ಅಮೂಲ್ಯ ಪರ ನಿಲ್ಲುವ ಪ್ರಶ್ನೆ ಇಲ್ಲವೇ ಇಲ್ಲ
Team Udayavani, Feb 24, 2020, 3:07 AM IST
ಬೆಂಗಳೂರು: ಅಮೂಲ್ಯ ಲಿಯೋನಾ ಪ್ರಕರಣದಲ್ಲಿ ಆಕೆಯ ಪರವಾಗಿ ನಿಲ್ಲುವ ಪ್ರಶ್ನೆಯೇ ಇಲ್ಲ. ರಾಜಕಾರಣವನ್ನು ಇತಿಮಿತಿಯಲ್ಲಿ ಮಾಡಬೇಕು. ದೇಶದ ವಿಚಾರ ಬಂದಾಗ ನಾವು ದೇಶಕ್ಕೆ ಆದ್ಯತೆ ನೀಡಬೇಕು. ನಮ್ಮ ದೇಶಕ್ಕೆ ಅಪಮಾನ ಮಾಡಿ ಬೇರೆ ದೇಶಕ್ಕೆ ಜೈಕಾರ ಹಾಕುವುದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಕೂಡ ಅಂತಹ ವಿಷಯಗಳಿಗೆ ಪ್ರೋತ್ಸಾಹ ನೀಡುವುದಿಲ್ಲ. ಆದರೆ ಆ ಹೆಣ್ಣು ಮಗಳು ಏನು ಹೇಳಲು ಹೊರಟಿದ್ದಳು ಎಂಬುದನ್ನೂ ತಿಳಿದುಕೊಳ್ಳಬೇಕು. ಆಕೆ ಈ ಹಿಂದೆ ಒಂದು ಸಿದ್ಧಾಂತದ ವಿಚಾರವಾಗಿ ಮಾತನಾಡಿರುವುದನ್ನು ನೋಡಿದ್ದೇನೆ.
ಹೀಗಾಗಿ ಆಕೆ ಏನು ಹೇಳಲು ಹೋರಟಿದ್ದಳು ಎಂಬುದು ನಮಗೆ ಗೊತ್ತಿಲ್ಲ. ಈ ವಿಚಾರದಲ್ಲಿ ಆತುರಪಡುವುದು ಬೇಡ ಎಂದರು. ಸಿಎಎ ವಿರೋಧಿ ಪ್ರತಿಭಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಕಾರಣ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಿಎಎ ಕುರಿತ ವಿಚಾರವನ್ನು ಕಾಂಗ್ರೆಸ್ ಜನರಿಗೆ ಬಿಟ್ಟಿದೆ.
ಇದನ್ನು ವಿರೋಧಿಸುತ್ತಿರುವವರು ತಮ್ಮದೇ ಆದ ರೀತಿಯಲ್ಲಿ ವಿರೋಧ ಮಾಡುತ್ತಿದ್ದಾರೆ. ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಬೇರೆ ಬೇರೆ ರಾಷ್ಟ್ರಗಳೂ ಇದನ್ನು ಗಮನಿಸುತ್ತಿವೆ. ಈ ಕಾಯ್ದೆ ಜಾರಿ ನಂತರ ಆರ್ಥಿಕ ಕಡಿತಕ್ಕೆ ಅನೇಕ ರಾಷ್ಟ್ರಗಳಲ್ಲಿ ಚಿಂತನೆ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ ಎಂದರು.
ರಾಜಕೀಯದಲ್ಲಿ ಹಸ್ತಕ್ಷೇಪ ಸರಿಯಲ್ಲ: ಹೌಡಿ ಮೋದಿ ಕಾರ್ಯಕ್ರಮದ ಮೂಲಕ ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಆದ ಪ್ರಚಾರ ಮಾಡಿದರು. ಆದರೆ ನಮ್ಮ ದೇಶದ ಪ್ರಧಾನಿಯಾಗಿ ಹೋಗಿದ್ದ ನರೇಂದ್ರ ಮೋದಿಯವರು ತಮ್ಮ ಭಾಷಣದ ಅಂತ್ಯದಲ್ಲಿ ಮುಂದಿನ ಬಾರಿ ಟ್ರಂಪ್ ಸರ್ಕಾರ ಎಂದು ಹೇಳಿದ್ದು ಸರಿಯಲ್ಲ.
ಅಲ್ಲಿ ಯಾವುದೇ ಪಕ್ಷದ ನಾಯಕರು ಅಧ್ಯಕ್ಷರಾದರೆ ನಾವು ಅವರನ್ನು ಅಮೆರಿಕ ಅಧ್ಯಕ್ಷರನ್ನಾಗಿ ನೋಡುತ್ತೇವೆ. ನಮ್ಮಲ್ಲಿ ಯಾವುದೇ ಪಕ್ಷದ ನಾಯಕರು ಪ್ರಧಾನಿಯಾದರೆ ಅವರು ಭಾರತದ ಪ್ರಧಾನಿಯಾಗಿ ನೋಡುತ್ತಾರೆ. ಹೀಗಾಗಿ ಒಂದು ದೇಶದ ಪ್ರಧಾನಿಯಾಗಿ ಮತ್ತೂಂದು ದೇಶದ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ನಮ್ಮ ಕರ್ತವ್ಯವಲ್ಲ. ಇದು ನಮ್ಮ ದೇಶದ ಚರಿತ್ರೆಯಲ್ಲೇ ದೊಡ್ಡ ಪೆಟ್ಟಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್