ಇದು ನನ್ನ ಕೊನೆಯ ಚುನಾವಣೆ: ಸಿಂಗ್
Team Udayavani, Nov 24, 2019, 3:04 AM IST
ಹೊಸಪೇಟೆ: ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂಬ ಹೇಳಿಕೆಗೆ ಈಗಲೂ ಬದ್ಧವಾಗಿದ್ದೇನೆ ಎಂದು ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪುನರುಚ್ಚರಿಸಿದ್ದಾರೆ. ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ಶನಿವಾರ ಪ್ರಚಾರದಲ್ಲಿ ಮಾತನಾಡಿ, ಇದು ಸಾರ್ವತ್ರಿಕ ಚುನಾವಣೆ ಅಲ್ಲ.
ನಾನು ಹೇಳಿದ್ದು ಮೂರು ಬಾರಿ ಶಾಸಕರ ಅವಧಿ ಮುಗಿಸಿದ ನಂತರ ಮುಂದಿನ ಚುನಾವಣೆಯಲ್ಲಿ ಸ್ವರ್ಧಿಸುವುದಿಲ್ಲ ಎಂದಿದ್ದೆ. ಆದರೆ ಇದು ಉಪ ಚುನಾವಣೆ ಆಗಿರುವುದರಿಂದ ಈ ಚುನಾವಣೆ ಯಲ್ಲಿ ಸ್ಪರ್ಧಿಸುವ ಅನಿವಾರ್ಯತೆ ಉಂಟಾಗಿದೆ. ಈ ಮೂರೂವರೆ ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಾದ ವಿಜಯನಗರ ಜಿಲ್ಲೆ, ಏತನೀರಾವರಿ ಯೋಜನೆಗಳು, ಪ್ರತಿ ಊರಿಗೂ ಕುಡಿಯುವ ನೀರಿನ ಯೋಜನೆ ಗಳು ಸೇರಿ ಇತರೆ ಅಭಿವೃದ್ಧಿ ಕೆಲಸ ಮಾಡಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದರು.