ಹೋರಾಟ ಮಾಡಿದವರಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್
Team Udayavani, Oct 24, 2019, 3:03 AM IST
ಬೆಂಗಳೂರು: ದೆಹಲಿ ಹೈಕೋರ್ಟ್ನಿಂದ ನನಗೆ ಜಾಮೀನು ಪಡೆಯಲು ಸಹಕರಿಸಿದವರಿಗೆ ನನ್ನ ನಮಸ್ಕಾರ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತಿಹಾರ್ ಜೈಲ್ನಿಂದ ಹೊರ ಬಂದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಯಾರು ನನಗೋಸ್ಕರ ರಸ್ತೆಗಿಳಿದು ಹೋರಾಟ ಮಾಡಿದ್ದಾರೆಯೋ ಅವರಿಗೆ ನನ್ನ ಧನ್ಯವಾದಗಳು.
ನನ್ನ ಪಕ್ಷ, ಕಾರ್ಯಕರ್ತರು, ನಾಯಕರು, ವಿರೋಧ ಪಕ್ಷದ ಧುರೀಣರು ನನಗೋಸ್ಕರ ಹೋರಾಟ ಮಾಡಿದ್ದಾರೆ. ನನ್ನ ಪರವಾಗಿ ಬೆಂಗಳೂರು, ದೆಹಲಿಯಲ್ಲಿ ವಾದ ಮಾಡಿರುವ ವಕೀಲರಿಗೂ ಧನ್ಯವಾದ. ನನ್ನ ಬಂಧನದಿಂದ ಕೆಲವರು ಸಂತೋಷ ಪಟ್ಟಿದ್ದಾರೆ. ಕೆಲವರು ದುಃಖ ಪಟ್ಟಿದ್ದಾರೆ. ಗುರುವಾರ ವಕೀಲರನ್ನು ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ ಎಲ್ಲ ವಿಷಯ ಮಾತನಾಡುತ್ತೇನೆ’ ಎಂದು ಹೇಳಿದರು.
ದೆಹಲಿ ಹೈಕೋರ್ಟ್ ಡಿ.ಕೆ.ಶಿವಕುಮಾರ್ಗೆ ನೀಡಿರುವ ಜಾಮೀನು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನಸಾಮಾನ್ಯರ ನಂಬಿಕೆಯನ್ನು ಇನ್ನಷ್ಟು ಹೆಚ್ಚಿಸಿದ್ದು, ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ.
-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ. ಸೋಮವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿ ಜಾಮೀನು ಸಿಗುವ ಆಶಯ ವ್ಯಕ್ತಪಡಿಸಿದ್ದೆ.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ