ಇದು ನನ್ನ ರಾಜಕೀಯದ ಕೊನೇ ಘಟ್ಟ’


Team Udayavani, Jul 29, 2019, 5:22 AM IST

Ramesh-Kumar-750-B

ಬೆಂಗಳೂರು: ಶಾಸಕರ ಅನರ್ಹತೆ ಪ್ರಕರಣದ ತೀರ್ಪು ನೀಡುವ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಜೈ ಪಾಲ್ ರೆಡ್ಡಿ ಅವರನ್ನು ನೆನೆದು ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಕಣ್ಣೀರು ಹಾಕಿದರು.ರಮೇಶ್‌ ಕುಮಾರ್‌,ವಿಧಾನಸಭೆ ಕಲಾಪ,ಅನರ್ಹ ಶಾಸಕರು

ಪತ್ರಿಕಾಗೋಷ್ಠಿ ಆರಂಭದದಲ್ಲಿಯೇ ಜೈಪಾಲ್ ರೆಡ್ಡಿ ಕುರಿತು ಪ್ರಸ್ತಾಪಿಸಿದ ಅವರು, ಜೈಪಾಲ್ ರೆಡ್ಡಿಯವರು 69 ರಿಂದ 84 ವರೆಗೆ ಆಂಧ್ರಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದರು. ಐದು ಬಾರಿ ಲೋಕಸಭೆ ಸದಸ್ಯರಾಗಿ ಎರಡು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಕೇಂದ್ರ ಸಚಿವರಾಗಿ ಒಳ್ಳೆಯ ಆಡಳಿತ ನೀಡಿದ್ದರೆಂದು ಭಾವುಕರಾಗಿ ಹೇಳಿದರು. ಅವರು ನನ್ನ ಹಿರಿಯ ಸಹೋದರನ ರೀತಿ ಮಾರ್ಗದರ್ಶನ ನೀಡುತ್ತಿದ್ದರು. ಉತ್ತಮ ಸಂಸದೀಯ ಪಟುವಾಗಿದ್ದ ಅವರು ಇಂದು ನಿಧನರಾಗಿದ್ದಾರೆ. ಇಂದು ನನಗೆ ಅತ್ಯಂತ ದುಃಖದ ದಿನ. ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಜೈಪಾಲ್ ರೆಡ್ಡಿ ಪಕ್ಷಾಂತ ನಿಷೇಧ ಕಾಯ್ದೆ ವಿಷಯದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದರು ಎಂದು ದುಃಖದಲ್ಲಿಯೇ ಹೇಳಿದರು. ಇದೇ ವೇಳೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿಬಸು, ಸೋಮನಾಥ ಚಟರ್ಜಿ, ಮೋಹನ್‌ಕುಮಾರ್‌ ಮಂಗಳಂ, ಇಂದ್ರಜಿತ್‌ ಗುಪ್ತಾ, ಚಂದ್ರಜಿತ್‌ ಯಾದವ್‌, ಮಧು ಲಿØಮೆ, ಜಾರ್ಜ್‌ ಫ‌ರ್ನಾಂಡಿಸ್‌, ಮಧು ದಂಡವತೆ ಅವರನ್ನು ನೆನೆದು, ಈ ವ್ಯಕ್ತಿಗಳೆಲ್ಲ ನಮ್ಮ ಸಂಸತ್ತಿನಲ್ಲಿ ಇದ್ದರಾ? ಈಗ ನಾವೆಲ್ಲಿದ್ದೇವೆ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

ರಾಜ್ಯದಲ್ಲಿಯೂ ತುಳಸಿದಾಸ್‌ ದಾಸಪ್ಪ, ಅಬ್ದುಲ್ ನಜೀರ್‌ ಸಾಬ್‌, ಬಿ.ಎ. ಮೊಯಿದ್ದೀನ್‌, ಎ.ಕೆ.ಸುಬ್ಬಯ್ಯ, ಎಂ.ಸಿ ನಾಣಯ್ಯರಂತಹ ಪ್ರತಿಭಾವಂತರು ಸಾರ್ವಜನಿಕ ವಿಷಯದಲ್ಲಿ ಯಾವುದಕ್ಕೂ ಮಣಿದಿರಲಿಲ್ಲ. ಅವರ ಪ್ರಭಾವ ನನ್ನ ಮೇಲಾಗಿದೆ. ಇದು ನನ್ನ ನಾಲ್ಕು ದಶಕಗಳ ರಾಜಕೀಯ ಜೀವನದ ಕೊನೆಯ ಘಟ್ಟ ಆಗಬಹುದು. ವಿಧಾನಸಭಾಧ್ಯಕ್ಷನಾಗಿ ನಾನು ಒತ್ತಡಕ್ಕೆ ಒಳಗಾಗದೇ, ಅತ್ಯಂತ ಭಯ, ಗೌರವ, ಜವಾಬ್ದಾರಿಯನ್ನು ಹೊಟ್ಟೆಯಲ್ಲಿಟ್ಟುಕೊಂಡು ಈ ತೀರ್ಪು ನೀಡಲು ಮುಂದಾಗಿದ್ದೇನೆ ಎಂದು 14 ಜನ ಶಾಸಕರ ಅನರ್ಹತೆಯ ತೀರ್ಪು ಪ್ರಕಟಿಸಿದರು.

ರಾಜೀನಾಮೆ ಸುಳಿವು ನೀಡಿದ ಸ್ಫೀಕರ್‌
ಬೆಂಗಳೂರು: ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಸೋಮವಾರದ ವಿಧಾನಸಭೆಯ ಕಲಾಪದ ನಂತರ ರಾಜೀನಾಮೆ ಸಲ್ಲಿಸುತ್ತಾರಾ? ಸ್ವತ: ರಮೇಶ್‌ಕುಮಾರ್‌ ಅವರೇ ಈ ಬಗ್ಗೆ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ವಿರುದ್ಧವೂ ಅವರ ಪಕ್ಷದ ಸದಸ್ಯರು ದೂರು ಸಲ್ಲಿಸಿದ್ದಾರೆ. ಶನಿವಾರ ದೂರು ಸಲ್ಲಿಕೆಯಾಗಿದ್ದು, ಈ ಬಗ್ಗೆ ಮುಂದೆ ಬರುವವರು ನೋಡಿಕೊಳ್ಳುತ್ತಾರೆ ಎನ್ನುವ ಮೂಲಕ ಯಡಿಯೂರಪ್ಪ ಅವರ ವಿಶ್ವಾಸಮತ ಯಾಚನೆ ಹಾಗೂ ನಂತರ ನಡೆಯುವ ಧನ ವಿನಿಯೋಗ ವಿಧೇಯಕ ಅಂಗೀಕಾರವಾದ ಮೇಲೆ ತಾವು ಸ್ಪೀಕರ್‌ ಹುದ್ದೆಗೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬಿಜೆಪಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೂ ಮೊದಲೇ ರಮೇಶ್‌ ಕುಮಾರ್‌ ಗೌರವಯುತವಾಗಿ ತಮ್ಮ ಹುದ್ದೆಯಿಂದ ನಿರ್ಗಮಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಸೋಮವಾರದ ವಿಶ್ವಾಸಮತಯಾಚನೆ ಹಾಗೂ ಧನ ವಿನಿಯೋಗ ವಿಧೇಯಕ ಅಂಗೀಕಾರದ ನಂತರ ಸ್ವಯಂ ಪ್ರೇರಿತರಾಗಿ ರಾಜೀನಾಮೆ ಸಲ್ಲಿಸಿ, ಸ್ಪೀಕರ್‌ ಹುದ್ದೆಯ ವಿದಾಯ ಭಾಷಣ ಮಾಡುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ತೀರ್ಪಿನಲ್ಲಿ ಪಕ್ಷಪಾತ ಮಾಡಿಲ್ಲ

ಬೆಂಗಳೂರು: ‘ನಾನು ತೀರ್ಪು ನೀಡುವಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ. ಹಿಂದಿನ ಎಲ್ಲ ಚರಿತ್ರಾರ್ಹ ತೀರ್ಪು, ಆಯಾಮಗಳನ್ನು ಗಮನಿಸಿ ಈ ತೀರ್ಪು ನೀಡಿದ್ದೇನೆ’ ಎಂದು ಸ್ಪೀಕರ್‌ ರಮೇಶ್‌ಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಪಕ್ಷಾಂತರ ನಿಷೇಧದ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳ ಸ್ಪೀಕರ್‌ಗಳು ತೆಗೆದುಕೊಂಡ ತೀರ್ಮಾನ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶರದ್‌ ಯಾದವ್‌ ಪ್ರಕರಣದಲ್ಲಿ ತೆಗೆದುಕೊಂಡ ತೀರ್ಪು, ರವಿ ನಾಯ್ಕ ವರ್ಸಸ್‌ ಭಾರತ ಸರ್ಕಾರ ಪ್ರಕರಣದಲ್ಲಿನ ತೀರ್ಪು ಹಾಗೂ ತಮಿಳುನಾಡಿನಲ್ಲಿ ಎಐಎಡಿಎಂಕೆ ಶಾಸಕರು ರಾಜೀನಾಮೆ ಸಲ್ಲಿಸಿ ರಾಜ್ಯಪಾಲರ ಬಳಿ ತೆರಳಿದ ನಂತರ ಅಲ್ಲಿನ ಸ್ಪೀಕರ್‌ ತೆಗೆದುಕೊಂಡ ತೀರ್ಪು ಆಧರಿಸಿ 14 ಶಾಸಕರನ್ನು ಅನರ್ಹಗೊಳಿಸುವುದಾಗಿ ಹೇಳಿದರು.

ಅನರ್ಹಗೊಂಡ ಶಾಸಕರದ್ದು ಏನಾದರೂ ಆಕ್ಷೇಪಗಳಿದ್ದರೆ, ಅವರು ಕೋರ್ಟ್‌ ಮುಂದೆ ತಮ್ಮ ವಾದ ಮಾಡಲು ಅವಕಾಶವಿದೆ. ನನಗಿರುವ ಅಧಿಕಾರ ಹಾಗೂ ಕಾನೂನಿನ ಮಾಹಿತಿಯಡಿಯಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ. ಅವರ ಮುಂದಿನ ಹೋರಾಟದ ಬಗ್ಗೆ ನಾನು ಮಾತನಾಡುವುದಿಲ್ಲ. ಅದಕ್ಕೆ ಕೋರ್ಟ್‌ಗಳಿವೆ ಎಂದರು

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.