ಸಂತೋಷ್ ವಿರುದ್ಧದ ಆರೋಪಕ್ಕೆ ಅರ್ಥವೇ ಇಲ್ಲ
Team Udayavani, May 2, 2017, 11:42 AM IST
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ರಾಷ್ಟ್ರಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಅವರ ವಿರುದ್ಧದ ಆರೋಪಗಳಿಗೆ ಅರ್ಥವೇ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30 ವರ್ಷಗಳ ಹಿಂದೆ
ಇಂಜಿನಿಯರಿಂಗ್ ಪದವಿ ಪಡೆದ ಸಂತೋಷ್ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರದ್ದು ನಿಸ್ವಾರ್ಥ ಜೀವನ. ಅವರಿಗೆ ಯಾವುದೇ ರೀತಿಯ ಆಸೆ, ಆಕಾಂಕ್ಷೆಗಳಿಲ್ಲ. ಅವರಿಗಿರುವ
ಆಸೆ ಎಂದರೆ ಅದು ರಾಷ್ಟ್ರ ಶಕ್ತಿಶಾಲಿಯಾಗಬೇಕು ಎನ್ನುವುದು ಮಾತ್ರ ಎಂದರು.
ಇಂತಹ ಪ್ರಚಾರಕರಿಂದಾಗಿಯೇ ಬಿಜೆಪಿ ಇಂದು ಸದೃಢವಾಗಿ ಬೆಳೆದಿದೆ. ದೀನ್ ದಯಾಳ್ ಉಪಾಧ್ಯಾಯ, ಎಲ್.ಕೆ. ಅಡ್ವಾಣಿ ಅವರೂ ಸಹ ಆರ್ ಎಸ್ಎಸ್ ಪ್ರಚಾರಕರಾಗಿದ್ದವರು. ಪಕ್ಷಕ್ಕೆ ಇಂತಹವರ ಕೊಡುಗೆ ಅಪಾರವಾದುದು ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ಪಕ್ಷ ನಿರ್ಧರಿಸುತ್ತದೆ. ವೈಯಕ್ತಿಕವಾಗಿ ತೀರ್ಮಾನ
ಮಾಡಲು ಸಾಧ್ಯವಿಲ್ಲ. ಸಂತೋಷ್ ಅವರು ಪಕ್ಷ ಹಾಗೂ ರಾಷ್ಟ್ರಕ್ಕಾಗಿ ನಿಷ್ಠುರವಾಗಿ ಮಾತನಾಡುತ್ತಾರೆ.
ತಮ್ಮ ಬಳಿಯೂ ಹಲವಾರು ಬಾರಿ ನಿಷ್ಠುರವಾಗಿ ಮಾತನಾಡಿದ್ದಾರೆ. ಇಂತಹವರ ಮೇಲೆ ಮಾಡುವ ಆರೋಪಗಳಿಗೆ ಅರ್ಥವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ