Modi ಹೆಸರಿನಲ್ಲಿ ಮತ ಹಾಕಿಸಿಕೊಂಡರೆ ಇದೇ ಹಣೆಬರಹ : ಮಧು ಬಂಗಾರಪ್ಪ ಕಿಡಿ

ಎಲ್ಲವೂ ಧರ್ಮಕ್ಕೆ ಜೋಡಣೆ... ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ಕಿಡಿ

Team Udayavani, Feb 4, 2024, 10:14 PM IST

madhu-bangara

ಶಿವಮೊಗ್ಗ :ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆಗೆ 50 ರೂ ಶುಲ್ಕ ಪಡೆಯುವುದು ಬಿಜೆಪಿ ಸರಕಾರ ಇದ್ದಾಗಲೇ ಆರಂಭವಾಗಿದೆ. ಈ ಮೊದಲು ಪರೀಕ್ಷಾ ಶುಲ್ಕ 60 ರೂಪಾಯಿ ಇತ್ತು, ನಾವು 10 ರೂಪಾಯಿ ಕಡಿಮೆ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಗೃಹಲಕ್ಷ್ಮೀ 2 ಸಾವಿರ ರೂ. ಕೊಟ್ಟು, ಗೃಹ ಜ್ಯೋತಿ ಕೊಟ್ಟು, ಫ್ರೀಯಾಗಿ ಬಸ್ಸಿನಲ್ಲಿ ಓಡಾಡಿಸುತ್ತಿದ್ದೇವೆ. ಹಿಂದಿನ ಸರಕಾರ ಪರೀಕ್ಷಾ ಶುಲ್ಕ 60 ರೂ. ಮಾಡಿದ್ದನ್ನು 50 ರೂ. ಗೆ ಇಳಿಸಿದ್ದೇವೆ. ಮುಂದೆ ಏನಾದರೂ ಇನ್ನೂ ಅನುಕೂಲ ಆದರೆ ಕಡಿಮೆ ಮಾಡುತ್ತೇವೆ. ಹುಡುಕುವ ಕೆಲಸವನ್ನು ನಿಲ್ಲಿಸಬೇಕು ಎಂದು ಬಿಜೆಪಿಗೆ ತಿರುಗೇಟು ನೀಡಿದರು.

ಉತ್ತರ ಕೊಡದಿರುವುದೇ ಒಳ್ಳೆಯದು. ಕುಮಾರಸ್ವಾಮಿ ಅವರು ಪ್ರಶ್ನೆ ಕೇಳುವ ಮೊದಲು ಸ್ವಲ್ಪ ತಿಳಿದುಕೊಳ್ಳುವುದು ಒಳ್ಳೆಯದು. ಇಲ್ಲದಿರುವುದನ್ನು ಹುಡುಕಿ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವಿರೋಧ ಪಕ್ಷದವರಂತಹ ದಡ್ಡರು ಯಾರೂ ಇಲ್ಲ ಎಂದರು.

ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವಿಜ್ಞಾನ ವಿಷಯ ಶುಕ್ರವಾರ ಮಧ್ಯಾಹ್ನ ನಡೆಸುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ,ಬಿಜೆಪಿಯವರು ಎಲ್ಲವನ್ನು ಜೋಡಣೆ ಮಾಡುವ ಕೆಲಸ ಮಾಡುತ್ತಾರೆ. ಕೆಲವು ಧರ್ಮಕ್ಕೆ ಒಲವು ತೋರಿಸುವ ಕೆಲಸ ಮಾಡಿದ್ದಾರೆ ಎಂಬ ಆಪಾದನೆ ಮಾಡಿದ್ದಾರೆ. ಕಳ್ಳ‌ನಿಗೆ ಒಂದು ಸುಳ್ಳು ನೆಪ ಬೇಕು ಅಂತಾರಲ್ಲ ಹಾಗೆ. ಬಿಜೆಪಿಯವರ ಅಂಗ ಸಂಸ್ಥೆ ಆರ್ ಎಸ್ ಎಸ್ ನವರ ಕೆಲಸ ಇದು ಎಂದು ಕಿಡಿ ಕಾರಿದರು.

ಆ ದಿನ ಪಿಯುಸಿ ಪರೀಕ್ಷೆ ಆರಂಭವಾಗುತ್ತದೆ. 1 ರಂದು ಬೆಳಗ್ಗೆ ಪಿಯುಸಿ ಪರೀಕ್ಷೆ ಇರುವುದರಿಂದ, ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಅಲ್ಲ, ಪೂರ್ವ ಸಿದ್ದತಾ ಪರೀಕ್ಷೆ ಆಗಿದ್ದರಿಂದ ಮಧ್ಯಾಹ್ನ ಮಾಡುತ್ತಿದ್ದೇವೆ. ಒಂದು ದಿನ ಮುಂದೆ ಹಾಕಬಹುದು ಅಂತಾ ಹೇಳಬಹುದು. ಒಂದು ದಿನ ಮುಂದೆ ಹಾಕಿದರೆ ಮೂರು‌ ಮೂರು ಪರೀಕ್ಷೆ ಇರುವುದರಿಂದ ಸಮಸ್ಯೆ ಆಗುತ್ತದೆ. ಇಂತಹ ದುರುದ್ದೇಶ, ಯೋಚನೆ ಇವರಿಗೆ ಮಾತ್ರ ಸಾಧ್ಯ. ನೀವು ಏನಾದರೂ ಅಭಿವೃದ್ಧಿ ಕೆಲಸ ಮಾಡಿದರೆ ಅದನ್ನು ಹೇಳಿ. ನಮ್ಮ ಸರಕಾರ ಇದೆ. ನಮ್ಮ ಮಕ್ಕಳಿಗೆ ಅನುಕೂಲ ಆಗುವ ರೀತಿಯಲ್ಲಿ ನಮಗೆ ಆಡಳಿತ ನಡೆಸಲು ಬರುತ್ತದೆ. ಅದನ್ನು ನಾವು ಮಾಡುತ್ತೇವೆ ಎಂದು ಕಿಡಿ ಕಾರಿದರು.

ಫೆ.7 ರಂದು ಕೇಂದ್ರ ಸರಕಾರದ ವಿರುದ್ದ ದೆಹಲಿಯಲ್ಲಿ ಹೋರಾಟ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”26 ಜನರನ್ನು ಇಲ್ಲಿಂದ ಗೆಲ್ಲಿಸಿಕೊಟ್ರಲ್ಲಾ, ಯಾರಾದರೂ ಒಬ್ಬರಾದರೂ‌ ಕೇಂದ್ರ ಸರಕಾರದ ಬಳಿ ಒದರಿದ್ದಾರಾ? ರಾಮನ ತಂದು ಬೀದಿಗೆ ನಿಲ್ಲಿಸಿದರು ಇವರಿಗೆ ಮಾನ ಮರ್ಯಾದೆ ಇದೆಯಾ?” ಎಂದು ಪ್ರಶ್ನಿಸಿದರು.

ಬಂಗಾರಪ್ಪ ಅವರು 35 ವರ್ಷದ‌ ಹಿಂದೆಯೇ ರಾಮನಿಗೆ ಆರಾಧನಾ ಎನ್ನುವ ಕಾರ್ಯಕ್ರಮ ಕೊಟ್ಟಿದ್ದರು. ಬಗರ್ ಹುಕುಂಗೆ ಯಾವೊಬ್ಬ ಸಂಸದ ಧ್ವನಿ ಎತ್ತಲ್ಲ. ಸರಕಾರದ ಹಣ 4 ಲಕ್ಷ ಕೋಟಿ ರೂ. ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ಗಳು, ಮಂತ್ರಿಗಳು ಹೋಗಿ‌ ಕೇಳುತ್ತಾರೆ. ಈಗ ಹೋಗಿ ಹೋರಾಟ ಮಾಡಬೇಕಾಗುತ್ತದೆ. ಯಾರಿಗಾದರೂ ತೊಂದರೆ ಆದರೆ ಹೋರಾಟ ಮಾಡುವುದಿಲ್ಲವಾ? ಹಾಗಾದರೆ ನಾವು ಹೋರಾಟ ಮಾಡೋದು ತಪ್ಪಾ? ಇವರಿಗಂತು ಯೋಗ್ಯತೆ ‌ಇಲ್ಲ. ಮೋದಿ ಅವರ ಹೆಸರಿನಲ್ಲಿ ಮತ ಹಾಕಿಸಿಕೊಂಡರೆ ಇದೇ ಹಣೆಬರಹ ಆಗುವುದು. ಜನರ ಜೊತೆ ಇದ್ದವರ ಮುಖ ನೋಡಿ ಮತ ಹಾಕಬೇಕು. ಮೋದಿ ಅವರ ಹೆಸರನ್ನು ತಗೊಂಡು‌ ಬರುತ್ತಾರಲ್ಲ ಇವರು. ನಾಳೆ ಮೋದಿ ಸಹಾಯ ಮಾಡಲ್ಲ ಅನ್ನುವುದಕ್ಕೆ ಇದೊಂದು ದೊಡ್ಡ ಉದಾಹರಣೆಯಾಗಿದ್ದು, ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ. ನಮ್ಮ ಕರ್ತವ್ಯ ಮಾಡಬೇಕಿದೆ. ನಾನು ಕೂಡಾ ಹೋಗುತ್ತಿದ್ದೇನೆ. ಅಲ್ಲಿ ಹೋಗಿ ಧ್ವನಿ ಎತ್ತುತ್ತೇವೆ ಎಂದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.