ರಾಜ್ಯದ ಈ 10 ಜಿಲ್ಲೆಗಳಲ್ಲಿ ಶತಕ ದಾಟಿದೆ ಕೋವಿಡ್-19 ಸೋಂಕಿತರ ಸಂಖ್ಯೆ
Team Udayavani, May 29, 2020, 10:41 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆ ಪ್ರತಿ ದಿನ ನೂರರ ಗಡಿ ದಾಟುತ್ತಿದೆ. ಅನ್ಯ ರಾಜ್ಯಗಳಿಂದ ಪ್ರಮುಖವಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಕೊಳ್ಳುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ.
ಸದ್ಯ ರಾಜ್ಯದಲ್ಲಿ ಹತ್ತು ಜಿಲ್ಲೆಗಳಲ್ಲಿ ನೂರಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಅದರಲ್ಲೂ ಈ ಜಿಲ್ಲೆಗಳಲ್ಲೇ ಹೆಚ್ಚಿನ ಪ್ರಮಾಣ ಸೋಂಕು ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಎರಡು ವಾರಗಳ ಹಿಂದೆ ಗ್ರೀನ್ ಜೋನ್ ನಲ್ಲಿದ್ದ ಹಾಸನ, ಉಡುಪಿಯಲ್ಲಿ ಈಗ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ.
ಬೆಂಗಳೂರು ನಗರ: ಒಟ್ಟು 291 ಸೋಂಕಿತರಿದ್ದು, 151 ಮಂದಿ ಬಿಡುಗಡೆಯಾಗಿದ್ದಾರೆ. 10 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದರೆ, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
ಮಂಡ್ಯ: ಇಲ್ಲಿ 255 ಮಂದಿಗೆ ಸೊಂಕು ದೃಢವಾಗಿದ್ದು, ಬಿಡುಗಡೆಯಾದವರು ಕೇವಲ 28 ಮಂದಿ ಮಾತ್ರ. ಇನ್ನೂ 227 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿ: ಇಲ್ಲಿನ 190 ಮಂದಿಗೆ ಕೋವಿಡ್ ಸೋಂಕು ತಾಗಿದೆ. 75 ಮಂದಿ ಗುಣಮುಖವಾಗಿದ್ದು, 108 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಸೋಂಕಿಗೆ ಮೊದಲ ಸಾವು ಕಂಡ ಕಲಬುರಗಿಯಲ್ಲಿ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ.
ಯಾದಗಿರಿ: ಈ ಜಿಲ್ಲೆಯಲ್ಲಿ 163 ಮಂದಿ ಸೋಂಕಿತರಿದ್ದಾರೆ. ಒಂಬತ್ತು ಮಂದಿ ಸೋಂಕಿತರು ಗುಣಮುಖವಾಗಿದ್ದರೆ ಓರ್ವ ಸಾವನ್ನಪ್ಪಿದ್ದಾನ.
ಉಡುಪಿ: ಮಹಾರಾಷ್ಟ್ರದ ಪ್ರಯಾಣಿಕರ ಹೊಡೆತಕ್ಕೆ ಸಿಲುಕಿದ ಉಡುಪಿಯಲ್ಲಿ ಸೋಂಕಿತರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. 145 ಮಂದಿ ಸಕ್ರಿಯ ಸೋಂಕಿತರಿದ್ದು, ಓರ್ವ ಸಾವನ್ನಪ್ಪಿದ್ದಾರೆ.
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಒಟ್ಟು ಸೋಂಕಿತರ ಸಂಖ್ಯೆ 146. ಒಟ್ಟಯ 92 ಮಂದಿ ಬಿಡುಗಡೆಯಾಗಿದ್ದಾರೆ. ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ.
ದಾವಣಗೆರೆ: ಇಲ್ಲಿ 142 ಜನರಿಗೆ ಸೋಂಕು ದೃಢವಾಗಿದ್ದು, 79 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದು, 59 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ: ಈ ಜಿಲ್ಲೆಯಲ್ಲಿ 140 ಮಂದಿ ಸೋಂಕಿತರಿದ್ದು, ಯಾರೂ ಗುಣಮುಖರಾಗಿಲ್ಲ. ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕ್ಕಬಳ್ಳಾಪುರ: ಆಂಧ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 131ಕ್ಕೆ ಏರಿಕೆಯಾಗಿದೆ. ಇಬ್ಬರು ಸಾವನ್ನಪ್ಪಿದ್ದು, 19 ಮಂದಿ ಬಿಡುಗಡೆಯಾಗಿದ್ದಾರೆ. ಇನ್ನೂ 110 ಸಕ್ರಿಯ ಪ್ರಕರಣಗಳಿವೆ,
ಬೀದರ್: ಈ ಜಿಲ್ಲೆಯಲ್ಲಿ 120 ಜನರಿಗೆ ಸೋಂಕು ದೃಢವಾಗಿದೆ. 24 ಮಂದಿ ಬಿಡುಗಡೆಯಾಗಿದ್ದರೆ, 93 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಸೋಂಕಿತರಿದ್ದು, ಮೈಸೂರಿನ ಒಟ್ಟು ಸೋಂಕು ಪ್ರಕರಣ 90.
( ಮೇ 28ರ ಸಂಜೆಯ ಆರೋಗ್ಯ ಇಲಾಖೆ ವರದಿ ಆಧಾರಿತ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ