ಯೂಟ್ಯೂಬ್ ನೋಡಿ ಡಿವೈಸ್ ಬಳಸಿ ಕಾರು ಕಳವು: ಆರೋಪಿ ಬಂಧನ


Team Udayavani, Jul 12, 2022, 7:05 AM IST

ಯೂಟ್ಯೂಬ್ ನೋಡಿ ಡಿವೈಸ್ ಬಳಸಿ ಕಾರು ಕಳವು: ಆರೋಪಿ ಬಂಧನ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಯುಟ್ಯೂಬ್‌ ನೋಡಿ ಕಾರು ಕಳವು ಮಾಡುತ್ತಿದ್ದ ಆರೋಪದಲ್ಲಿ ಕೋಲಾರದ ಮುಳಬಾಗಿಲು ಮೂಲದ ಅರುಣ್‌ ಕುಮಾರ್‌ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಹತ್ತು ಕಾರುಗಳು, ಒಂದು ಬೈಕ್‌ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ “ಎಕ್ಸ್‌ಟೂಲ್‌ ಆಟೋ ಡಯಾಗ್ನಿಸ್ಟಿಕ್‌ ಟೂಲ್ಸ್‌’ ಅನ್ನು ವಶಕ್ಕೆ ಪಡೆಯಲಾಗಿದೆ.

ಪ್ರತ್ಯೇಕ ಡಿವೈಸ್‌ ಖರೀದಿ!
ಈ ಹಿಂದೆ ದರೋಡೆ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಜೈಲು ಸೇರಿದ್ದ ಆರೋಪಿಗೆ ಕಾರು ಕಳವು ಪ್ರಕರಣದಲ್ಲಿ ಜೈಲು ಸೇರಿದ್ದ ರಾಕೇಶ್‌ ಎಂಬಾತನ ಪರಿಚಯವಾಗಿದೆ. ಆತನಿಂದ ತಂತ್ರಜ್ಞಾನದ ಮೂಲಕ ಕಾರು ಕದಿಯುವ ಬಗ್ಗೆ ತಿಳಿದುದುಕೊಂಡಿದ್ದ. ಬಳಿಕ ಯುಟ್ಯೂಬ್‌ ಮೂಲಕ  ಕಾರು ಕಳವಿಗೆ  ಬಳಸುವ ಡಿವೈಸ್‌ ಬಗ್ಗೆ ತಿಳಿದು  50-60 ಸಾವಿರ ರೂ.ಗೆ ಆನ್‌ಲೈನ್‌ ಮೂಲಕ “ಎಕ್ಸ್‌ಟೂಲ್‌ ಆಟೋ ಡಯಾಗ್ನಿಸ್ಟಿಕ್‌ ಟೂಲ್‌’ ಎಂಬ ಡಿವೈಸ್‌ ಖರೀದಿಸಿ  ಅದರ ಬಳಕೆ ಬಗ್ಗೆಯೂ ತಿಳಿದುಕೊಂಡಿದ್ದಾನೆ.

ಸಾಫ್ಟ್ ವೇರ್‌ ಹ್ಯಾಕ್‌
ರಾತ್ರಿ ವೇಳೆ ಬೆಂಗಳೂರು ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಸುತ್ತಾಡಿ ರಸ್ತೆ ಬದಿ ನಿಂತಿದ್ದ ಕಾರುಗಳ ಗ್ಲಾಸ್‌ ಒಡೆದು ಒಳಗೆ ಹೋಗುತ್ತಿದ್ದ. ಅನಂತರ ಡಿವೈಸ್‌ನಲ್ಲಿರುವ ಕೇಬಲ್‌ ಅನ್ನು  ಸ್ಟೇರಿಂಗ್‌ನ ಕೆಳ ಭಾಗದಲ್ಲಿರುವ ವೈರ್‌ಗೆ ಸಂಪರ್ಕಿಸಿ ಕಾರಿನ ಸಾಫ್ಟ್ ವೇರ್‌ ಅನ್ನು ಡಿವೈಸ್‌ಗೆ ವರ್ಗಾಯಿಸಿಕೊಳ್ಳುತ್ತಿದ್ದ. ಕಾರಿನ ನಕಲಿ ಕೀಯನ್ನು ಡಿವೈಸ್‌ಗೆ ಸಂಪರ್ಕಿಸಿ, ಡಿವೈಸ್‌ನಲ್ಲಿರುವ ಕಾರಿನ ಆ್ಯಪ್‌ ತೆರೆದು ಸಿಸ್ಟಮ್‌ ಆಪರೇಟ್‌ ಮಾಡಿ ಕೆಲವೇ ಕ್ಷಣಗಳಲ್ಲಿ ಕಾರಿನೊಂದಿಗೆ ಪರಾರಿಯಾಗುತ್ತಿದ್ದ. ಈ ಕಾರುಗಳನ್ನು ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಂಬರ್‌ ಪ್ಲೇಟ್‌ ಮತ್ತು ಆರ್‌ಸಿ  ಬದಲಾಯಿಸಿ  ಮಾರಾಟ ಮಾಡುತ್ತಿದ್ದ.

ಯುವತಿಯರ ಜತೆ ಸುತ್ತಾಟ
ಕದ್ದ ಕಾರು ಮಾರಾಟದಲ್ಲಿ ಬಂದ ಹಣದಲ್ಲಿ ಯುವತಿಯರ ಜತೆ ಗೋವಾ, ಪಾಂಡಿಚೇರಿ ಸಹಿತ ವಿವಿಧ ಪ್ರವಾಸಿ  ತಾಣಗಳಿಗೆ  ತೆರಳುತ್ತಿದ್ದ ಹಾಗೂ ಗೋವಾದ ಕ್ಯಾಸಿನೋ ಹಾಗೂ ಜೂಜಾಟದಲ್ಲೂ ಭಾಗಿಯಾಗುತ್ತಿದ್ದ. ಈತನ ವಿರುದ್ಧ ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ವಿವಿಧ ಪೊಲೀಸ್‌ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.