ಪಂಚಮಸಾಲಿಗರ ಮೀಸಲಾತಿಗೆ ವಿರೋಧವಿಲ್ಲ
Team Udayavani, Feb 20, 2021, 7:00 AM IST
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು “ಪ್ರವರ್ಗ 2ಎ’ಗೆ ಸೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸಚಿವ ಜಗದೀಶ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.
ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಾತಿನ ಚಕಮಕಿ ನಡೆದಿದೆ ಎಂಬುದು ಸತ್ಯಕ್ಕೆ ದೂರವಾದುದು. ಪಂಚಮಸಾಲಿ ಸಮು
ದಾಯಕ್ಕೆ ಸೂಕ್ತ ಸ್ಥಾನ ಸಿಗಬೇಕು ಎಂಬುದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ. ಇಂತಹ ಸುದ್ದಿಗಳ ಮೂಲಕ ಸಮುದಾಯದಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗಲಾಟೆ ನಡೆದಿಲ್ಲ: ಸಿ.ಸಿ.ಪಾಟೀಲ್
ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ. ನನ್ನ ಹಾಗೂ ಜಗದೀಶ ಶೆಟ್ಟರ್ ನಡುವೆ ವಾಗ್ವಾದವಾಗಿಲ್ಲ ಎಂದು ಸಚಿವ ಸಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಡೆದ ಸಭೆಯಲ್ಲಿ ನಾನೂ ಪಾಲ್ಗೊಂಡಿದ್ದು, ನಾನು ಹಾಗೂ ಮುರುಗೇಶ್ ನಿರಾಣಿ, ಸಮುದಾಯಕ್ಕೆ ಆರ್ಥಿಕ ಮತ್ತು ಶೈಕ್ಷಣಿಕ ಮೀಸಲಾತಿ ನೀಡ ಬೇಕೆಂದು ಸಿಎಂಗೆ ಮನವಿ ಮಾಡಿದ್ದು, ತಜ್ಞರು ಹಾಗೂ ನ್ಯಾಯವಾದಿಗಳೊಂದಿಗೆ ಚರ್ಚಿಸೋಣ ಎಂದು ಮುಖ್ಯಮಂತ್ರಿ ಹೇಳಿದ್ದರು ಎಂದರು.
ಬೆಂಬಲವಿದೆ: ಸವದಿ
ಸಚಿವ ಸಂಪುಟದ ಗುರುವಾರದ ಸಭೆಯಲ್ಲಿ ಪಂಚಮಸಾಲಿ ಸಮು ದಾಯಕ್ಕೆ ಮೀಸಲಾತಿ ನೀಡಲು ನಾನು ವಿರೋಧ ವ್ಯಕ್ತಪಡಿಸಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಹಿಂದೆ ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಪರಮ ಪೂಜ್ಯ ಜಯ ಮೃತ್ಯುಂಜಯ ಸ್ವಾಮೀಜಿ ನಡೆಸಿದ್ದ ಸತ್ಯಾಗ್ರಹ ಸ್ಥಳಕ್ಕೆ ಕಳೆದ ಅಕ್ಟೋಬರ್ನಲ್ಲಿ ಭೇಟಿಕೊಟ್ಟು ಉಪವಾಸ ಕೈಬಿಡಲು ಮನವಿ ಮಾಡಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್ ವೀಡಿಯೋ ತಿರುಚಿದ್ದು!
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು