ಅಕ್ರಮ-ಸಕ್ರಮ ದಿನಾಂಕ ವಿಸ್ತರಣೆಗೆ ಚಿಂತನೆ
Team Udayavani, Oct 5, 2017, 9:58 AM IST
ಬೆಂಗಳೂರು: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಅಕ್ರಮ -ಸಕ್ರಮ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ಡಿಸೆಂಬರ್ ಅಂತ್ಯದ ಗಡುವಿನೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಇನ್ನೂ ಎರಡು ತಿಂಗಳ ಕಾಲ ಅರ್ಜಿ ಸಲ್ಲಿಕೆಗೆ ಕಾಲಾವ
ಕಾಶ ಕೊಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಗರ್ಹುಕುಂ ಸಾಗುವಳಿಯಡಿ ನಮೂನೆ 50 ಮತ್ತು 56 ರಡಿ ಅರ್ಜಿ ಸಲ್ಲಿಕೆಗೂ ಕಾಲಾವಕಾಶ ಕೊಡಲು ಚರ್ಚೆ ನಡೆದಿದೆ. ಒಟ್ಟಾರೆ ಯಾರಿಗೂ ಅನ್ಯಾಯವಾಗಬಾರದು. ಸರ್ಕಾರದ ಸಲವತ್ತು ಪಡೆಯುವುದರಿಂದ ವಂಚಿತರಾಗಬಾರದು ಎಂಬುದು ನಮ್ಮ ಉದ್ದೇಶ. ಹೀಗಾಗಿ, ಸದ್ಯ ದಲ್ಲೇ ಅಧಿಕೃತ ಆದೇಶ
ಹೊರಡಿಸಲಾಗುವುದು ಎಂದು ಹೇಳಿದರು. ಕಂದಾಯ ಕಾಯ್ದೆ 192 ಅಡಿ ಸರ್ಕಾರಿ ಭೂಮಿ ಅತಿಕ್ರಮಣಕ್ಕೆ ಐದು ಸಾವಿರ ರೂ.ದಂಡ, ಒಂದು ವರ್ಷ ಜೈಲು ಶಿಕ್ಷೆಯಿದೆ. ಹೀಗಾಗಿ, ಈ ಪ್ರಕರಣಗಳು ಇತ್ಯರ್ಥವಾಗು ವವರೆಗೂ ಆ ಬಗ್ಗೆ ಕ್ರಮ ಕೈಗೊಳ್ಳುವುದು ಬೇಡ ಎಂದೂ ಮೌಖೀಕವಾಗಿ ಸೂಚಿಸಲಾಗಿದೆ ಎಂದು ಹೇಳಿದರು.
ನೀರಿನ ಅಭಾವ ಎದುರಾಗದು: ರಾಜ್ಯದಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಸುರಿದ ಮಳೆಯಿಂದಾಗಿ ಸರಾಸರಿ ಮಳೆ ಕೊರತೆ ಶೇ.8 ಕ್ಕೆ ಇಳಿದಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿ ಯುವ ನೀರಿನ ಕೊರತೆ ಎದುರಾಗುವ ಆತಂಕ ತಪ್ಪಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.27ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಶೇ. 6 ರಷ್ಟು ಮಲೆನಾಡಿನಲ್ಲಿ ಶೇ.18 ರಷ್ಟು ಹಾಗೂ ಕರಾವಳಿಯಲ್ಲಿ ಶೇ.15 ರಷ್ಟು ಮಳೆ ಕೊರತೆಯುಂಟಾಗಿದೆ. ಒಟ್ಟಾರೆ ಮಳೆ ಕೊರತೆ ಶೇ.24 ರಿಂದ ಶೇ.8 ಕ್ಕೆ ಇಳಿದಿದೆ.
ಹೀಗಾಗಿ, ಕುಡಿಯುವ ನೀರಿಗೆ ಹಾಹಾಕಾರ ಪರಿಸ್ಥಿತಿ ಉಂಟಾಗದು ಎಂಬ ಆಶಾಭಾವನೆಯಲ್ಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಮುಂಗಾರು ಪ್ರಾರಂಭದಲ್ಲಿ ಮಳೆ ಕೊರತೆ ಇದ್ದ ಕಾರಣ ಆತಂಕ ಇದ್ದದ್ದು ಹೌದು. ಆದರೆ, ಕಳೆದ ಎರಡು ತಿಂಗಳಲ್ಲಿ ಮಳೆ ಉತ್ತಮ ವಾಗಿ ಬಿದ್ದಿದೆ. ಮುಂದಿನ ವಾರ ಸಂಪುಟ ಉಪ ಸಮಿತಿ ಸಭೆ ನಡೆಸಿ ಬರ ಪರಿಸ್ಥಿತಿಯ ಪರಾಮರ್ಶೆ ನಡೆಸಿ ಬರಪೀಡಿತ ತಾಲೂಕು ಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಿಂಗಳಲ್ಲಿ ಬೆಳೆನಷ್ಟ ವರದಿ
ಕುಡಿಯುವ ನೀರಿನ ಸಮಸ್ಯೆ ತಲೆದೋರದಿದ್ದರೂ ಕೃಷಿ ಉತ್ಪಾದನೆ ಪ್ರಮಾಣ ಕಡಿಮೆಯಾಗಲಿದೆ. ಬೆಳೆನಷ್ಟ ಕುರಿತು ಪ್ರತಿ ಗ್ರಾಮಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳನ್ನು ನೇಮಿಸಲಾಗಿದ್ದು, ತಿಂಗಳಲ್ಲಿ ವರದಿ ದೊರೆಯಲಿದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ಮೋಡ ಬಿತ್ತನೆಯಿಂದಲೂ ಈ ಬಾರಿ ಹಲವೆಡೆ ಉತ್ತಮ ಪ್ರಮಾಣದ ಮಳೆಯಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ 1700 ಕೋಟಿ ರೂ. ನೀಡಿತ್ತು. ಆ ಪೈಕಿ 23,31,565 ರೈತರಿಗೆ 1635.35 ಕೋಟಿ ರೂ. ವಿತರಿಸಲಾಗಿದೆ. ಖಾತೆ ವಿವರ ಹೊಂದಾಣಿಕೆಯಾಗದ ಕಾರಣ 50 ಕೋಟಿ ರೂ. ಉಳಿದಿದೆ. ಹಿಂಗಾರು ನಷ್ಟದ ಬಾಬ್ತು ಕೇಂದ್ರದಿಂದ 650 ಕೋಟಿ ರೂ. ಬಂದಿದ್ದು, 8,58, 220 ರೈತರಿಗೆ 639 ಕೋಟಿ ರೂ. ವಿತರಿಸಲಾಗಿದೆ. ಈ ವರ್ಷ ಬೆಳೆನಷ್ಟ ಬಗ್ಗೆ ಮಾಹಿತಿ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಒಂದೊಮ್ಮೆ ಕೇಂದ್ರ ನೀಡದಿದ್ದರೆ ರಾಜ್ಯವೇ ಭರಿಸಬೇಕಾಗುತ್ತದೆ.
ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ