ಸದ್ಯಕ್ಕೆ ಬಸ್ ದರ ಏರಿಕೆ ಪ್ರಸ್ತಾಪ ಇಲ್ಲ
Team Udayavani, Jun 9, 2019, 3:00 AM IST
ಭಾರತೀನಗರ: ಸದ್ಯಕ್ಕೆ ಬಸ್ ದರ ಏರಿಕೆ ಪ್ರಸ್ತಾವ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಈ ಹಿಂದೆಯೇ ಬಸ್ ದರ ಏರಿಕೆಗೆ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಆದರೆ, ಮುಖ್ಯಮಂತ್ರಿಯವರು ಚುನಾವಣೆ ಬಳಿಕ ದರ ಏರಿಕೆ ಬಗ್ಗೆ ಚಿಂತಿಸೋಣವೆಂದು ತಿಳಿಸಿದ್ದರು. ಜೂ.12 ರಂದು ಈ ಸಂಬಂಧ ಮುಖ್ಯಮಂತ್ರಿ ಉನ್ನತ ಅಧಿಕಾರಿಗಳ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿತ್ತು. ಸಭೆ ಮುಂದೂಡಿಕೆಯಾಗಿದೆ. ಹೀಗಾಗಿ, ಸದ್ಯಕ್ಕೆ ಬಸ್ ದರ ಏರಿಕೆ ಪ್ರಸ್ತಾಪವಿಲ್ಲ. ಮುಖ್ಯಮಂತ್ರಿ ಯಾವಾಗ ಸೂಚಿಸುತ್ತಾರೋ ಆಗ ದರ ಏರಿಕೆಯಾಗುತ್ತದೆ ಎಂದರು.
ಸರ್ಕಾರದ ಬಗ್ಗೆ ಬಿಜೆಪಿ ಇಲ್ಲಸಲ್ಲದ ಊಹಾಪೋಹಗಳನ್ನು ಹಬ್ಬಿಸುತ್ತಿದೆ. ಆದರೆ, ರಾಜ್ಯದಲ್ಲಿ ಮೈತ್ರಿ ಸರ್ಕಾರ 5 ವರ್ಷ ಪೂರೈಸುತ್ತದೆ.
-ಡಿ.ಸಿ.ತಮ್ಮಣ್ಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ