ಇದು ಅಣ್ಣ ತಮ್ಮಂದಿರ ಬಜೆಟ್ : ಕಿಡಿ ಕಾರಿದ ಬಿ.ಎಸ್.ಯಡಿಯೂರಪ್ಪ
Team Udayavani, Jul 5, 2018, 2:04 PM IST
ಬೆಂಗಳೂರು: ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿ ಕಾರಿದ್ದು ‘ಕೊಟ್ಟ ಮಾತಿಗೆ ತಪ್ಪಿ ರೈತ ಸಮುದಾಯಕ್ಕೆ ದ್ರೋಹ ಬಗೆದ ಬಜೆಟ್, ಹಾಸನ ಮತ್ತು ರಾಮನಗರಕ್ಕೆ ಸೀಮಿತವಾಗಿರುವ ಅಣ್ಣತಮ್ಮಂದಿರ ಬಜೆಟ್’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಮುಖ್ಯಮಂತ್ರಿ ಕುಮಾರಸ್ವಾಮಿ ಯಾವುದೇ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಅನೇಕ ಭರವಸೆಗಳನ್ನು ಕೊಟ್ಟು ,37 ಸೀಟು ಗೆದ್ದು ರಾಜ್ಯದ ರೈತ ಸಮುದಾಯಕ್ಕೆ ಮೋಸ ಮಾಡಿದ್ದಾರೆ’ ಎಂದರು.
‘34,000 ಕೋಟಿ ರೂಪಾಯಿ ಹಣವನ್ನು ಎಲ್ಲಿಂದ ತರುತ್ತಾರೆ? ಹೇಗೆ ಹೊಂದಾಣಿಕೆ ಮಾಡುತ್ತೀರಿ ಎನ್ನುವುದನ್ನು ಸುದ್ದಿಗೋಷ್ಠಿ ಮಾಡಿ ರಾಜ್ಯದ ಜನರಿಗೆ ಸ್ಪಷ್ಟನೆ ನೀಡಲಿ’ ಎಂದು ಸವಾಲು ಸಾಕಿದರು.
‘7 ಕೆ.ಜಿಯಿಂದ 5 ಕೆ.ಜಿಗೆ ಇಳಿಸಿದ್ದಾರೆ ಇದು ಸಾಧನೆಯಾ? ವೃದ್ಧಾಪ್ಯ ವೇತನ 6000 ಕೊಡ್ತೇವೆ ಎಂದು ಹೇಳಿ ಈಗ 1000 ಕ್ಕೆ ನಿಲ್ಲಿಸಿದ್ದೀರಾ ಇದು ನಿಮ್ಮ ಸಾಧನೆಯಾ’ ಎಂದು ಪ್ರಶ್ನಿಸಿದರು.
‘ನೇಕಾರರ ಸಾಲ ಮನ್ನಾ ಒಂದು ಶಬ್ಧ ಇಲ್ಲ,ಮೀನುಗಾರರ ಸಾಲ ಮನ್ನಾ ಇಲ್ಲ , ಕರಾವಳಿ, ಮಲೆನಾಡು, ಹೈದ್ರಾಬಾದ್ ಕರ್ನಾಟಕ ಎಲ್ಲಾ ಭಾಗಗಳನ್ನು ಕಡೆಗಣಿಸಿದ್ದಾರೆ ಇದನ್ನು ಬಜೆಟ್ ಅಂತ ಪರಿಗಣಿಸಲು ಸಾಧ್ಯವಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್