ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಕೇಸ್ ಹಾಕುವ ದಬ್ಬಾಳಿಕೆಯ ಸರಕಾರ ರಾಜ್ಯದಲ್ಲಿದೆ
Team Udayavani, Jan 7, 2024, 12:43 PM IST
ಹುಬ್ಬಳ್ಳಿ: ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಕೇಸ್ ಹಾಕುವ ದಬ್ಬಾಳಿಕೆಯ ಸರಕಾರ ರಾಜ್ಯದಲ್ಲಿದೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಶ್ರೀಕಾಂತ ಪೂಜಾರಿ ಬಂಧನ ಇದಕ್ಕೆ ಉದಾಹರಣೆ. ಇವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿ ಕ್ಷಮೆ ಕೇಳಲಿಲ್ಲ. ಸರಕಾರದ ನಡೆಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಕೇವಲ ಏಳೇ ತಿಂಗಳಲ್ಲಿ ಅಧಿಕಾರದ ಮದ ಹಾಗೂ ದಾಷ್ಟ್ಯ ಹೆಚ್ಚಾಗಿದೆ. ಸರ್ಕಾರದ ವಿರುದ್ದ ನಾವು ಹೋರಾಟ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಗೆ ರಾಮ ಮಂದಿರ ಆಗಬಾರದು ಎನ್ನುವ ಆಸೆ ಇತ್ತು. ಹರಿಪ್ರಸಾದ್ ಅವರು ಗೋಧ್ರಾ ಬಗ್ಗೆ ಮಾತನಾಡುತ್ತಾರೆ. ಅವರ ಕಡೆ ಮಾಹಿತಿ ಇದ್ರೆ ಅವರು ಯಾಕೆ ಮಾಹಿತಿ ಕೊಡತ್ತಿಲ್ಲ. ಹರಿಪ್ರಸಾದ್ ಮಾತಾಡಿದ ಮೇಲೆ ಇವರ INDIA ಒಕ್ಕೂಟದ ನಾಲ್ಕೈದು ಜನ ಮಾತನಾಡಿದ್ದರು. ಬಿಜೆಪಿ ಕೋಮುವಾದಿ ಎನ್ನುತ್ತಾರೆ. ಆದರೆ ನಿಜವಾದ ಕೋಮುವಾದಿ ಕಾಂಗ್ರೆಸ್ ಪಕ್ಷ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ