ನಕ್ಸಲ್ ಕಾರ್ಯಾಚರಣೆಯಲ್ಲಿ ಮೃತಪಟ್ಟವರು ಚಿಕ್ಕಮಗಳೂರಿನವರಲ್ಲ
Team Udayavani, Nov 3, 2019, 3:00 AM IST
ಚಿಕ್ಕಮಗಳೂರು: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಂಚಕಟ್ಟಿ ಅರಣ್ಯದಲ್ಲಿ ಆರು ದಿನದ ಹಿಂದೆ ಎಎನ್ಎಫ್ನ ಥಂಡರ್ಬೋಲ್ಟ್ ತಂಡ ನಡೆಸಿದ ದಾಳಿಯಲ್ಲಿ ಮೃತಪಟ್ಟವರು ಚಿಕ್ಕಮಗಳೂರು ಜಿಲ್ಲೆಯವರಲ್ಲ ಎಂಬುದು ದೃಢಪಟ್ಟಿದೆ. ನಕ್ಸಲ್ ಚಳವಳಿಯಲ್ಲಿ ಸಕ್ರಿಯರಾಗಿದ್ದು, ಭೂಗತರಾಗಿದ್ದ ಜಿಲ್ಲೆಯ ನಕ್ಸಲರಿಬ್ಬರು ಕೇರಳದಲ್ಲಿ ಎಎನ್ಎಫ್ ತಂಡ ಅ.28ರಂದು ನಡೆಸಿದ ಕಾರ್ಯಾಚರಣೆ ವೇಳೆ ಗುಂಡಿನ ದಾಳಿಗೆ ಹತರಾಗಿದ್ದಾರೆ ಎಂದು ಹೇಳಲಾಗುತ್ತಿತ್ತು.
ಆದರೆ, ಮೃತಪಟ್ಟವರು ಎ.ಎಸ್.ಸುರೇಶ್ ಅಲ್ಲ ಎಂಬುದು ತಿಳಿದು ಬಂದಿದೆ. ಈ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಹರೀಶ್ ಪಾಂಡೆ ಅವರೇ ಮಂಗಳವಾರ ಬೆಳಗ್ಗೆ ಮಾಹಿತಿ ನೀಡಿದ್ದರು. ನಂತರ ಸಂಜೆ ವೇಳೆಗೆ ಸ್ಪಷ್ಟನೆ ನೀಡಿದ್ದ ಅವರು, ಮೃತಪಟ್ಟವರು ಚಿಕ್ಕಮಗಳೂರು ಜಿಲ್ಲೆಯವರಲ್ಲ ಎಂದು ತಿಳಿಸಿದ್ದರು.
ಆದರೂ, ಮೂಡಿಗೆರೆ ತಾಲೂಕು ಅಂಗಡಿ ಗ್ರಾಮದ ಎ.ಎಸ್.ಸುರೇಶ್ ಸಹೋದರ ಮಂಜುನಾಥ್, ಅವರ ಕುಟುಂಬದ ಸ್ನೇಹಿತರಾದ ವಕೀಲ ಹೂವಪ್ಪ ಮತ್ತು ಅಂಗಡಿ ಚಂದ್ರು ಕೇರಳಕ್ಕೆ ತೆರಳಿದ್ದರು. ಅಲ್ಲಿ ಮೃತದೇಹ ಪರಿಶೀಲಿಸಿದ ಬಳಿಕ ಮೃತಪಟ್ಟಿರುವ ವ್ಯಕ್ತಿ ಎ.ಎಸ್.ಸುರೇಶ್ ಅಲ್ಲ ಎಂಬುದು ಖಚಿತವಾಯಿತು ಎಂದು ಕೇರಳಕ್ಕೆ ತೆರಳಿದ್ದ ವಕೀಲ ಹೂವಪ್ಪ “ಉದಯವಾಣಿ’ಗೆ ತಿಳಿಸಿದ್ದಾರೆ.
ಎ.ಎಸ್.ಸುರೇಶ್ 2004ರಿಂದಲೇ ನಕ್ಸಲ್ ಚಳವಳಿಗೆ ಸೇರ್ಪಡೆಗೊಂಡಿದ್ದರು. ಚಿಕ್ಕಮಗಳೂರಿನಲ್ಲಿ ಈ ಹಿಂದೆ ಪ್ರಗತಿಪರ ಚಳವಳಿಗಳಲ್ಲಿ ಗುರುತಿಸಿಕೊಂಡಿದ್ದು, ನಂತರ ಮಲೆನಾಡಿನಲ್ಲಿ ಸಕ್ರಿಯವಾಗಿದ್ದ ನಕ್ಸಲ್ ಚಳವಳಿ ಸೇರಿ ಭೂಗತರಾಗಿದ್ದರು. ಮಲೆನಾಡಿನಲ್ಲಿ ನಕ್ಸಲ್ ಚಳವಳಿ ಸಕ್ರಿಯವಾಗಿದ್ದ ಸಂದರ್ಭದಲ್ಲಿ ಶ್ರೀಮತಿ ಹಾಗೂ ಸುರೇಶ್ ವಿವಿಧ ತಂಡಗಳಲ್ಲಿ ಗುರುತಿಸಿಕೊಂಡಿದ್ದರು. ಸುರೇಶ್ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 21 ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ