![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಅಹಿಂದ ಹೆಸರು ಹೇಳಿ ಅಧಿಕಾರ ಪಡೆದವರು ಈಗ ಸಮಾಜವನ್ನು ಮರೆತಿದ್ದಾರೆ; ಪ್ರಣವಾನಂದ ಶ್ರೀ
Team Udayavani, Sep 9, 2023, 2:56 PM IST
![ಅಹಿಂದ ಹೆಸರು ಹೇಳಿ ಅಧಿಕಾರ ಪಡೆದವರು ಈಗ ಸಮಾಜವನ್ನು ಮರೆತಿದ್ದಾರೆ; ಪ್ರಣವಾನಂದ ಶ್ರೀ](https://www.udayavani.com/wp-content/uploads/2023/09/prnavanada-620x342.jpg)
ಬೆಂಗಳೂರು: ಅಹಿಂದ ಹೆಸರು ಹೇಳಿಕೊಂಡು ಅಧಿಕಾರ ಸ್ವೀಕಾರ ಮಾಡಿದವರು ಈಗ ಹಿಂದುಳಿದ ಸಮಾಜವನ್ನೇ ಮರೆತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸಿದೆ ಈಡಿಗ ಸಮುದಾಯದ ಸ್ವಾಮೀಜಿ ಪ್ರಣವಾನಂದ ಶ್ರೀಗಳ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಈಡಿಗ, ಬಿಲ್ಲವ, ನಾಮಧರಿ, ದೀವರು ಮತ್ತು ಅತೀ ಹಿಂದುಳಿದವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಮಾವೇಶದಲ್ಲಿ ಅವರು ಮಾತನಾಡಿದರು.
ಅಹಿಂದ ಸ್ಥಾಪನೆಗಾಗಿ ಈಡಿಗ ಸಮುದಾಯದ ಆರ್.ಎಲ್. ಜಾಲಪ್ಪ, ಜೆ.ಪಿ.ನಾರಾಯಣ ಸ್ವಾಮಿ ಅವರು ಆರ್ಥಿಕ ಸಹಾಯ ನೀಡಿದರು. ಆದರೆ ಆ ಸಮುದಾಯವನ್ನು ಬಳಸಿಕೊಂಡು ಏಣಿ ಮಾಡಿಕೊಂಡರು. ಆದರೆ ಇಂತಹ ಸಮುದಾಯ ದೂರ ಇರಿಸಿದ್ದಾರೆ. ಅಹಿಂದ ಹೆಸರಿನಲ್ಲಿ ಒಗ್ಗೂಡಿಸುವುದಾಗಿ ಹೇಳಿಕೊಂಡವರು ಈಗ ಅಹಿಂದ ಸಮುದಾಯ ಮರೆತಿದ್ದಾರೆ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಮ್ಮನೆ ಇರುವುದಿಲ್ಲ ಎಂದು ಎಚ್ಚರಿಸಿದರು.
ಕುಮಟಾ, ಗಂಗಾವತಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಸ್ಪರ್ಧೆಗೆ ಅವಕಾಶ ಕೇಳಲಾಗಿತ್ತು. ಆದರೆ ಅದನ್ನೂ ನಿರಾಕರಿಸಲಾಗಿದೆ. ಜತೆಗೆ ಬಿ.ಕೆ.ಹರಿಪ್ರಸಾದ್ ಅವರನ್ನು ಕಾಂಗ್ರೇಸ್ ಹೈಕಮಾಂಡ್ ಸಚಿವರನ್ನಾಗಿ ಮಾಡಲು ಹೊರಟ್ಟಿತ್ತು. ಆದರೆ ಇಲ್ಲಿದ್ದವರು ಅವರು ಸಚಿವರಾಗುವ ಅವಕಾಶ ತಪ್ಪಿಸಿದರು ಎಂದು ಕಿಡಿಕಾರಿದರು.
ಇದನ್ನೂ ಓದಿ:MLA: ಹುಟ್ಟುಹಬ್ಬದ ಪ್ರಯುಕ್ತ ಜೀವಂತ ಹಾವನ್ನೇ ಕುತ್ತಿಗೆಗೆ ಸುತ್ತಿಕೊಂಡು ಬಂದ ಶಾಸಕ.!
ಈ ಹಿಂದೆ ದೇವರಾಜು ಅರಸು ಸಚಿವ ಸಂಪುಟದಲ್ಲಿ ಎಸ್ ಬಂಗಾರಪ್ಪ ಅವರನ್ನು ಸಚಿವ ಸ್ಥಾನದಿಂದ ತಪ್ಪಿಸುವ ಕೆಲಸ ಕೇಂದ್ರದಿಂದ ನಡೆದಿತ್ತು. ಆದರೆ ಅದಕ್ಕೆ ಅರಸು ಅವರು ಅವಕಾಶ ನೀಡಲಿಲ್ಲ. ಸಣ್ಣ ಅತಿ ಸಣ್ಣವರ್ಗಕ್ಕೆ ಅವಕಾಶ ನೀಡುತ್ತೇನೆ ಎಂದು ಹೇಳಿ ಬಂಗಾರಪ್ಪ ಅವರಿಗೆ ಅವಕಾಶ ಕಲ್ಪಿಸಿದರು. ದೇವರಾಜು ಅರಸು ನಿಜವಾದ ಅಹಿಂದ ಮುಖಂಡ ಎಂದರು.
ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಜಿಲ್ಲಾ ಮತ್ತು ತಾಲೂಕು ಮಟ್ಟಕ್ಕೆ ತೆಗೆದುಕೊಂಡು ಹೋಗುವುದಾಗಿ ಪ್ರಣವಾನಂದ ಶ್ರೀ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.