ಸಂಪುಟ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಕೃಷ್ಣ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ, ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ದಿ ನಿಗಮ, ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವಿಭಜಿಸಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ನಿಗಮ, ಪುರಾತತ್ವ,
ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ರಾಜ್ಯ ಮಾನವ ಹಕ್ಕುಗಳ ಆಯೋಗದ ಒಬ್ಬ ಸದಸ್ಯರ ಕಚೇರಿ, ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಪೈಕಿ ಎರಡು ಮಾಹಿತಿ ಆಯುಕ್ತರ ಕಚೇರಿ ಬೆಳಗಾವಿ, ಎರಡು ಕಲಬುರಗಿಗೆ ಹಾಗೂ ಲೋಕಾಯುಕ್ತದ ಎರಡು ಉಪಲೋಕಾಯುಕ್ತ ಕಚೇರಿಯಲ್ಲಿ ಒಂದನ್ನು ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ.

ಈ ಮೂಲಕ ಉತ್ತರ ಕರ್ನಾಟಕಕ್ಕೆ ವಿವಿಧ ಕಚೇರಿಗಳ ಸ್ಥಳಾಂತರ ಪರ್ವ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ
ಇನ್ನಷ್ಟು ಕಚೇರಿಗಳು ಬರಲಿವೆ ಎಂಬುದು ಶಾಸಕರ ಅಭಿಮತವಾದರೆ, ಕೃಷ್ಣ ಜಲಭಾಗ್ಯ ನಿಗಮ, ನೀರಾವರಿ ನಿಗಮ ಉ.ಕ ದಲ್ಲಿಯೇ ಇವೆ ಎಂದು ಬಿಜೆಪಿ ಆರೋಪಿಸಿದೆ.

ದಿನಗಳು ಹೆಚ್ಚಿಸಲು ಒತ್ತಾಯ: ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸರಿಯಾದ ಚರ್ಚೆಯಾಗದಿರುವ ಬಗ್ಗೆ ಉ.ಕ.ದಲ್ಲಿನ ಶಾಸಕರು ಮತ್ತು ವಿಪಕ್ಷ ಬಿಜೆಪಿ ವರಿಷ್ಠರ ಅಭಿಪ್ರಾಯದಲ್ಲಿ ಒಮ್ಮತ ವ್ಯಕ್ತವಾಗಿದೆ. ಉತ್ತರಾಧಿವೇಶನ ಕೇವಲ ಕಾಟಾಚಾರಕ್ಕಾಗದೆ, ಈ ಭಾಗದ ಸಮಸ್ಯೆಗಳಿಗೆ ಕನಿಷ್ಠ ಪರಿಹಾರ ನೀಡಿದ ಸಂದೇಶ ರವಾನಿಸಬೇಕು.
ಆದರೆ ಅದು ಆಗುತ್ತಿಲ್ಲ. ಉ.ಕ. ಸಮಸ್ಯೆ, ಅಭಿವೃದ್ಧಿ ಕುರಿತು ಚರ್ಚಿಸಲು ವಿಶೇಷ ಅಧಿವೇಶನವನ್ನು ಸುವರ್ಣ
ವಿಧಾನಸೌಧದಲ್ಲಿ ಕರೆಯಬೇಕು. ಇಲ್ಲವೇ ಅಧಿವೇಶನ 10 ದಿನದ ಬದಲು 15 ದಿನ ನಡೆಸಬೇಕೆಂಬ ಅಭಿಪ್ರಾಯ ಹಾಗೂ ಒತ್ತಾಯ ಹಲವು ಶಾಸಕರದ್ದಾಗಿದೆ.

– ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.