ಕಾಂಗ್ರೆಸ್ಗೂ ಪ್ರಜಾಪ್ರಭುತ್ವಕ್ಕೂ ಸಂಬಂಧವೇ ಇಲ್ಲ;ಮೋದಿ
Team Udayavani, May 9, 2018, 2:46 PM IST
ಚಿಕ್ಕಮಗಳೂರು: ‘ಕಾಂಗ್ರೆಸ್ ಪಕ್ಷಕ್ಕೂ, ಪ್ರಜಾಪ್ರಭುತ್ವಕ್ಕೂ ಸಂಬಂಧವೇ ಇಲ್ಲ. ಕಾಂಗ್ರೆಸ್ ನಲ್ಲಿ ಎಲ್ಲವೂ ಒಂದು ಕುಟುಂಬದ್ದು, ಆ ಕುಟುಂಬಕ್ಕೆ ಹಿರಿಯ ನಾಯಕರದ್ದಾಗಲಿ, ದೇಶದ ಜನರದ್ದಾಗಲಿ ಚಿಂತೇ ಇಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಬುಧವಾರ ಮಧ್ಯಾಹ್ನ ನಡೆದ ಬೃಹತ್ ಬಿಜೆಪಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಮೊದಲು ಶೃಂಗೇರಿ ಶಾರಾದಾಂಬೆ, ಹೊರನಾಡು ಅನ್ನಪೂರ್ಣೇಶ್ವರಿ,ಶೃಂಗೇರಿ ಶ್ರೀ, ರಂಭಾಪುರಿ ಶ್ರೀ,ಗುರು ದತ್ತಾತ್ರೇಯರನ್ನು ಸ್ಮರಿಸಿದರು.
‘ಕಾಂಗ್ರೆಸ್ ಧೂಳಿಪಟವಾದ ಸಂದರ್ಭ ಇಂದಿರಾ ಗಾಂಧಿ ಇಲ್ಲಿಗೆ ಬಂದು ನಿಮ್ಮ ಕಣ್ಣಲ್ಲಿ ಮಣ್ಣೆರಚಿ ಗೆದ್ದು ಹೋದರು. ಗೆದ್ದು ದೆಹಲಿಗೆ ಹೋದ ಬಳಿಕ ಮತ್ತೆ ಮರಳಿದ್ದರೇ’ ಎಂದು ಪ್ರಶ್ನಿಸಿದರು.
‘ಅವರ ಸೊಸೆ ಸೋನಿಯಾ ಗಾಂಧಿ ಬಳ್ಳಾರಿಗೆ ಬಂದು ಕಣ್ಣೀರಿಟ್ಟರು. 300 ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿ ಗೆದ್ದರು. ಆ ಪ್ಯಾಕೇಜ್ ಏನಾಗಿದೆ’ ಎಂದು ಪ್ರಶ್ನಿಸಿದರು.
‘ಕಾಂಗ್ರೆಸ್ ಎಲ್ಲಾ ಕಡೆ ಸೋತರೂ ಇವಿಎಂಗಳ ಮೇಲೆ ಹೊಣೆ ಹೊರಿಸಿದರು. ಸಿಎಜಿ , ಸಿಬಿಐ ಇ ಡಿ,ಚನಾವಣಾ ಆಯೋಗ ಯೂವುದು ಸರಿಯಿಲ್ಲ ಎನ್ನುತ್ತಾರೆ . ಅದಿರಲಿ ಸರ್ಜಿಕಲ್ ಸ್ಟ್ರೈಕ್ ಮಾಡಿದ ಸೈನಿಕರಿಗೂ ಅಪಮಾನ ಮಾಡಿದರು.ಕಾಂಗ್ರೆಸ್ ಮಾತ್ರ ಸರಿಯಿದೆ ಎನ್ನುವ ಅಹಂಕಾರ ಅವರದ್ದು’ ಎಂದರು.
‘ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ . ಹೀಗಿರುವಾಗ ನಾಮ್ದಾರ್ಗೆ ಪ್ರಧಾನಿಯಾಗುವ ಕನಸು’ ಎಂದು ರಾಹುಲ್ ಗಾಂಧಿ ವಿರುದ್ಧ ಕಿಡಿ ಕಾರಿದರು.
‘ಕಾಂಗ್ರೆಸ್ನ ತಾಯಿ ಮಗ 4 ಸಾವಿರ ಕೋಟಿ ರೂಪಾಯಿ ಹಗರಣದಲ್ಲಿ ಜಾಮೀನು ಪಡೆದಿದ್ದಾರೆ. ಅವರು ದೇಶಕ್ಕೆ ಪ್ರಾಮಾಣಿಕತೆಯ ಪಾಠ ಮಾಡುತ್ತಿದ್ದಾರೆ’ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ