ಈ ಬಾರಿ ಕಂಠೀರವದಲ್ಲೇ ಬೆಂಗ್ಳೂರು ಬುಲ್ಸ್‌ ಪಂದ್ಯ


Team Udayavani, Jun 1, 2018, 6:00 AM IST

z-40.jpg

ಬೆಂಗಳೂರು: ರಾಜ್ಯ ಕಬಡ್ಡಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ. ಆರನೇ ಆವೃತ್ತಿ ಪ್ರೊಕಬಡ್ಡಿ ಕೂಟದ ಬೆಂಗಳೂರು ಬುಲ್ಸ್‌ ತಂಡದ ತವರಿನ ಪಂದ್ಯಗಳಿಗೆ ಈ ಬಾರಿ ಉದ್ಯಾನನಗರಿಯ ಶ್ರೀಕಂಠೀರವ ಒಳಾಂಗಣ ಕ್ರೀಡಾಂಗಣವೇ ಆತಿಥ್ಯ ವಹಿಸಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಸ್ವತಃ ಬೆಂಗಳೂರು ಬುಲ್ಸ್‌ ತಂಡದ ಮೂಲಗಳು ಉದಯವಾಣಿಗೆ ಮಾಹಿತಿ ನೀಡಿವೆ. 5ನೇ ಆವೃತ್ತಿ ಪ್ರೊ ಕಬಡ್ಡಿ ವೇಳೆ ಕ್ರೀಡಾಂಗಣ ಸಿಗದಿದ್ದುದರಿಂದ ಬೆಂಗಳೂರು ಬುಲ್ಸ್‌ ತಂಡದ ಎಲ್ಲ ಪಂದ್ಯಗಳು ನಾಗ್ಪುರಕ್ಕೆ ವರ್ಗಾವಣೆಯಾಗಿದ್ದವು. ಇದರಿಂದ ರಾಜ್ಯದ ಕಬಡ್ಡಿ ಅಭಿಮಾನಿಗಳಿಗೆ ಭಾರೀ ನಿರಾಶೆಯಾಗಿತ್ತು. ಆದರೆ ಈ ಸಲ ಹಾಗೆ ಆಗುವುದಿಲ್ಲ. ರಾಜ್ಯ ಕ್ರೀಡಾ ಇಲಾಖೆ ಕಬಡ್ಡಿ ಅಭಿ ಮಾನಿಗಳ ತುಡಿತವನ್ನು ಅರ್ಥ ಮಾಡಿ ಕೊಂಡು
ಪಂದ್ಯದ ಆತಿಥ್ಯಕ್ಕೆ ಕ್ರೀಡಾಂಗಣ ಬಿಟ್ಟುಕೊಡಲಿದೆ ಎನ್ನುವ ವಿಶ್ವಾಸವನ್ನು ಬೆಂಗಳೂರು ಬುಲ್ಸ್‌ ಮೂಲಗಳು ವ್ಯಕ್ತಪಡಿಸಿವೆ.

ಮೂಲಗಳು ಹೇಳಿರುವುದೇನು?:
ಪ್ರಸ್ತುತ ಆವೃತ್ತಿ ಪ್ರೊಕಬಡ್ಡಿ ವೇಳಾಪಟ್ಟಿ ಇನ್ನಷ್ಟೆ ಪ್ರಕಟವಾಗಬೇಕಿದೆ. ಬೆಂಗಳೂರು ಆವೃತ್ತಿಯ ಪಂದ್ಯಗಳ ದಿನಾಂಕ ನೋಡಿಕೊಂಡು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಆತಿಥ್ಯಕ್ಕೆ ಸ್ಥಳಾವಕಾಶ ನೀಡುವಂತೆ ಕೋರಿ ಮನವಿ ಮಾಡುತ್ತೇವೆ. ಕ್ರೀಡಾ ಇಲಾಖೆ ಕಬಡ್ಡಿಗೆ ಪ್ರೋತ್ಸಾಹ ಮಾಡುತ್ತದೆ ಎನ್ನುವ ವಿಶ್ವಾಸ ನಮಗಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ ನಮಗೆ ಪಂದ್ಯವನ್ನು ಆಯೋಜಿಸುವ ಅವಕಾಶ ಸಿಗಲಿಲ್ಲ. ಇದರಿಂದಾಗಿ ನಮ್ಮ ತವರಿನ ಅಭಿಮಾನಿಗಳನ್ನು ಕಳೆದುಕೊಳ್ಳ ಬೇಕಾಯಿತು. ಜತೆಗೆ ತಂಡದ ಒಟ್ಟಾರೆ ಪ್ರದರ್ಶನದ ಮೇಲೆ ವ್ಯತಿರಿಕ್ತ ಪರಿಣಾಮವನ್ನೂ ಬೀರಿತು ಎಂದು ಬುಲ್ಸ್‌ ಮೂಲಗಳು ತಿಳಿಸಿವೆ.

ಕಳೆದ ವರ್ಷ ಬೆಂಗಳೂರಿಗೆ ಆತಿಥ್ಯ ತಪ್ಪಿದ್ದೇಕೆ?:
2017ರಲ್ಲಿ ಬೆಂಗಳೂರು ಬುಲ್ಸ್‌ 5ನೇ ಬಾರಿಗೆ ತವರಿನಲ್ಲಿ ಪಂದ್ಯಗಳ ಆತಿಥ್ಯಕ್ಕಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಮನವಿ ಸಲ್ಲಿಸಿತ್ತು. ಆದರೆ ಕ್ರೀಡಾ ಇಲಾಖೆ ಅದನ್ನು ತಿರಸ್ಕರಿಸಿತ್ತು. ಕ್ರೀಡಾಂಗಣವನ್ನು ಉನ್ನತ ದರ್ಜೆಗೆ ಏರಿಸಲಾಗುತ್ತಿದೆ. ಹೀಗಾಗಿ ಇಲ್ಲಿ ಪ್ರೊ ಕಬಡ್ಡಿ ಆತಿಥ್ಯಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿತ್ತು. ಇದರಿಂದಾಗಿ ಬೆಂಗಳೂರು ಬುಲ್ಸ್‌ ಪಂದ್ಯಗಳನ್ನು ಎಲ್ಲಿ ನಡೆಸು ವುದು? ಎನ್ನುವ ತಲೆ ನೋವು ಫ್ರಾಂಚೈಸಿಯನ್ನು ಕಾಡಿತ್ತು. ಕಂಠೀರವದಲ್ಲಿ ಪಂದ್ಯಕ್ಕೆ ಅವಕಾಶ ಸಿಗದಿದ್ದಾಗ ಬೆಂಗಳೂರಿನ ಕೋರಮಂಗಲದಲ್ಲಿ ಪಂದ್ಯ ಗಳನ್ನು ನಡೆಸುವ
ಕುರಿತ ಚಿಂತನೆ ನಡೆಯಿತಾದರೂ ಅದು ಸಾಧ್ಯವಾಗಿರಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಬೆಂಗಳೂರು ತಂಡದ ಎಲ್ಲ ಪಂದ್ಯಗಳನ್ನು ನಾಗ್ಪುರಕ್ಕೆ ವರ್ಗಾವಣೆ ಮಾಡಲಾಗಿತ್ತು.

ವಾಣಿಜ್ಯ ಉದ್ದೇಶಕ್ಕೆ ನಡೆಸುವ ಫ‌ುಟ್‌ಬಾಲ್‌ಗೆ ಕಂಠೀರವ ನೀಡುವುದಾದರೆ ಪ್ರೊ ಕಬಡ್ಡಿಗೆ ಏಕೆ ನೀಡಬಾರದು? ಕ್ರೀಡಾ ಇಲಾಖೆ ಈ ಬಾರಿ ರಾಜ್ಯ ಕಬಡ್ಡಿ ಅಭಿಮಾನಿಗಳನ್ನು ನಿರಾಶೆ ಮಾಡುವುದಿಲ್ಲ ಎನ್ನುವ ನಂಬಿಕೆ ಇದೆ.
● ಬಿ.ಸಿ.ರಮೇಶ್‌, ಬುಲ್ಸ್‌ ಕೋಚ್‌

ಹೇಮಂತ್ ಸಂಪಾಜೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.