“ನಾಯಕರೆಲ್ಲ ಮಂಡಿಯೂರಿದರೂ ಕ್ಯಾರೇ ಅಂದಿಲ್ಲ’
Team Udayavani, Apr 24, 2019, 3:25 AM IST
ಗೋಕಾಕ: “ರಮೇಶ ಜಾರಕಿಹೊಳಿ ಅವರ ಮನವೊಲಿಸಲು ರಾಹುಲ್ ಗಾಂಧಿ ಅಷ್ಟೇ ಅಲ್ಲದೇ ಸಿದ್ದರಾಮಯ್ಯ, ಪರಮೇಶ್ವರ್, ವೇಣುಗೋಪಾಲ ಸೇರಿ ಕಾಂಗ್ರೆಸ್ನ ಎಲ್ಲ ನಾಯಕರು ಅವರ ಮುಂದೆ ಮಂಡಿಯೂರಿದ್ದರೂ ಅವರು ಕ್ಯಾರೇ ಅನ್ನಲಿಲ್ಲ, ಪತ್ರ, ಫೋನ್ನಲ್ಲಿ ಖುದ್ದು ಹುಡುಕಿ ಹುಡುಕಿ ಸಾಕಾಗಿ ಹೋಗಿದೆ. ರಮೇಶ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ಇನ್ನೇನೂ ಉಳಿದಿಲ್ಲ’ ಎಂದು ಸಚಿವ ಸತೀಶ ಜಾರಕಿಹೊಳಿ ಖಾರವಾಗಿ ಪ್ರತಿಕ್ರಿಯಿಸಿದರು.
ಶುಕ್ರವಾರ ಸಂಜೆ ನಗರದ ಜಿಆರ್ಬಿಸಿ ಕಾಲೋನಿಯ 161 ಮತಗಟ್ಟೆಯಲ್ಲಿ ಮತ ಚಲಾಯಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಮೇಶ ಪಕ್ಷ ಬಿಡುವುದಾದರೆ ಬಿಡಲಿ. ನಿರ್ಧಾರ ಯಾವುದೇ ಆಗಿದ್ದರೂ ಬೇಗನೆ ತೆಗೆದುಕೊಳ್ಳಲಿ ಎಂದು ಹೇಳಿದರು.
ನಮ್ಮ ಕುಟುಂಬದ ಸಮಸ್ಯೆ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗೊತ್ತಿದ್ದು ಸಮಸ್ಯೆಯ ಪ್ರಾರಂಭಿಕ ಹಂತದಲ್ಲಿಯೇ ಸ್ಪಂದಿಸಬೇಕಾಗಿತ್ತು. ಈಗ ಕಾಲ ಮಿಂಚಿದೆ. ಈ ಹೋರಾಟ ಪಕ್ಷಕ್ಕಾಗಿ ನಡೆದಿದ್ದು, ವೈಯಕ್ತಿಕವಾಗಿ ಅಲ್ಲ. ಮಗುವನ್ನು ಆಟವಾಡಿಸಲು ಬಂದ ಅಂಬಿರಾವ ಪಾಟೀಲ ಇಂದು ಎಲ್ಲರನ್ನೂ ಆಟವಾಡಿಸುತ್ತಿದ್ದಾನೆಂದು ಸಿಡಿಮಿಡಿಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ