ಕೆಜಿಎಫ್ ಬ್ಲಾಕ್ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ;ಚೆಲ್ಲಿತು ರಕ್ತ!
Team Udayavani, Dec 20, 2018, 1:10 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಭಾರೀ ನಿರೀಕ್ಷೆಯ ಕೆಜಿಎಫ್ ಚಿತ್ರದ ಟಿಕೆಟ್ಗಳಿಗಾಗಿ ಜನರು ಮುಗಿ ಬಿದ್ದಿದ್ದು, ಇದೇ ವೇಳೆ ಚಿತ್ರಮಂದಿರದ ಸಿಬಂದಿಯೊಬ್ಬರಿಗೆ ಇರಿದ ಘಟನೆ ನಡೆದಿದೆ.
ಮಾಗಡಿ ರಸ್ತೆ ಯ ವಿರೇಶ್ ಚಿತ್ರಮಂದಿರದ ಬಳಿ ಘಟನೆ ನಡೆದಿದ್ದು, ಬ್ಲಾಕ್ನಲ್ಲಿ ಟಿಕೆಟ್ ಮಾರುವ ಉದ್ದೇಶ ಹೊಂದಿದ್ದ ದುಷ್ಕರ್ಮಿ ಚಿತ್ರಮಂದಿರದ ಸಿಬಂದಿ ಬಳಿ ಟಿಕೆಟ್ ಕೇಳಿದ್ದು ಕೊಡಲು ಸಾಧ್ಯವಿಲ್ಲ ಎಂದಾಗ ಕೃತ್ಯ ಎಸಗಿ ಪರಾರಿಯಾಗಿದ್ದಾನೆ.
ಅರವಿಂದ್ ಎಂಬ ಚಿತ್ರಮಂದಿರದ ಸಿಬಂದಿಯ ಎಡ ಕೈಯ ಬೆರಳೊಂದು ತುಂಡಾಗಿದ್ದು, ಬಲ ಕೈಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅರವಿಂದ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಾಗಿ ಶೋಧ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ