ಆಗ ಪಾಸಿಟಿವ್‌- ಈಗ ನೆಗೆಟಿವ್‌! ಮೂಡಿಗೆರೆ ವೈದ್ಯಗಿಲ್ಲ ಕೋವಿಡ್‌ 19


Team Udayavani, May 24, 2020, 7:38 AM IST

vydya neg

ಚಿಕ್ಕಮಗಳೂರು: ಮೊದಲ ಬಾರಿ ಕೋವಿಡ್‌ 19  ಸೋಂಕು ದೃಢಪಟ್ಟು, ಬಳಿಕ ಆರು ಬಾರಿ ಮರುಪರೀಕ್ಷೆ ನಡೆಸಿದಾಗಲೂ ನೆಗೆಟಿವ್‌ ಎಂದು ಫ‌ಲಿತಾಂಶ ಬಂದ ಹಿನ್ನೆಲೆಯಲ್ಲಿ ಫಾಲ್ಸ್‌ ಪಾಸಿಟಿವ್‌’ ಎಂದು ಘೋಷಿಸಿದ ಘಟನೆ  ಜಿಲ್ಲೆಯಲ್ಲಿ ನಡೆದಿದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಆತಂಕ ಮೂಡಿಸಿದ್ದ ಮೂಡಿಗೆರೆ ತಾಲೂಕು ವೈದ್ಯರೊ  ಬ್ಬರ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, 6 ಬಾರಿ ನೆಗೆಟಿವ್‌ ವರದಿ ಬಂದ ಹಿನ್ನೆಲೆಯಲ್ಲಿ ಕೋವಿಡ್‌-19  ಆಸ್ಪತ್ರೆಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯ ಸರ್ಕಾರದ ನಿರ್ದೇಶನದಂತೆ ಕೋವಿಡ್‌ 19 ವಾರಿಯರ್ಗೆ ಸಾಮೂಹಿಕ ಪರೀಕ್ಷೆ ನಡೆಸಿದ ಸಂದರ್ಭ ಮೂಡಿಗೆರೆ ತಾಲೂಕಿನ ಸರ್ಕಾರಿ ವೈದ್ಯರ ಗಂಟಲದ್ರವ ಮತ್ತು ರಕ್ತದ  ಮಾದರಿ ಪರೀಕ್ಷೆಯಲ್ಲಿ ಸೋಂಕಿನ ಲಕ್ಷಣ ಕಂಡುಬಂದು ಜಿಲ್ಲೆಯಲ್ಲಿ ಮೊದಲ ಕೋವಿಡ್‌ 19 ಪ್ರಕರಣ ದಾಖಲಾಗಿತ್ತು. ಅನಂತರ ವೈದ್ಯರನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗಿರುವ ಕೋವಿಡ್‌-19 ವಿಶೇಷ ಆಸ್ಪತ್ರೆಯಲ್ಲಿ  ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ವೈದ್ಯರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡು ಬರದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಜಿಲ್ಲಾಡಳಿತ ಮರು ಪರೀಕ್ಷೆಗೆ ಒಳಪಡಿಸಿತ್ತು.  ಮರು ಪರೀಕ್ಷೆಯಲ್ಲಿ  ನೆಗೆಟಿವ್‌ ಅಂಶ ಕಂಡುಬಂ ದ ಹಿನ್ನೆಲೆಯಲ್ಲಿ ಇದೊಂದು ಸಂದೇಹಾಸ್ಪದ ಪ್ರಕರಣವೆಂದು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ಹಾಸನ ಹಾಗೂ ಶಿವಮೊಗ್ಗ ಪ್ರಯೋಗಾಲಯಕ್ಕೆ ಗಂಟಲದ್ರವ ಹಾಗೂ ರಕ್ತದ ಮಾದರಿಯನ್ನು  ಪರೀಕ್ಷೆಗೆ ಕಳುಹಿಸಿದ್ದು,

ಈ ಎಲ್ಲಾ ವರದಿಗಳು ನೆಗೆಟಿವ್‌ ಬಂದಿದೆ. ಅನಂತರ ಗೊಂದಲಕ್ಕೆ ಸಿಲುಕಿದ ಜಿಲ್ಲಾಡಳಿತ ಮೊದಲು ಸಂಗ್ರಹಿಸಿದ್ದ ವೈದ್ಯರ ಗಂಟಲದ್ರವ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿನ ನಿಮಾನ್ಸ್‌ ಆಸ್ಪತ್ರೆಗೆ  ರವಾನಿಸಿ ಪರೀಕ್ಷೆಗೆ ಒಳಪಡಿಸಿದ ನಂತರವೂ ನೆಗೆಟಿವ್‌ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಫಾಲ್ಸ್‌ ಪಾಸಿಟಿವ್‌ ಪ್ರಕರಣವೆಂದು ಘೋಷಿಸಲಾಗಿದೆ. ವೈದ್ಯರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಸಾವಿರಕ್ಕೂ ಅಧಿಕ  ಕ್ವಾರಂಟೈನ್‌ನಲ್ಲಿರಿಸಿದ್ದ ಜನರನ್ನು ಬಿಡುಗಡೆಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದ್ದಾರೆ.

ವೈದ್ಯರ ಕೋವಿಡ್‌ 19 ಸೋಂಕು ಪ್ರಕರಣದಿಂದ ಕಂಗೆಟ್ಟಿದ್ದ ಮಲೆನಾಡಿನ ಜನರು ಸದ್ಯ ವರದಿ  ನೆಗೆಟಿವ್‌ ಬಂದಿದ್ದು ನಿಟ್ಟುಸಿರು ಬಿಡುವಂತಾಗಿದೆ.

ವೈದ್ಯರಲ್ಲಿ ಯಾವುದೇ ಗುಣಲಕ್ಷಣ ಗಳು ಕಂಡು ಬರದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೊಳಪಡಿಸಲಾಗಿತ್ತು. ವರದಿಯಲ್ಲಿ ನೆಗೆಟಿವ್‌ ಅಂಶ ಕಂಡು ಬಂದ ಹಿನ್ನೆಲೆಯಲ್ಲಿ ಆರು ಬಾರಿ ಮರು ಪರೀಕ್ಷೆ ನಡೆಸಿದ್ದು, ಎಲ್ಲದರಲ್ಲೂ ನೆಗೆಟಿವ್‌  ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಫಾಲ್ಸ್‌ ಪಾಸಿಟಿವ್‌’ ಪ್ರಕರಣ ವೆಂದು ಪರಿಗಣಿಸಲಾಗಿದೆ. ಸಾಮಾನ್ಯವಾಗಿ 10 ಸಾವಿರ ಪ್ರಕರಣಗಳಲ್ಲಿ ಇಂತಹ ಒಂ ದೊಂದು ಪ್ರಕರಣಗಳು ಕಂಡು ಬರುತ್ತವೆ.
-ಡಾ| ಬಗಾದಿ ಗೌತಮ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.