“ಕಡತಗಳ ಶಾಸ್ತ್ರಿ’ ಖ್ಯಾತಿಯ ಅನಂತ ಕೃಷ್ಣ ಶಾಸ್ತ್ರಿ ಇನ್ನಿಲ್ಲ
Team Udayavani, Jan 5, 2020, 3:04 AM IST
ಶಿರಸಿ: ಪ್ರಸಿದ್ಧ ಇತಿಹಾಸ ತಜ್ಞ, ತಾಳೆಗರಿಗಳ ಸಂಶೋಧಕ, ಕಡತಗಳ ಶಾಸ್ತ್ರಿ ಎಂದೇ ಹೆಸರಾಗಿದ್ದ ಇಲ್ಲಿನ ಅನಂತ ಕೃಷ್ಣ ಶಾಸ್ತ್ರಿ (80) ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದರು. 15ರಿಂದ 19ನೇ ಶತಮಾನದ ತನಕ ಮೋಡಿಲಿಪಿಯಲ್ಲಿರುವ ಕಡತಗಳನ್ನು ಅಧ್ಯಯನ ಮಾಡಿದ್ದ ಇವರು, ರಾಜ್ಯದ ಪ್ರಮುಖ ಇತಿಹಾಸಕಾರ ಹಾಗೂ ಸಂಶೋಧಕರಾಗಿ ಗುರುತಿಸಿ ಕೊಂಡಿದ್ದರು. ಸಾರಸ್ವತ ಲೋಕಕ್ಕೆ 30ಕ್ಕೂ ಹೆಚ್ಚು ಅಮೂಲ್ಯ ಕೃತಿ ನೀಡಿದ್ದರು.
ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಅಧ್ಯಯನ ಮಾಡಿದ ನಂತರ ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಶಾಸ್ತ್ರಿಗಳು, ಕವಿವಿಯಿಂದ ಶೃಂಗೇರಿ ಮಠದ ಚರಿತ್ರೆ ಮೇಲೆ ಪಿಎಚ್ಡಿ ಪಡೆದಿದ್ದರು. ಸ್ವರ್ಣವಲ್ಲೀ, ಇಡಗುಂಜಿ ಸೇರಿ ಪೌರಾಣಿಕ, ಧಾರ್ಮಿಕ ಕ್ಷೇತ್ರಗಳ ಅಧ್ಯಯನ ಮಾಡಿದ್ದರು. ಅವರಿಗೆ ಅನೇಕ ಪ್ರಶಸ್ತಿ-ಪುರಸ್ಕಾರ ದೊರೆತಿದ್ದವು. ಶೋಕ: ಎ.ಕೆ.ಶಾಸ್ತ್ರಿಗಳ ನಿಧನಕ್ಕೆವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ದಂಟ್ಕಲ್ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…