ಎಸ್ಡಿಪಿಐ-ಪಿಎಫ್ಐ ಶಾಶ್ವತ ನಿಷೇಧಕ್ಕೆ ಚಿಂತನೆ
Team Udayavani, Jan 19, 2020, 3:05 AM IST
ಶಿವಮೊಗ್ಗ: ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಯ ಶಾಶ್ವತ ನಿಷೇಧಕ್ಕೆ ಮೊದಲಿನಿಂದಲೂ ಚಿಂತನೆ ನಡೆದಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎಸ್ಡಿಪಿಐ ಮತ್ತು ಪಿಎಫ್ಐ ದೇಶದ್ರೋಹಿ ಸಂಘಟನೆಗಳು ಎಂದು ಮತ್ತೂಮ್ಮೆ ರುಜುವಾತಾಗಿದೆ ಎಂದರು.
ಈ ಸಂಘಟನೆಗಳಿಗೆ ಸೇರಿದವರು ಸಂಸದ ತೇಜಸ್ವಿ ಸೂರ್ಯ ಮತ್ತು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಕೊಲೆಗೆ ಸಂಚು ರೂಪಿಸಿದ್ದರು. ಮಡಿಕೇರಿಯಲ್ಲಿ ಕುಟ್ಟಪ್ಪನವರ ಕೊಲೆಯಾದಾಗಿನಿಂದ ಈ ಸಂಘಟನೆಗಳನ್ನು ಬಿಜೆಪಿ ವಿರೋ ಧಿಸುತ್ತಾ ಬಂದಿದೆ. ಬೆಂಗಳೂರಿನಲ್ಲಿ ರುದ್ರೇಶ್ ಕೊಲೆಯಾದಾಗಲೂ ಎಸ್ಡಿಪಿಐ ಕೈವಾಡವಿದೆ ಎಂದು ಹೇಳಲಾಗಿತ್ತು.
ಈಗ ಇದು ಮತ್ತೂಮ್ಮೆ ರುಜುವಾತಾಗಿದೆ. ಹಾಗಾಗಿ ದೇಶದ್ರೋಹಿ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿ ಸುವ ಅಗತ್ಯವಿದೆ ಎಂದು ಹೇಳಿದರು. ಪಠ್ಯ-ಪುಸ್ತಕದಿಂದ ಟಿಪ್ಪು ವಿಷಯ ಕೈಬಿಡುವ ಕುರಿತು ಡಿಎಸ್ಇಆರ್ಟಿ ಮತ್ತು ಇತಿಹಾಸ ತಜ್ಞರ ಸಮಿತಿ ವರದಿ ನೀಡಿದೆ. ಭಾನುವಾರ ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಪ್ರತಿ ವರ್ಷ ಆಗಸ್ಟ್-ಸೆಪ್ಟಂಬರ್ ಹೊತ್ತಿಗೆ ಶಾಲೆಗಳಲ್ಲಿ ಪಠ್ಯ ಪುಸ್ತಕ ಲಭಿಸುವಂತಾಗುತ್ತಿತ್ತು. ಆದರೆ ಈ ಬಾರಿ ಈಗಾಗಲೇ ಪಠ್ಯಪುಸ್ತಕ ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. 2020-21ನೇ ಸಾಲಿನ ಪಠ್ಯಪುಸ್ತಕ ತಯಾರಿಕೆಗೆ ಟೆಂಡರ್ ಕರೆದಾಗಿದೆ. ಶೈಕ್ಷಣಿಕ ವರ್ಷದ ಶಾಲಾರಂಭದ ಮೊದಲ ದಿನ ಮಕ್ಕಳು ಶಾಲೆಗೆ ಬಂದಾಗ ಅವರಿಗೆ ಪಠ್ಯಪುಸ್ತಕ ಮತ್ತು ಯೂನಿಫಾರಂ ಅನ್ನು ನೀಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್