ಕುಟುಂಬ ರಾಜಕಾರಣ ದಳ ಪತನಕೆ ಇದೇ ಕಾರಣ


Team Udayavani, May 24, 2019, 3:26 AM IST

kutumba

ಬೆಂಗಳೂರು: “ಕುಟುಂಬ ರಾಜಕಾರಣ’ ಜೆಡಿಎಸ್‌ ಪಕ್ಷಕ್ಕೆ ಲೋಕಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಹೊಡೆತ ನೀಡಿದ್ದು, ಪಕ್ಷದ ಭವಿಷ್ಯದ ಮೇಲೂ ಮಂಕು ಕವಿದಿದೆ.

ಪ್ರಮುಖವಾಗಿ ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್‌ ಸೋಲು ಪಕ್ಷಕ್ಕೆ ಆಘಾತ ಮೂಡಿಸಿದ್ದು, ರೈತರ ಸಾಲ ಮನ್ನಾ ಸೇರಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರ ಒಂದು ವರ್ಷದ ಸಾಧನೆಯೂ ಜೆಡಿಎಸ್‌ ಅಭ್ಯರ್ಥಿಗಳ ಕೈ ಹಿಡಿದಿಲ್ಲ.

ಮೊಮ್ಮಗನಿಗಾಗಿ ಹಾಸನ ಕ್ಷೇತ್ರ ತ್ಯಾಗ ಮಾಡಿದ್ದರಿಂದ ಸಚಿವ ಎಚ್‌.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಸುಮಾರು 1.50 ಲಕ್ಷ ಮತಗಳ ದಾಖಲೆಯ ಗೆಲುವು ದಾಖಲಿಸಿ ಒಂದು ರೀತಿಯಲ್ಲಿ ಜೆಡಿಎಸ್‌ ಮರ್ಯಾದೆ ಉಳಿಸಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಸೇರಿ ಮೂವರು ಶಾಸಕರು, ಒಬ್ಬ ಸಂಸದರು ಕುಟುಂಬದಲ್ಲಿದ್ದರೂ ಮತ್ತೆ ಒಂದೇ ಕುಟುಂಬದ ಮೂವರು ಲೋಕಸಭೆ ಚುನಾ ವಣೆಗೆ ಸ್ಪರ್ಧೆಗೆ ಇಳಿದಿದ್ದು ಜನರಲ್ಲಿ ಆಕ್ರೋಶ ಮೂಡಿ ಸಿದೆ ಎಂಬುದು ಫ‌ಲಿತಾಂಶದಿಂದ ಸಾಬೀತಾಗಿದೆ.

ಕಾಂಗ್ರೆಸ್‌ನ ಮತಗಳು ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್‌ಗೆ ಬಂದಿಲ್ಲ. ಕಾಂಗ್ರೆಸ್‌ ನಾಯಕರ ಒಳ ಏಟು ಸರಿಯಾಗಿಯೇ ಪೆಟ್ಟುಕೊಟ್ಟಿದೆ. ಜೆಡಿಎಸ್‌ ಏಕಾಂಗಿಯಾಗಿಯೇ ಹೋಗಿದ್ದರೆ ಕನಿಷ್ಠ ಮೂರು ಸ್ಥಾನ ಗೆಲ್ಲಬಹುದಿತ್ತು ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಆತಂಕ: ಜೆಡಿಎಸ್‌ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‌ಗೆ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಿತ್ರದುರ್ಗ, ಬೆಂಗಳೂರು ಉತ್ತರ, ರಾಯಚೂರು ಕ್ಷೇತ್ರಗಳಲ್ಲಿ ಲಾಭವಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿರುವುದರಿಂದ ಕಾಂಗ್ರೆಸ್‌ ಮೈತ್ರಿ ಕಡಿದುಕೊಂಡರೆ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ತರುವ ಆತಂಕ ಜೆಡಿಎಸ್‌ಗೆ ಎದುರಾಗಿದೆ.

ಖುದ್ದು ಎರಡು ಸ್ಥಾನದಿಂದ ಒಂದು ಸ್ಥಾನಕ್ಕೆ ಜೆಡಿಎಸ್‌ ಇಳಿದಿದ್ದು, ಕಾಂಗ್ರೆಸ್‌ 10 ರಿಂದ 2ಕ್ಕೆ ಇಳಿದಿದ್ದು ಮೈತ್ರಿ ಮಾಡಿಕೊಂಡಿದ್ದೇ ಕಳಪೆ ಸಾಧನೆಗೆ ಕಾರಣ ಎಂದು ಕಾಂಗ್ರೆಸ್‌ ನಾಯಕರು ಪ್ರತಿಪಾದಿಸಿ ಮೈತ್ರಿ ಕಡಿದುಕೊಳ್ಳಲು ಮುಂದಾದರೆ ಅಥವಾ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಒಂದು ವರ್ಷ ಜನರ ವಿಶ್ವಾಸ ಗಳಿಸಲು ಕುಮಾರಸ್ವಾಮಿ ವಿಫ‌ಲರಾಗಿದ್ದಾರೆ.

ಹೀಗಾಗಿ, ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ಹಠ ಹಿಡಿದರೆ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಲಿದೆ. ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂಬ ನಂಬಿಕೆಯಿಂದ

-ಕಾಂಗ್ರೆಸ್‌ ಹೈಕಮಾಂಡ್‌ ಸಹ ಜೆಡಿಎಸ್‌ ಜತೆ ಮೈತ್ರಿ ಹಾಗೂ ಮುಖ್ಯ ಮಂತ್ರಿ ಸ್ಥಾನ ಜೆಡಿಎಸ್‌ಗೆ ಬಿಟ್ಟುಕೊಡಲು ಒಪ್ಪಿತ್ತು. ಆದರೆ, ಫ‌ಲಿತಾಂಶವು ಜೆಡಿಎಸ್‌ ಜತೆಗಿನ ಮೈತ್ರಿ ಲಾಭ ಕ್ಕಿಂತ ನಷ್ಟವೇ ಹೆಚ್ಚು ಎಂಬುದನ್ನು ಸಾಬೀತುಪಡಿಸಿ ರುವುದರಿಂದ ಜೆಡಿಎಸ್‌ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪುತ್ರನನ್ನು ಗೆಲ್ಲಿಸಿಕೊಂಡ ರೇವಣ್ಣ: ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್‌ ಸೋತರೂ ಹಾಸನದಲ್ಲಿ ತಮ್ಮ ಪುತ್ರ ಪ್ರಜ್ವಲ್‌ನನ್ನು ಗೆಲ್ಲಿಸಿಕೊಳ್ಳುವಲ್ಲಿ ಸಚಿವ ಎಚ್‌.ಡಿ.ರೇವಣ್ಣ ಯಶಸ್ವಿಯಾಗಿದ್ದಾರೆ.

ಮಾಜಿ ಸಚಿವ ಬಿ.ಶಿವರಾಂ, ಮಾಜಿ ಶಾಸಕ ಪುಟ್ಟೇಗೌಡ ಸೇರಿ ಕಾಂಗ್ರೆಸ್‌ನ ಎಲ್ಲ ಮಾಜಿ ಶಾಸಕರು, ಮುಖಂಡರ ಮನೆಗೆ ಭೇಟಿ ನೀಡಿ ಪುತ್ರನನ್ನೂ ಕರೆದೊಯ್ದು ಆಶೀರ್ವಾದ ಕೋರಿದ್ದರು. ತನ್ನದೇ ಆದ ಕಾರ್ಯತಂತ್ರ ರೂಪಿಸಿ ಕ್ಷೇತ್ರದಲ್ಲೇ ಠಿಕಾಣಿ ಹೂಡಿ ಗೆಲುವಿಗೆ ಶ್ರಮಿಸಿದ್ದರು. ತೀವ್ರ ಅಬ್ಬರಕ್ಕೆ ಅವಕಾಶ ಕೊಡದೆ ತೆರೆ ಮೆರೆಯಲ್ಲೇ ತಂತ್ರಗಾರಿಕೆ ಹೆಣೆದಿದ್ದರು. ಒಟ್ಟಾರೆ, ಪ್ರಜ್ವಲ್‌ ಹಾಸನದಲ್ಲಿ ದೇವೇಗೌಡರ ಉತ್ತರಾಧಿಕಾರಿಯಾಗಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.